ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡಿಸುತ್ತಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂ.ಯ ಈ ಬಜೆಟ್‌ನಲ್ಲಿ 7 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ.

ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳು ಯಾವುವು?
1.ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ: ಕೃಷಿ ಸಂಸ್ಕರಣೆ, ಕೃಷಿ ತ್ಯಾಜ್ಯಗಳ ಮರುಬಳಕೆ, ಮಾರುಕಟ್ಟೆ ಸಂಪರ್ಕ ಬಲಪಡಿಸಲು ಹೊಸ ಕಾರ್ಯಕ್ರಮ ಘೋಷಿಸಿದ್ದಾರೆ. ರೈತರ ಸ್ಥಿರ ಮತ್ತು ಹೆಚ್ಚುವರಿ ಆದಾಯ ಮೂಲ ರಚಿಸಲು ಈ ಯೋಜನೆ ಪೂರಕವಾಗಿದೆ. ಈ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೆ ಬರಲಿದೆ.

2.ವಸುಧಾಮೃತ ಕಾರ್ಯಕ್ರಮ: ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮುಂದಿನ ಮೂರು ವರ್ಷಗಳಲ್ಲಿ ಈ ಕಾರ್ಯಕ್ರಮ ಜಾರಿಯಾಗಲಿದೆ.

3.ಸಸ್ಯ ಸಂಜೀವಿನಿ ಯೋಜನೆ: ಪರಿಸರ ಸ್ನೇಹಿ ಜೈವಿಕ ಪೀಡನಾಶಕ, ಜೈವಿಕ ಕೀಟನಾಶಕಗಳ ಜೊತೆ ಇತರೆ ಸುರಕ್ಷಿತ ನಿರ್ವಹಣಾ ಕ್ರಮಗಳಿಗಾಗಿ ಈ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಜಾರಿ ಮಾಡುವ ಉದ್ದೇಶವಿದೆ.

4.ಫಲಧಾರೆ ಕಾರ್ಯಕ್ರಮ: ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆ ನಿವಾರಣೆಗೆ ಈ ಕಾರ್ಯಕ್ರಮದಡಿ ಶಿಬಿರಗಳ ಆಯೋಜನೆ ಮಾಡಲಾಗುವುದು. 5 ಕೋಟಿ ರೂ. ವೆಚ್ಚದಲ್ಲಿ 1000 ಗ್ರಾಮ ಪಂಚಾಯತಿಗಳಲ್ಲಿ “ಫಲಧಾರೆ” ಎಂಬ ಹೆಸರಿನಲ್ಲಿ ಶಿಬಿರ ನಡೆಸಲಾಗುವುದು.

5.ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ: 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 11 ಪಾಲಿಟೆಕ್ನಿಕ್ ಕಾಲೇಜುಗಳನ್ನು ಮಾದರಿ ಸಂಸ್ಥೆಗಳಾಗಿ ಅಭಿವೃದ್ಧಿ ಮಾಡುವ ಉದ್ದೇಶದಿಂದ 2,500 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೊಳಿಸಲಾಗುವುದು.

6.ಕೇರಳ ಮಾದರಿಯ ಗಂಭೀರ ಕಾಯಿಲೆಗಳಿರುವ ರೋಗಿಗಳಿಗೆ ಗೃಹಾಧಾರಿತ ಉಪಶಮನ ಆರೈಕೆ:
ಮನೆಗಳಲ್ಲೇ ಚಿಕಿತ್ಸಾ ಸೇವೆ, ಗಂಭೀರ ದೀರ್ಘಕಾಲೀನ, ಮಾರಣಾಂತಿಕ ಕಾಯಿಲೆಗಳಿರುವ ರೋಗಿಗಳಿಗೆ ಈ ಯೋಜನೆಯಡಿ ಆರೈಕೆ ಮಾಡಲಾಗುವುದು. Palliym India ಸಂಸ್ಥೆಯ ಸಹಯೋಗದೊಂದಿಗೆ ಯೋಜನೆಯನ್ನು ಜಾರಿಗೊಳಿಸಲಾಗುವುದು

7.ಮುಖ್ಯಮಂತ್ರಿ ಸೌರ ಕೃಷಿ ಯೋಜನೆ:
ಈ ಯೋಜನೆಯಡಿ ಕೆಪಿಟಿಸಿಎಲ್ ಉಪಕೇಂದ್ರಗಳಲ್ಲಿ ಸೌರ ವಿದ್ಯುತ್ ಸ್ಥಾವರಗಳ ನಿರ್ಮಾಣ ಮಾಡಲಾಗುವುದು. ಅಂದಾಜು 10,500 ಕೋಟಿ ರೂ. ವೆಚ್ಚದಲ್ಲಿ 300 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರಗಳ ಆರಂಭಗೊಳಿಸಲು ನಿರ್ಧರಿಸಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!