ವಿಧವೆಯರು ವರಮಹಾಲಕ್ಷ್ಮಿ ವ್ರತಾಚರಣೆಯನ್ನು ಮಾಡಬಹುದೇ? ಈ ಬಗ್ಗೆ ಪುರಾಣಗಳು ಏನು ಹೇಳ್ತಾವೆ ಗೊತ್ತಾ.?

ಪ್ರತಿ ವರ್ಷ ಶ್ರಾವಣದಲ್ಲಿ ವರಮಹಾಲಕ್ಷ್ಮಿ ಹಬ್ವವನ್ನು ಆಚರಿಸುತ್ತೇವೆ. ಈ ಬಾರಿ ಆಗಸ್ಟ್ 8 ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸುತ್ತಿದ್ದೇವೆ. ಲಕ್ಷ್ಮಿದೇವಿಯ ಅಲಂಕಾರ, ಪೂಜೆ, ಮುತ್ತೈದೆಯರಿಗೆ ಅರಿಶಿನ ಕುಂಕುಮ ಪ್ರಸಾದ ನೀಡುವುದು ಹೀಗೆ ಸುಮಂಗಲಿಯರು ವ್ರತದ ಸಕಲ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಪ್ರತಿ ವರ್ಷ ಶ್ರಾವಣ ಮಾಸದ ಶುಕ್ರವಾರ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು, ಈ ಬಾರಿ ಆಗಸ್ಟ್ 8 ರಂದು ಆಚರಿಸಲಾಗುತ್ತಿದೆ.

ಆದರೆ ವಿಧವೆಯರು ವ್ರತಾಚರಣೆ ಮಾಡಬಹುದೇ ಇಂತಹ ಪ್ರಶ್ನೆಯೊಂದು ಎಲ್ಲರ ಮನಸ್ಸಿನಲ್ಲಿ ಇದೆ. ಕೆಲವರು ವಿಧವಾ ಸ್ತೀಯರು ವ್ರತಾಚರಣೆ ಮಾಡುವುದು ತಪ್ಪು ಎಂದರೆ, ಇನ್ನು ಕೆಲವರು ದೇವರನ್ನು ಪೂಜಿಸುವುದರಲ್ಲಿ ತಪ್ಪಿಲ್ಲ ಎನ್ನುತ್ತಾರೆ. ಆದರೆ ಪತಿಯನ್ನು ಕಳೆದುಕೊಂಡ ಸ್ತ್ರಿಯರು ವರಮಹಾಲಕ್ಷ್ಮಿ ವ್ರತಾಚರಣೆ ಮಾಡಬಹುದೇ? ಎನ್ನುವ ಬಗ್ಗೆ ಮಾಹಿತಿ.

https://www.goodnews24x7.com/operation-sindoor-in-a-saree/ಸೀರೆಯಲ್ಲಿ ಅರಳಿದ ಆಪರೇಶನ್ ಸಿಂಧೂರ.

ಹಿಂದಿನ ಕಾಲದ ಆಚಾರ ವಿಚಾರವನ್ನು ಇವತ್ತಿಗೂ ಪಾಲಿಸಿಕೊಂಡು ಹೋಗುವ ಮನಸ್ಥಿತಿ ಯಾರಿಗೂ ಇಲ್ಲ. ಅಭಿವೃದ್ಧಿಯಾಗುತ್ತಿದ್ದಂತೆ ತಾವು ಪಾಲಿಸಿಕೊಂಡು ಬರುವ ಆಚಾರ ವಿಚಾರಗಳಲ್ಲಿ ತಕ್ಕ ಮಟ್ಟಿಗೆ ಬದಲಾವಣೆ ಮಾಡಿಕೊಳ್ಳುತ್ತಿದ್ದೇವೆ. ಈಗಾಗಲೇ ಅದೆಷ್ಟೋ ಬದಲಾವಣೆಗಳು ಆಗಿವೆ, ಅದು ಸ್ವೀಕಾರಾರ್ಹ. ಹೀಗಾಗಿ ವಿಧವಾ ಸ್ತ್ರೀಯರು ದೈವತಾ ಕಾರ್ಯಗಳಲ್ಲಿ ತೊಡಗಬಾರದು ಎನ್ನುವುದು ಎಲ್ಲಿಯೂ ಇಲ್ಲ. ಒಂದು ಕಾಲಘಟ್ಟದಲ್ಲಿ ವಿಧವೆಯರನ್ನು ಎಲ್ಲದರಿಂದಲೂ ದೂರವಿಡುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ವಿಧವೆಯವರನ್ನು ಕೆಳಮಟ್ಟದಲ್ಲಿ ಕಾಣುವ ಮನಸ್ಥಿತಿಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಹೀಗಾಗಿ ವಿಧವಾ ಸ್ತ್ರಿಯರು ವರಮಹಾಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಳ್ಳುವುದು ತಪ್ಪಲ್ಲ .

ಶ್ರಾವಣ ಮಾಸದ ಕೊನೆಯ ಶುಕ್ರವಾರದ ದಿನ ವರಮಹಾಲಕ್ಷ್ಮಿ ಪೂಜೆ ಮಾಡುವ ಬಗ್ಗೆ ಶಾಸ್ತ್ರದಲ್ಲಿ ಉಲ್ಲೇಖವಿದೆ. ಲಕ್ಷ್ಮಿ ಪೂಜೆ ಮಾಡುವವರಿಗೆ ಅಷ್ಟ ಐಶ್ವರ್ಯವನ್ನು ಲಕ್ಷ್ಮಿ ಅನುಗ್ರಹಿಸುತ್ತಾಳೆ. ಹೀಗಾಗಿ ಹುಡುಗಿಯರು, ಮಕ್ಕಳು, ಸುಮಂಗಲಿಯರು ಹಾಗೂ ವಿಧವಾ ಸ್ತ್ರೀಯರು ಈ ಪೂಜೆಯನ್ನು ಮಾಡಬಹುದು. ಇನ್ನು ಪ್ರತಿಯೊಬ್ಬ ಸ್ತ್ರೀಯರು ಹುಟ್ಟಿದಾಗಿನಿಂದ ಅರಶಿನ, ಕುಂಕುಮ, ಹೂವಿನ ಅಧಿಕಾರವನ್ನು ಪಡೆದುಕೊಂಡಿದ್ದಾಳೆ. ಹೀಗಾಗಿ ವಿಧವೆಯರು ಈ ವ್ರತದಲ್ಲಿ ಭಾಗಿಯಾಗುವುದು, ಅರಶಿನ ಕುಂಕುಮ ಸ್ವೀಕರಿಸುವುದು ತಪ್ಪಲ್ಲ. ಪ್ರತಿಯೊಬ್ಬ ಪೂಜೆಯ ಹಿಂದೆ ಇರುವುದು ಶ್ರದ್ಧಾ ಭಕ್ತಿ ಮಾತ್ರ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!