ವಂದೇ ಮಾತರಂ ಪೂರ್ಣ ಗೀತೆ ವಿವಾದ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ  ಜನಾರ್ದನ ರೆಡ್ಡಿ

ರಾಜ್ಯದಲ್ಲಿ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ಆಲಾಪನೆಗೆ ಸಂಬಂಧಿಸಿದಂತೆ ಹೊಸ ವಿವಾದ ಭುಗಿಲೆದ್ದಿದೆ. ಗೀತೆಯನ್ನು ಪೂರ್ಣವಾಗಿ ಹಾಡುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಸಚಿವ ಶಿವರಾಜ ತಂಗಡಗಿ ಅವರ ಹೇಳಿಕೆಯನ್ನು ಶಾಸಕ ಜನಾರ್ದನ ರೆಡ್ಡಿ ತೀವ್ರವಾಗಿ ಖಂಡಿಸಿದ್ದಾರೆ. ಗಂಗಾವತಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕೇವಲ ತನ್ನ ವೋಟ್‌ಬ್ಯಾಂಕ್ ರಾಜಕಾರಣ ಹಾಗೂ ಕೋಮು ಓಲೈಕೆಗಾಗಿ ದೇಶವಿರೋಧಿ ಧೋರಣೆ ತಳೆದಿದೆ ಎಂದು ಆರೋಪಿಸಿದರು.

ದೇಶಕ್ಕಾಗಿ ಮತ್ತು ಭಾರತ ಮಾತೆಗೆ ಗೌರವ ಸಲ್ಲಿಸಲು ಕೇವಲ ಮೂರು ನಿಮಿಷಗಳ ಕಾಲ ವಂದೇ ಮಾತರಂ ಗೀತೆಯನ್ನು ಪೂರ್ಣವಾಗಿ ಹಾಡುವುದರಲ್ಲಿ ತಪ್ಪೇನಿದೆ ಎಂದು ರೆಡ್ಡಿ ಪ್ರಶ್ನಿಸಿದರು. “ಪೂರ್ಣ ಗೀತೆ ಹಾಡಿದರೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವುದು ದೇಶದ ಕಾನೂನು ಮತ್ತು ದೇಶಭಕ್ತಿಗೆ ಮಾಡುವ ಅಪಮಾನ. ನಾಡಗೀತೆ ಮಾದರಿಯಲ್ಲೇ ವಂದೇ ಮಾತರಂ ಗೀತೆಯನ್ನು ಪೂರ್ಣವಾಗಿ ಹಾಡಲು ಅವಕಾಶ ನೀಡಬೇಕು. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದವರ ವಿರುದ್ಧ ಮೆದು ಧೋರಣೆ ತಳೆಯುವ ಸರ್ಕಾರ, ದೇಶಭಕ್ತಿ ಗೀತೆ ಹಾಡಿದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗಿರುವುದು ಖಂಡನೀಯ,” ಎಂದು ಕಿಡಿಕಾರಿದರು.

ಇದೇ ವೇಳೆ, ವಂದೇ ಮಾತರಂ ಗೀತೆಯ ಕೊನೆಯ ಚರಣಗಳು ಬಲಪಂಥೀಯರಿಗೆ ಸೇರಿದ್ದು ಎಂದಿದ್ದ ಶಾಸಕ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರೆಡ್ಡಿ, ಬಂಕಿಮಚಂದ್ರ ಚಟರ್ಜಿ ಅವರು ರಚಿಸಿದ ಈ ಐತಿಹಾಸಿಕ ಗೀತೆಯ ಹಿನ್ನೆಲೆಯನ್ನು ಅರಿಯದೆ ಜವಾಬ್ದಾರಿರಹಿತವಾಗಿ ಮಾತನಾಡುತ್ತಿದ್ದಾರೆ ಎಂದು ಏಕವಚನದಲ್ಲೇ ತೀವ್ರ ವಾಗ್ದಾಳಿ ನಡೆಸಿದರು. ಸ್ವಾತಂತ್ರ್ಯ ಸಂಗ್ರಾಮದ ಅವಧಿಯಲ್ಲಿದ್ದ ಕಾಂಗ್ರೆಸ್‌ಗೂ, ಇಂದಿನ ಸ್ವಾರ್ಥ ರಾಜಕಾರಣದ ಕಾಂಗ್ರೆಸ್‌ಗೂ ಅಂತರವಿದ್ದು, ಇಂದಿನ ನಡೆ ದೇಶದ ಭದ್ರತೆಗೆ ಅಪಾಯಕಾರಿ ಎಂದು ಅವರು ಎಚ್ಚರಿಸಿದರು.

Related Posts

lja5nqb73ba7bxod16

env6k3k

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

You Missed

ವಂದೇ ಮಾತರಂ ಪೂರ್ಣ ಗೀತೆ ವಿವಾದ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ  ಜನಾರ್ದನ ರೆಡ್ಡಿ

ವಂದೇ ಮಾತರಂ ಪೂರ್ಣ ಗೀತೆ ವಿವಾದ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ  ಜನಾರ್ದನ ರೆಡ್ಡಿ

ತಿರುಪತಿ ಲಡ್ಡು ಕಲಬೆರಕೆ ತುಪ್ಪ ಪ್ರಕರಣ: ಪ್ರಮುಖ ಆರೋಪಿ ಕೈಲಾಸ್‌ ಚಂದ್‌ ಇಡಿ ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ತುಪ್ಪ ಪ್ರಕರಣ: ಪ್ರಮುಖ ಆರೋಪಿ ಕೈಲಾಸ್‌ ಚಂದ್‌ ಇಡಿ ವಶಕ್ಕೆ

ಮಂಗಳೂರು ಬಂದರು ಧಕ್ಕೆಯಲ್ಲಿ ಅಧಿಕಾರಿಗಳಿಗೆ ಡಿಕೆಶಿ ತರಾಟೆ: ಸೆಕ್ಯೂರಿಟಿ ನೆಪದಲ್ಲಿ ವ್ಯಾಪಾರ ಬಂದ್ ಮಾಡಿಸಿದ್ದಕ್ಕೆ ಆಕ್ರೋಶ!

ಮಂಗಳೂರು ಬಂದರು ಧಕ್ಕೆಯಲ್ಲಿ ಅಧಿಕಾರಿಗಳಿಗೆ ಡಿಕೆಶಿ ತರಾಟೆ: ಸೆಕ್ಯೂರಿಟಿ ನೆಪದಲ್ಲಿ ವ್ಯಾಪಾರ ಬಂದ್ ಮಾಡಿಸಿದ್ದಕ್ಕೆ ಆಕ್ರೋಶ!

ಮಂಗಳೂರು ಹಳೆ ಬಂದರಿಗೆ ಸಿಎಂ ಡಿ. ಕೆ. ಶಿವಕುಮಾರ್ ದಿಢೀರ್ ಭೇಟಿ: ಕಡಲ ಮಕ್ಕಳಿಗೆ ಮೂಲಸೌಕರ್ಯ, ಅಳಿವೆಬಾಗಿಲು ಸಮಸ್ಯೆ ಪರಿಹಾರದ ಭರವಸೆ

ಮಂಗಳೂರು ಹಳೆ ಬಂದರಿಗೆ ಸಿಎಂ ಡಿ. ಕೆ. ಶಿವಕುಮಾರ್ ದಿಢೀರ್ ಭೇಟಿ: ಕಡಲ ಮಕ್ಕಳಿಗೆ ಮೂಲಸೌಕರ್ಯ, ಅಳಿವೆಬಾಗಿಲು ಸಮಸ್ಯೆ ಪರಿಹಾರದ ಭರವಸೆ

ಏಷ್ಯನ್ ಗೇಮ್ಸ್ 2026: ಭಾರತಕ್ಕೆ ಪದಕದ ಸವಾಲು, ಟಾಪ್-3ರತ್ತ ಕಣ್ಣು!

ಏಷ್ಯನ್ ಗೇಮ್ಸ್ 2026: ಭಾರತಕ್ಕೆ ಪದಕದ ಸವಾಲು, ಟಾಪ್-3ರತ್ತ ಕಣ್ಣು!

MS ಸುಬ್ಬುಲಕ್ಷ್ಮಿ ಬಯೋಪಿಕ್‌ಗೆ ರಶ್ಮಿಕಾ ಮಂದಣ್ಣ ಆಯ್ಕೆ.

MS ಸುಬ್ಬುಲಕ್ಷ್ಮಿ ಬಯೋಪಿಕ್‌ಗೆ ರಶ್ಮಿಕಾ ಮಂದಣ್ಣ ಆಯ್ಕೆ.