ವೈರಲ್ ಹುಡುಗಿಗೆ ಶುರುವಾಯ್ತು ಬ್ಯಾಡ್​ ಕಾಮೆಂಟ್ಸ್, ಏನಂದ್ರು ನಿತ್ಯಶ್ರೀ..?

ಎರಡ್ಮೂರು ದಿನಗಳ ಹಿಂದೆ ‘ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ..’ ಹಾಡನ್ನು ಹಾಡಿದ ನಿತ್ಯಶ್ರೀ ಎಲ್ಲೆಡೆ ಸುದ್ದಿಯಾಗಿದ್ದಾರೆ..ಇದೀಗ ವೈರಲ್ ಸ್ಟಾರ್​ಗೆ ಸೊಶಿಯಲ್ ಮೀಡಿಯಾದಲ್ಲಿ ಬ್ಯಾಡ್​ ಕಾಮೆಂಟ್ಸ್ ಕಾಟ ಶುರುವಾಗಿದೆ.
ಒಂದಷ್ಟು ಜನ ಬ್ಯಾಡ್ ಕಾಮೆಂಟ್ ಮಾಡ್ತಿದ್ದಾರೆ, ಕೆಲವರು ಇವಳೇನು ಸಾಧನೆ ಮಾಡಿದ್ದಾಳೆ ಅಂತ ವೈರಲ್ ಮಾಡ್ತಿದ್ದೀರಿ ಅಂತಿದ್ದಾರೆ. ಶೇ 100 ರಲ್ಲಿ ಶೇ 90 ರಷ್ಟು ಜನರು ಒಳ್ಳೆ ಕಾಮೆಂಟ್ಸ್ ಕೊಟ್ಟಿದ್ದಾರೆ. ಬ್ಯಾಡ್ ಕಾಮೆಂಟ್ಸ್​ಗೆಲ್ಲ ತಲೆ ಕೆಡಿಸಿಕೊಳ್ಳಲ್ಲ. ನನ್ನಿಂದ ಒಂದಷ್ಟು ಜನ ನಕ್ಕಿದ್ರು ಅನ್ನೋ ಖುಷಿ ಇದೆ ಎಂದು ಹೇಳಿದ್ದಾರೆ.

ಈ ಮುಗ್ಧ ಹುಡುಗಿ ಹಿನ್ನಲೆ ಏನು..? ಈ ವೈರಲ್ ಹುಡುಗಿ ನಿತ್ಯಾ ಶ್ರೀ ಮೂಲತಃ ಊರು ಮಂಡ್ಯ ಜಿಲ್ಲೆಯ ಕೆ.ಆರ್.​ಪೇಟೆ ತಾಲೂಕಿನ ಮೊಸಳೆಕೊಪ್ಪ ಗ್ರಾಮ. ತಮ್ಮ ಪದವಿ ಶಿಕ್ಷಣ ಪಡೆಯಲು ಮೈಸೂರಿನಲ್ಲಿ ನೆಲೆಸಿದ್ದಾರೆ. ಇದೇ ವೇಳೆ ವೈರಲ್ ಹಾಡಿನ ಬಗ್ಗೆ ಮಾತನಾಡಿರುವ ಅವರು.. ನಾನು ನನ್ನ ಸ್ನೇಹಿತರನ್ನು ಖುಷಿ ಪಡಿಸಲು ಹಾಡಿದ್ದೆ. ಇದು ಇಷ್ಟು ವೈರಲ್ ಆಗತ್ತೆ ಎಂದು ಗೊತ್ತಿರಲಿಲ್ಲ. ತುಂಬಾ ಖುಷಿ ಆಗಿದೆ ಎಂದು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ನನ್ನ ಗುರುಗಳು ಕೃಷ್ಣಮೂರ್ತಿ ಸರ್ ಹಾಡನ್ನು ರೆಕಾರ್ಡ್ ಮಾಡಿ ಇನ್​​ಸ್ಟಾಗ್ರಾಮ್​​ನಲ್ಲಿ ಅಪ್ಲೋಡ್ ಮಾಡಿದ್ರು. ಅದು ರಾತ್ರೋರಾತ್ರಿ ಸಕ್ಕತ್ ವೈರಲ್ ಆಗಿದೆ. ಎಲ್ಲರೂ ಕೂಡ ನನ್ನ ಗುರುತು ಹಿಡಿತಿದ್ದಾರೆ. ನನ್ನ ಜೊತೆ ಸೆಲ್ಫಿ ಕೇಳಿದ್ದಾರೆ. ನನಗೆ ನಟಿ ಆಗಬೇಕು, ಆ್ಯಕ್ಟಿಂಗ್ ಮಾಡಬೇಕು ಎಂಬ ಆಸೆ ಇದೆ. ಯಶ್ ನನ್ನ ಫೇವರಿಟ್ ನಟ. ಅವರ ಜೊತೆ ಒಂದು ಸೈಡ್ ರೋಲ್ ಮಾಡಬೇಕೆಂಬ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!