ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ

ಕರ್ನಾಟಕದ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಪ್ರಮುಖ ಜಲಾಶಯಗಳಿಗೆ ಭಾರಿ ಒಳಹರಿವು ಆರಂಭವಾಗಿದೆ. ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಎಲ್ಲಾ 22 ಗೇಟ್‌ಗಳ ಮೂಲಕ ಕೃಷ್ಣಾ ನದಿಯ ಉಪನದಿಗೆ ನೀರು ಹರಿಸಲಾಗುತ್ತಿದೆ.

ಬೆಂಗಳೂರು, ಜುಲೈ 7: ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಮುಂಗಾರು ಮಳೆ (Monsoon Rain) ತೀವ್ರಗೊಂಡಿದ್ದು, ಬತ್ತಿ ಹೋಗುತ್ತಿದ್ದ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಈಗ ಭಾರಿ ಪ್ರಮಾಣದ ಒಳಹರಿವು ಆರಂಭವಾಗಿದೆ. ಜೂನ್ ತಿಂಗಳಲ್ಲಿ ಕೊಂಚ ಕೈಕೊಟ್ಟಿದ್ದ ಮಳೆಯು ಜುಲೈ ಆರಂಭದಲ್ಲಿ ಚುರುಕುಗೊಂಡಿದೆ. ನದಿ-ಜಲಾಶಯಗಳು ಮೈದುಂಬಿಕೊಳ್ಳುತ್ತಿವೆ. ಇದರ ಪರಿಣಾಮವಾಗಿ ಶಿವಮೊಗ್ಗ ತಾಲೂಕಿನ ಗಾಜನೂರು ಬಳಿಯ ತುಂಗಾ ಜಲಾಶಯವು ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಭರ್ತಿಯಾಗಿದೆ. ಡ್ಯಾಂ ಸುರಕ್ಷತೆಯ ದೃಷ್ಟಿಯಿಂದ ಒಟ್ಟು 22 ಗೇಟ್‌ಗಳನ್ನು ಮುಂಜಾನೆ ತೆರೆಯಲಾಗಿದ್ದು, ಸುಮಾರು 24,ವಾಹನ ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಹರಿಸಲಾಗುತ್ತಿದೆ. ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಡ್ಯಾಂ ಆವರಣದಲ್ಲಿರುವ ತುಂಗಾದೇವಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಗಿದೆ.

ಹಾಲಿನ ನೊರೆಯಂತೆ ಧುಮುಕುತ್ತಿರುವ ನೀರು, ರೈತರಲ್ಲಿ ಹುಮ್ಮಸ್ಸು
ತುಂಗಾ ಜಲಾಶಯದ ಎಲ್ಲಾ ಗೇಟ್‌ಗಳಿಂದ ನೀರು ಧುಮುಕುತ್ತಿರುವುದರಿಂದ ಇಡೀ ವಾತಾವರಣ ಹಾಲಿನ ನೊರೆಯಂತೆ ಕಂಗೊಳಿಸುತ್ತಿದೆ. ಮಳೆಯ ನಡುವೆಯೂ ಡ್ಯಾಂ ಸೌಂದರ್ಯ ಇಮ್ಮಡಿಯಾಗಿದೆ. ನಿರಂತರ ಮಳೆಯಿಂದಾಗಿ ತುಂಗಾ ನದಿ ತುಂಬಿ ಹರಿಯುತ್ತಿದ್ದು, ಶಿವಮೊಗ್ಗ ಮಾತ್ರವಲ್ಲದೆ ದಾವಣಗೆರೆ, ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ರೈತರ ಕೃಷಿ ಚಟುವಟಿಕೆಗಳಿಗೆ ಭಾರಿ ಅನುಕೂಲವಾಗಲಿದೆ. ಮಳೆ ತಡವಾಗಿದ್ದರಿಂದ ಆತಂಕದಲ್ಲಿದ್ದ ರೈತರ ಮುಖದಲ್ಲಿ ಈಗ ಮಂದಹಾಸ ಮೂಡಿದ್ದು, ಕೃಷಿ ಚಟುವಟಿಕೆಗಳು ಮತ್ತೆ ಚುರುಕುಗೊಂಡಿವೆ.

ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ
ಕೆಆರ್​ಎಸ್ ಜಲಾಶಯ (ಮಂಡ್ಯ)
ಗರಿಷ್ಠ ಮಟ್ಟ: 124.80 ಅಡಿ
ಇಂದಿನ ನೀರಿನ ಮಟ್ಟ: 82.45 ಅಡಿ
ಒಳಹರಿವು: 5,734 ಕ್ಯೂಸೆಕ್, ಹೊರಹರಿವು: 777 ಕ್ಯೂಸೆಕ್
ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
ಇಂದಿನ ಸಂಗ್ರಹ: 11.909 ಟಿಎಂಸಿ
ಕಬಿನಿ ಜಲಾಶಯ (ಮೈಸೂರು)
ಕಬಿನಿ ಜಲಾಶಯದ ಇಂದಿನ ನೀರಿನ ಮಟ್ಟ 59.32 ಅಡಿಯಷ್ಟಿದೆ (ಕಳೆದ ವರ್ಷ ಇದೇ ದಿನ 80.79 ಅಡಿ ಇತ್ತು). ಪ್ರಸ್ತುತ ಜಲಾಶಯದಲ್ಲಿ 7.07 ಟಿಎಂಸಿ ನೀರು ಸಂಗ್ರಹವಿದ್ದು, 4,394 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ನದಿಗೆ 500 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದ್ದು, ಕಾಲುವೆಗಳಿಗೆ ಸದ್ಯ ನೀರು ಹರಿಸುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಕಬಿನಿಯಲ್ಲಿ ನೀರಿನ ಮಟ್ಟ ಹಾಗೂ ಒಳಹರಿವು ಕಡಿಮೆ ಇದೆ. ಕಳೆದ 24 ಗಂಟೆಗಳಲ್ಲಿ ಇಲ್ಲಿ 30 ಮಿ.ಮೀ ಮಳೆ ದಾಖಲಾಗಿದೆ.

ಹೇಮಾವತಿ ಜಲಾಶಯ (ಹಾಸನ)
ಗರಿಷ್ಠ ಮಟ್ಟ: 2922 ಅಡಿ (37 ಟಿಎಂಸಿ)
ಇಂದಿನ ನೀರಿನ ಮಟ್ಟ: 2895.91 ಅಡಿ (17.379 ಟಿಎಂಸಿ)
ಒಳಹರಿವು: 8,901 ಕ್ಯೂಸೆಕ್, ಹೊರಹರಿವು: 300 ಕ್ಯೂಸೆಕ್
ಭದ್ರಾ ಜಲಾಶಯ (ಲಕ್ಕವಳ್ಳಿ/ಭದ್ರಾವತಿ)
ಗರಿಷ್ಠ ಮಟ್ಟ: 186 ಅಡಿ (71.535 ಟಿಎಂಸಿ)
ಇಂದಿನ ನೀರಿನ ಮಟ್ಟ: 140.6 ಅಡಿ (27.231 ಟಿಎಂಸಿ)
ಒಳಹರಿವು: 8,117 ಕ್ಯೂಸೆಕ್, ಹೊರಹರಿವು: 212 ಕ್ಯೂಸೆಕ್
ಬಸವಸಾಗರ ಜಲಾಶಯ (ನಾರಾಯಣಪುರ, ಯಾದಗಿರಿ)
ಗರಿಷ್ಠ ಮಟ್ಟ: 492.25 ಮೀಟರ್
ಇಂದಿನ ನೀರಿನ ಮಟ್ಟ: 488.82 ಮೀಟರ್
ಒಳಹರಿವು: 00 ಕ್ಯೂಸೆಕ್, ಹೊರಹರಿವು: 761 ಕ್ಯೂಸೆಕ್
ರಾಜ್ಯಾದ್ಯಂತ ಮುಂಗಾರು ಮಳೆ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಕೆಆರ್‌ಎಸ್, ಭದ್ರಾ ಮತ್ತು ಹೇಮಾವತಿ ಜಲಾಶಯಗಳ ನೀರಿನ ಮಟ್ಟದಲ್ಲಿ ಭಾರೀ ಏರಿಕೆಯಾಗುವ ನಿರೀಕ್ಷೆಯಿದೆ.

Related Posts

ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, 3 ಸಾ*ವು, ಹಲವರು ನಾಪತ್ತೆ

2024ರ ಜುಲೈನಲ್ಲಿ ಸಂಭವಿಸಿದ ಭೂಕುಸಿತವು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು, ಆ ದುರಂತದಲ್ಲಿ ಸುಮಾರು 298 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಮತ್ತೆ ಅದೇ ರೀತಿಯ ಅವಘಡ ಮರುಕಳಿಸಿದ್ದು, ಈ ಭಾಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸುರಕ್ಷತೆಯ ಬಗ್ಗೆ ತೀವ್ರ ಚರ್ಚೆಗಳು ಆರಂಭವಾಗಿವೆ.…

ರಾಷ್ಟ್ರಪತಿಗಳ‌ ಹೆಸರಿನಲ್ಲಿರುವ ಜಾಗ ಕಬಳಿಕೆ ಲೋಕಾಯುಕ್ತಕ್ಕೆ ದೂರು

ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ರಾಷ್ಟ್ರಪತಿಗಳ ಹೆಸರಿನಲ್ಲಿದ್ದ₹100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಕೇಂದ್ರ ಇಂಧನ ಸಚಿವಾಲಯದ ಜಾಗವನ್ನು ಸಚಿವ ಕೃಷ್ಣಭೈರೇಗೌಡರ ಆಪ್ತ ಎನ್ನಲಾದ ಕೆ.ಎಂ. ಚೇತನ್ ಕಬಳಿಸಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಹೋಬಳಿಯ ಕೊಡಿಗೇಹಳ್ಳಿ…

You Missed

ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, 3 ಸಾ*ವು, ಹಲವರು ನಾಪತ್ತೆ

ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, 3 ಸಾ*ವು, ಹಲವರು ನಾಪತ್ತೆ

ರಾಷ್ಟ್ರಪತಿಗಳ‌ ಹೆಸರಿನಲ್ಲಿರುವ ಜಾಗ ಕಬಳಿಕೆ ಲೋಕಾಯುಕ್ತಕ್ಕೆ ದೂರು

ರಾಷ್ಟ್ರಪತಿಗಳ‌ ಹೆಸರಿನಲ್ಲಿರುವ ಜಾಗ ಕಬಳಿಕೆ ಲೋಕಾಯುಕ್ತಕ್ಕೆ ದೂರು

ಪೊಲೀಸರ ವಿರುದ್ಧ ವರ್ಷಾ ಹರೀಶ್‌ಗೌಡ ಬೇಸರ

ಪೊಲೀಸರ ವಿರುದ್ಧ ವರ್ಷಾ ಹರೀಶ್‌ಗೌಡ ಬೇಸರ

ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ

ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ

ಸೊಳ್ಳೆ ಹಿಡಿದು ಕೊಟ್ರೆ ಸಿಗುತ್ತೆ 400 ರೂ ಬಹುಮಾನ!

ಸೊಳ್ಳೆ ಹಿಡಿದು ಕೊಟ್ರೆ ಸಿಗುತ್ತೆ 400 ರೂ ಬಹುಮಾನ!

ಚಿತ್ರರಂಗದ ತಾರತಮ್ಯ ಬಿಚ್ಚಿಟ್ಟ ಕೃತಿ ಸನೋನ್

ಚಿತ್ರರಂಗದ ತಾರತಮ್ಯ ಬಿಚ್ಚಿಟ್ಟ ಕೃತಿ ಸನೋನ್