ಮೌನ ಮುರಿದ ವಿರಾಟ್ ಕೊಹ್ಲಿRCB ವಿಜಯೋತ್ಸವ ದುರಂತ ಆಯಿತು….!

18 ವರ್ಷದ ಬಳಿಕ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಆರ್​ಸಿಬಿ ವಿಜಯೋತ್ಸವದಲ್ಲಿ ವಿರಾಟ್ ಕೊಹ್ಲಿ, ಕ್ಯಾಪ್ಟನ್ ರಜತ್ ಪಾಟಿದಾರ್ ಸೇರಿದಂತೆ ತಂಡದ ಎಲ್ಲ ಆಟಗಾರರು ಭಾಗಿಯಾಗಿದ್ದರು. ಈ ಆಟಗಾರರನ್ನೆಲ್ಲ ಕಣ್ತುಂಬಿಕೊಳ್ಳಬೇಕು ಎಂದು ಲಕ್ಷಾಂತರ ಜನರು ಸ್ಟೇಡಿಯಂ ಬಳಿ ಒಂದೇ ಬಾರಿ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 11 ಜನರು ಉಸಿರು ಚೆಲ್ಲಿದ್ರೆ, ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಸದ್ಯ ಈ ಸಂಬಂಧ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

ಜೂನ್ 4 ರಂದು ನಡೆದಂತಹ ದುರ್ಘಟನೆಯಿಂದ ನಿಮ್ಮನ್ನು ಮತ್ತೆ ಸಿದ್ಧಪಡಿಸಲು ಆಗುವುದಿಲ್ಲ. ಆರ್​ಸಿಬಿ ಫ್ರಾಂಚೈಸಿಯ ಐತಿಹಾಸಿಕ ಸಂತೋಷದ ಕ್ಷಣ ಏನಾಗಬೇಕಿತ್ತು ಎಂದುಕೊಂಡಿತ್ತೋ ಅದು ಆಗಲಿಲ್ಲ. ಬದಲಿಗೆ ಅದು ದೊಡ್ಡ ದುರಂತವಾಗಿ ಬದಲಾಯಿತು. ಇದು ತುಂಬಾ ದುಃಖಕರ ಸಂಗತಿ. ಘಟನೆಯಲ್ಲಿ ಉಸಿರು ಚೆಲ್ಲಿರುವಂತಹ ಅವರ ಕುಟುಂಬದ ಬಗ್ಗೆ ದೇವರಲ್ಲಿ ಪ್ರಾರ್ಥಿಸಿದ್ದೇನೆ. ಗಾಯಗೊಂಡವರು ಬೇಗ ರಿಕವರಿ ಆಗಲೆಂದು ಕೇಳಿಕೊಂಡಿದ್ದೇನೆ. ನಿಮ್ಮನ್ನು ಕಳೆದುಕೊಂಡಿರುವುದು ನಮ್ಮಲ್ಲಿ ಭಾಗವಾಗಿದೆ. ಇನ್ಮುಂದೆ ಕಾಳಜಿ, ಗೌರವ ಮತ್ತು ಜವಾಬ್ದಾರಿಯಿಂದ ನಾವು ಮುಂದೆ ಸಾಗುತ್ತೇವೆ ಎಂದು ವಿರಾಟ್ ಕೊಹ್ಲಿ ಅವರು ಭಾವುಕವಾಗಿ ಹೇಳಿದ್ದಾರೆ.

 

ಘಟನೆಯ ಬಳಿಕ ಸುದೀರ್ಘ ಮೌನಕ್ಕೆ ಜಾರಿದ್ದ ಆರ್​​​ಸಿಬಿ ಅಗಸ್ಟ್​​ 28ರಂದು ಫ್ಯಾನ್ಸ್​ಗೆ ಭಾವನಾತ್ಮಕ ಪತ್ರ ಬರೆದಿತ್ತು. ಮೌನ ಮುರಿದು ಆರ್​​ಸಿಬಿ ಕೇರ್ಸ್​ ಅನ್ನೋ ಯೋಜನೆಯನ್ನ ರೂಪಿಸಿರೋದಾಗಿ ತಿಳಿಸಿತ್ತು. ಎರಡು ದಿನಗಳ ಹಿಂದೆ ಕಾಲ್ತುಳಿತ ದುರಂತದಲ್ಲಿ ಅಸುನೀಗಿದ ಕುಟುಂಬದವರಿಗೆ 10 ಲಕ್ಷದ ಬದಲಾಗಿ 25 ಲಕ್ಷ ಪರಿಹಾರ ನೀಡೋದಾಗಿ ಘೋಷಿಸಿತ್ತು.

Related Posts

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್   ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…

ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ!

  2026ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!