ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.

ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಅವರು ಹೇಳಿದರು.

2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!