ವಿಧವೆಯರು ವರಮಹಾಲಕ್ಷ್ಮಿ ವ್ರತಾಚರಣೆಯನ್ನು ಮಾಡಬಹುದೇ? ಈ ಬಗ್ಗೆ ಪುರಾಣಗಳು ಏನು ಹೇಳ್ತಾವೆ ಗೊತ್ತಾ.?

ಪ್ರತಿ ವರ್ಷ ಶ್ರಾವಣದಲ್ಲಿ ವರಮಹಾಲಕ್ಷ್ಮಿ ಹಬ್ವವನ್ನು ಆಚರಿಸುತ್ತೇವೆ. ಈ ಬಾರಿ ಆಗಸ್ಟ್ 8 ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸುತ್ತಿದ್ದೇವೆ. ಲಕ್ಷ್ಮಿದೇವಿಯ ಅಲಂಕಾರ, ಪೂಜೆ, ಮುತ್ತೈದೆಯರಿಗೆ ಅರಿಶಿನ ಕುಂಕುಮ ಪ್ರಸಾದ ನೀಡುವುದು ಹೀಗೆ ಸುಮಂಗಲಿಯರು ವ್ರತದ ಸಕಲ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಪ್ರತಿ ವರ್ಷ ಶ್ರಾವಣ ಮಾಸದ ಶುಕ್ರವಾರ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು, ಈ ಬಾರಿ ಆಗಸ್ಟ್ 8 ರಂದು ಆಚರಿಸಲಾಗುತ್ತಿದೆ.

ಆದರೆ ವಿಧವೆಯರು ವ್ರತಾಚರಣೆ ಮಾಡಬಹುದೇ ಇಂತಹ ಪ್ರಶ್ನೆಯೊಂದು ಎಲ್ಲರ ಮನಸ್ಸಿನಲ್ಲಿ ಇದೆ. ಕೆಲವರು ವಿಧವಾ ಸ್ತೀಯರು ವ್ರತಾಚರಣೆ ಮಾಡುವುದು ತಪ್ಪು ಎಂದರೆ, ಇನ್ನು ಕೆಲವರು ದೇವರನ್ನು ಪೂಜಿಸುವುದರಲ್ಲಿ ತಪ್ಪಿಲ್ಲ ಎನ್ನುತ್ತಾರೆ. ಆದರೆ ಪತಿಯನ್ನು ಕಳೆದುಕೊಂಡ ಸ್ತ್ರಿಯರು ವರಮಹಾಲಕ್ಷ್ಮಿ ವ್ರತಾಚರಣೆ ಮಾಡಬಹುದೇ? ಎನ್ನುವ ಬಗ್ಗೆ ಮಾಹಿತಿ.

https://www.goodnews24x7.com/operation-sindoor-in-a-saree/ಸೀರೆಯಲ್ಲಿ ಅರಳಿದ ಆಪರೇಶನ್ ಸಿಂಧೂರ.

ಹಿಂದಿನ ಕಾಲದ ಆಚಾರ ವಿಚಾರವನ್ನು ಇವತ್ತಿಗೂ ಪಾಲಿಸಿಕೊಂಡು ಹೋಗುವ ಮನಸ್ಥಿತಿ ಯಾರಿಗೂ ಇಲ್ಲ. ಅಭಿವೃದ್ಧಿಯಾಗುತ್ತಿದ್ದಂತೆ ತಾವು ಪಾಲಿಸಿಕೊಂಡು ಬರುವ ಆಚಾರ ವಿಚಾರಗಳಲ್ಲಿ ತಕ್ಕ ಮಟ್ಟಿಗೆ ಬದಲಾವಣೆ ಮಾಡಿಕೊಳ್ಳುತ್ತಿದ್ದೇವೆ. ಈಗಾಗಲೇ ಅದೆಷ್ಟೋ ಬದಲಾವಣೆಗಳು ಆಗಿವೆ, ಅದು ಸ್ವೀಕಾರಾರ್ಹ. ಹೀಗಾಗಿ ವಿಧವಾ ಸ್ತ್ರೀಯರು ದೈವತಾ ಕಾರ್ಯಗಳಲ್ಲಿ ತೊಡಗಬಾರದು ಎನ್ನುವುದು ಎಲ್ಲಿಯೂ ಇಲ್ಲ. ಒಂದು ಕಾಲಘಟ್ಟದಲ್ಲಿ ವಿಧವೆಯರನ್ನು ಎಲ್ಲದರಿಂದಲೂ ದೂರವಿಡುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ವಿಧವೆಯವರನ್ನು ಕೆಳಮಟ್ಟದಲ್ಲಿ ಕಾಣುವ ಮನಸ್ಥಿತಿಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಹೀಗಾಗಿ ವಿಧವಾ ಸ್ತ್ರಿಯರು ವರಮಹಾಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಳ್ಳುವುದು ತಪ್ಪಲ್ಲ .

ಶ್ರಾವಣ ಮಾಸದ ಕೊನೆಯ ಶುಕ್ರವಾರದ ದಿನ ವರಮಹಾಲಕ್ಷ್ಮಿ ಪೂಜೆ ಮಾಡುವ ಬಗ್ಗೆ ಶಾಸ್ತ್ರದಲ್ಲಿ ಉಲ್ಲೇಖವಿದೆ. ಲಕ್ಷ್ಮಿ ಪೂಜೆ ಮಾಡುವವರಿಗೆ ಅಷ್ಟ ಐಶ್ವರ್ಯವನ್ನು ಲಕ್ಷ್ಮಿ ಅನುಗ್ರಹಿಸುತ್ತಾಳೆ. ಹೀಗಾಗಿ ಹುಡುಗಿಯರು, ಮಕ್ಕಳು, ಸುಮಂಗಲಿಯರು ಹಾಗೂ ವಿಧವಾ ಸ್ತ್ರೀಯರು ಈ ಪೂಜೆಯನ್ನು ಮಾಡಬಹುದು. ಇನ್ನು ಪ್ರತಿಯೊಬ್ಬ ಸ್ತ್ರೀಯರು ಹುಟ್ಟಿದಾಗಿನಿಂದ ಅರಶಿನ, ಕುಂಕುಮ, ಹೂವಿನ ಅಧಿಕಾರವನ್ನು ಪಡೆದುಕೊಂಡಿದ್ದಾಳೆ. ಹೀಗಾಗಿ ವಿಧವೆಯರು ಈ ವ್ರತದಲ್ಲಿ ಭಾಗಿಯಾಗುವುದು, ಅರಶಿನ ಕುಂಕುಮ ಸ್ವೀಕರಿಸುವುದು ತಪ್ಪಲ್ಲ. ಪ್ರತಿಯೊಬ್ಬ ಪೂಜೆಯ ಹಿಂದೆ ಇರುವುದು ಶ್ರದ್ಧಾ ಭಕ್ತಿ ಮಾತ್ರ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು