ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡಿಸುತ್ತಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂ.ಯ ಈ ಬಜೆಟ್‌ನಲ್ಲಿ 7 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ.

ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳು ಯಾವುವು?
1.ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ: ಕೃಷಿ ಸಂಸ್ಕರಣೆ, ಕೃಷಿ ತ್ಯಾಜ್ಯಗಳ ಮರುಬಳಕೆ, ಮಾರುಕಟ್ಟೆ ಸಂಪರ್ಕ ಬಲಪಡಿಸಲು ಹೊಸ ಕಾರ್ಯಕ್ರಮ ಘೋಷಿಸಿದ್ದಾರೆ. ರೈತರ ಸ್ಥಿರ ಮತ್ತು ಹೆಚ್ಚುವರಿ ಆದಾಯ ಮೂಲ ರಚಿಸಲು ಈ ಯೋಜನೆ ಪೂರಕವಾಗಿದೆ. ಈ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೆ ಬರಲಿದೆ.

2.ವಸುಧಾಮೃತ ಕಾರ್ಯಕ್ರಮ: ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮುಂದಿನ ಮೂರು ವರ್ಷಗಳಲ್ಲಿ ಈ ಕಾರ್ಯಕ್ರಮ ಜಾರಿಯಾಗಲಿದೆ.

3.ಸಸ್ಯ ಸಂಜೀವಿನಿ ಯೋಜನೆ: ಪರಿಸರ ಸ್ನೇಹಿ ಜೈವಿಕ ಪೀಡನಾಶಕ, ಜೈವಿಕ ಕೀಟನಾಶಕಗಳ ಜೊತೆ ಇತರೆ ಸುರಕ್ಷಿತ ನಿರ್ವಹಣಾ ಕ್ರಮಗಳಿಗಾಗಿ ಈ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಜಾರಿ ಮಾಡುವ ಉದ್ದೇಶವಿದೆ.

4.ಫಲಧಾರೆ ಕಾರ್ಯಕ್ರಮ: ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆ ನಿವಾರಣೆಗೆ ಈ ಕಾರ್ಯಕ್ರಮದಡಿ ಶಿಬಿರಗಳ ಆಯೋಜನೆ ಮಾಡಲಾಗುವುದು. 5 ಕೋಟಿ ರೂ. ವೆಚ್ಚದಲ್ಲಿ 1000 ಗ್ರಾಮ ಪಂಚಾಯತಿಗಳಲ್ಲಿ “ಫಲಧಾರೆ” ಎಂಬ ಹೆಸರಿನಲ್ಲಿ ಶಿಬಿರ ನಡೆಸಲಾಗುವುದು.

5.ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ: 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 11 ಪಾಲಿಟೆಕ್ನಿಕ್ ಕಾಲೇಜುಗಳನ್ನು ಮಾದರಿ ಸಂಸ್ಥೆಗಳಾಗಿ ಅಭಿವೃದ್ಧಿ ಮಾಡುವ ಉದ್ದೇಶದಿಂದ 2,500 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೊಳಿಸಲಾಗುವುದು.

6.ಕೇರಳ ಮಾದರಿಯ ಗಂಭೀರ ಕಾಯಿಲೆಗಳಿರುವ ರೋಗಿಗಳಿಗೆ ಗೃಹಾಧಾರಿತ ಉಪಶಮನ ಆರೈಕೆ:
ಮನೆಗಳಲ್ಲೇ ಚಿಕಿತ್ಸಾ ಸೇವೆ, ಗಂಭೀರ ದೀರ್ಘಕಾಲೀನ, ಮಾರಣಾಂತಿಕ ಕಾಯಿಲೆಗಳಿರುವ ರೋಗಿಗಳಿಗೆ ಈ ಯೋಜನೆಯಡಿ ಆರೈಕೆ ಮಾಡಲಾಗುವುದು. Palliym India ಸಂಸ್ಥೆಯ ಸಹಯೋಗದೊಂದಿಗೆ ಯೋಜನೆಯನ್ನು ಜಾರಿಗೊಳಿಸಲಾಗುವುದು

7.ಮುಖ್ಯಮಂತ್ರಿ ಸೌರ ಕೃಷಿ ಯೋಜನೆ:
ಈ ಯೋಜನೆಯಡಿ ಕೆಪಿಟಿಸಿಎಲ್ ಉಪಕೇಂದ್ರಗಳಲ್ಲಿ ಸೌರ ವಿದ್ಯುತ್ ಸ್ಥಾವರಗಳ ನಿರ್ಮಾಣ ಮಾಡಲಾಗುವುದು. ಅಂದಾಜು 10,500 ಕೋಟಿ ರೂ. ವೆಚ್ಚದಲ್ಲಿ 300 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರಗಳ ಆರಂಭಗೊಳಿಸಲು ನಿರ್ಧರಿಸಲಾಗಿದೆ.

Related Posts

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ…

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!