ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಭಾವುಕ ಪೋಸ್ಟ್ ..

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಮತ್ತೆ ಬಂಧಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿ, ವಿಜಯಲಕ್ಷ್ಮೀ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಡೆದ ಹೃದಯದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದ್ದು, ದರ್ಶನ್ ಅವರ ಬಂಧನದಿಂದಾಗಿ ಅವರು ಎಷ್ಟು ದುಃಖಿತರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ.

ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ಇಷ್ಟು ದಿನ ಜಾಮೀನು ಪಡೆದು ಹೊರಗೆ ಇದ್ದ ಅವರು ಮತ್ತೆ ಜೈಲು ಸೇರಿದ್ದಾರೆ. ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಮನಸ್ಸು ಒಡೆದಿದೆ ಎಂದು ಹೇಳಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗುತ್ತಿದೆ.

ನಟ ದರ್ಶನ್ ಮೊದಲ ಬಾರಿ ಬಂಧನದ ಬಳಿಕವೂ ಸೈಲೆಂಟ್ ಆಗಿಯೇ ಇದ್ದರು ವಿಜಯಲಕ್ಷ್ಮೀ. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿ ಅಭಿಮಾನಿಗಳಿಗೆ ಧೈರ್ಯ ತುಂಬಿದರು. ದರ್ಶನ್ ಜಾಮೀನು ಪಡೆದು ಬಿಡುಗಡೆ ಆದ ಬಳಿಕ ಅವರಷ್ಟು ಖುಷಿಪಟ್ಟವರು ಮತ್ತೊಬ್ಬರು ಇರಲಿಲ್ಲ. ದರ್ಶನ್ ಈಗ ಮತ್ತೆ ಅರೆಸ್ಟ್ ಆಗಿರೋದು ಅವರಿಗೆ ಬೇಸರ ಮೂಡಿಸಿದೆ.

ದರ್ಶನ್ ಅವರು ಕೊನೆಯದಾಗಿ ಬಂಧನಕ್ಕೆ ಒಳಗಾಗಿದ್ದು ವಿಜಯಲಕ್ಷ್ಮೀ ಅವರ ನಿವಾಸದಿಂದಲೇ. ಅವರನ್ನು ಅಲ್ಲಿಂದಲೇ ಅರೆಸ್ಟ್ ಮಾಡಲಾಗಿತ್ತು. ಆ ಬಳಿಕ ವಿಜಯಲಕ್ಷ್ಮೀ ಅವರು ಸೈಲೆಂಟ್ ಆಗಿದ್ದರು. ಈಗ ಸೋಶಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ದರ್ಶನ್ ಬ್ಯಾಕ್ ಪೋಸ್​ನ ಫೋಟೋ ಹಾಕಿದ್ದಾರೆ. ದರ್ಶನ್ ಸರಳಿನ ಹಿಂದೆ ನಿಂತು ಏನನ್ನೋ ನೋಡುತ್ತಿದ್ದಾರೆ. ಈ ಪೋಸ್ಟ್​ಗೆ ಅವರು ಒಡೆದ ಹೃದಯದ ಎಮೋಜಿ ಹಾಕಿದ್ದಾರೆ. ಎಲ್ಲವನ್ನೂ ಅವರು ಸೂಕ್ಷ್ಮವಾಗಿ ಹೇಳಿದ್ದಾರೆ.

ದರ್ಶನ್ ಅವರ ಬಂಧನ ಈ ಬಾರಿ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದೆ. ಕಳೆದ ಬಾರಿ ಬಂಧನ ಆದಾಗ ಅವರಿಗೆ ಕೆಳ ಹಂತದಲ್ಲಿ ಅಲ್ಲದೆ ಇದ್ದರೂ ಮೇಲಿನ ಕೋರ್ಟ್​ನಲ್ಲಿ ಜಾಮೀನು ಸಿಗಬಹುದು ಎಂಬ ನಂಬಿಕೆ ಇತ್ತು. ಆದರೆ, ಈ ಬಾರಿ ಸಾಕಷ್ಟು ಚಾಲೆಂಜ್​ಗಳು ಇವೆ. ದರ್ಶನ್ ಜಾಮೀನು ರದ್ದಾಗಿರುವುದು ಸುಪ್ರೀಂಕೋರ್ಟ್​ನಿಂದ. ಉಚ್ಚ ನ್ಯಾಯಲಯ ಜಾಮೀನು ರದ್ದು ಮಾಡಿರುವುದರಿಂದ ಕೆಳ ಹಂತದ ಕೋರ್ಟ್​ನಲ್ಲೂ ಬೇಲ್ ಸಿಗೋದು ಅನುಮಾನವಾಗಿದೆ.

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!