ವೆಸ್ಟ್​ ವಿಂಡೀಸ್​ ವಿಂಡೀಸ್​ ವಿರುದ್ಧದ ಟೆಸ್ಟ್ ಸರಣಿ ಕ್ಲೀನ್​ ಸ್ವೀಪ್.. ಮ್ಯಾಚ್​ ಗೆಲ್ಲಿಸಿ ಸಂಭ್ರಮಿಸಿದ ರಾಹುಲ್

ವೆಸ್ಟ್​ ವಿಂಡೀಸ್​ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಕ್ಲೀನ್​ ಸ್ವೀಪ್ ಮಾಡಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯವನ್ನೂ ಗೆಲ್ಲುವ ಮೂಲಕ ಶುಬ್ಮನ್ ಗಿಲ್ ಪಡೆ ಟೆಸ್ಟ್​ ಕ್ರಿಕೆಟ್​ನಲ್ಲಿ ಐತಿಹಾಸಿಕ ದಾಖಲೆ ಬರೆದಿದೆ.
ವೆಸ್ಟ್​ ವಿಂಡೀಸ್​ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಕ್ಲೀನ್​ ಸ್ವೀಪ್ ಮಾಡಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯವನ್ನೂ ಗೆಲ್ಲುವ ಮೂಲಕ ಶುಬ್ಮನ್ ಗಿಲ್ ಪಡೆ ಟೆಸ್ಟ್​ ಕ್ರಿಕೆಟ್​ನಲ್ಲಿ ಐತಿಹಾಸಿಕ ದಾಖಲೆ ಬರೆದಿದೆ.

ಮೊದಲ ದಿನ ಟಾಸ್​ ಗೆದ್ದು ಬ್ಯಾಟ್ ಮಾಡಿದ್ದ ಭಾರತ ತಂಡ, ಒಟ್ಟು 518 ರನ್​ಗಳಿಸಿ ಡಿಕ್ಲೇರ್​ ಮಾಡಿಕೊಂಡಿತ್ತು. ಪ್ರತಿಯಾಗಿ ಬ್ಯಾಟಿಂಗ್​​ಗೆ ಇಳಿದ್ದ ವಿಂಡೀಸ್​, ನಿನ್ನೆಯ ದಿನದಾಟದ ಅಂತ್ಯಕ್ಕೆ ನಾಲ್ಕು ವಿಕೆಟ್ ಕಳೆದುಕೊಂಡು 140 ರನ್​ಗಳಿಸಿತ್ತು. ಅಂತೆಯೇ ಬ್ಯಾಟಿಂಗ್​ಗೆ ಇಳಿದ ವಿಂಡೀಸ್ 248 ರನ್​​ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಗಿ, ಫಾಲೋ ಆನ್ ಸುಳಿಗೆ ಸಿಲುಕಿತ್ತು.

270 ರನ್​ಗಳ ಹಿನ್ನಡೆ ಅನುಭವಿಸಿದ ವಿಂಡೀಸ್, ಫಾಲೋ ಆನ್ ಪ್ರಕಾರ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಆರಂಭಿಸಿತು. ಎರಡನೇ ಅವಕಾಶದಲ್ಲಿ ಒಳ್ಳೆಯ ಪೈಪೋಟಿ ಕೊಟ್ಟ ವಿಂಡೀಸ್ ಪಡೆ, 390 ರನ್​ಗಳಿಸಿ ಆಲೌಟ್ ಆಯಿತು. ಆ ಮೂಲಕ ಭಾರತದ ಗೆಲುವಿಗೆ 121 ರನ್​ ಬೇಕಿತ್ತು.

ಈ ಗುರಿಯನ್ನು ನಿನ್ನೆ ಮಧ್ಯಾಹ್ನದಿಂದ ಬೆನ್ನು ಹತ್ತಿದ್ದ ಗಿಲ್ ಪಡೆ ಇಂದು ಬೆಳಗ್ಗೆ ಗೆದ್ದು ಬೀಗಿದೆ. ಜೈಸ್ವಾಲ್, ಸಾಯಿ ಸುದರ್ಶನ್, ಗಿಲ್ ಸೇರಿ ಮೂರು ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿದೆ. ತಾಳ್ಮೆಯ ಆಟವನ್ನಾಡಿದ ಕನ್ನಡಿಗ ಕೆಎಲ್ ರಾಹುಲ್ ತಂಡವನ್ನು ಗೆಲ್ಲಿಸಿಕೊಡುವಲ್ಲಿ ಯಶಸ್ವಿಯಾದರು. 108 ಬಾಲ್​ಗಳನ್ನು ಎದುರಿಸಿ ಎರಡು ಸಿಕ್ಸರ್, ಆರು ಬೌಂಡರಿಯೊಂದಿಗೆ 58 ರನ್​ಗಳಿಸಿ ಅಜಯರಾಗಿ ಉಳಿದರು. ಇನ್ನು ಮೊದಲ ಇನ್ನಿಂಗ್ಸ್​ನಲ್ಲಿ 38 ರನ್​ಗಳ ಕಾಣಿಕೆ ನೀಡಿದ್ದರು. ಈ ಗೆಲುವಿನೊಂದಿಗೆ ಶುಬ್ಮನ್ ಗಿಲ್ ನಾಯಕತ್ವಕ್ಕೆ ಮತ್ತೊಂದು ಸರಣಿ ಒಲಿದಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!