ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡಿಸುತ್ತಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂ.ಯ ಈ ಬಜೆಟ್‌ನಲ್ಲಿ 7 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ.

ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳು ಯಾವುವು?
1.ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ: ಕೃಷಿ ಸಂಸ್ಕರಣೆ, ಕೃಷಿ ತ್ಯಾಜ್ಯಗಳ ಮರುಬಳಕೆ, ಮಾರುಕಟ್ಟೆ ಸಂಪರ್ಕ ಬಲಪಡಿಸಲು ಹೊಸ ಕಾರ್ಯಕ್ರಮ ಘೋಷಿಸಿದ್ದಾರೆ. ರೈತರ ಸ್ಥಿರ ಮತ್ತು ಹೆಚ್ಚುವರಿ ಆದಾಯ ಮೂಲ ರಚಿಸಲು ಈ ಯೋಜನೆ ಪೂರಕವಾಗಿದೆ. ಈ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೆ ಬರಲಿದೆ.

2.ವಸುಧಾಮೃತ ಕಾರ್ಯಕ್ರಮ: ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮುಂದಿನ ಮೂರು ವರ್ಷಗಳಲ್ಲಿ ಈ ಕಾರ್ಯಕ್ರಮ ಜಾರಿಯಾಗಲಿದೆ.

3.ಸಸ್ಯ ಸಂಜೀವಿನಿ ಯೋಜನೆ: ಪರಿಸರ ಸ್ನೇಹಿ ಜೈವಿಕ ಪೀಡನಾಶಕ, ಜೈವಿಕ ಕೀಟನಾಶಕಗಳ ಜೊತೆ ಇತರೆ ಸುರಕ್ಷಿತ ನಿರ್ವಹಣಾ ಕ್ರಮಗಳಿಗಾಗಿ ಈ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಜಾರಿ ಮಾಡುವ ಉದ್ದೇಶವಿದೆ.

4.ಫಲಧಾರೆ ಕಾರ್ಯಕ್ರಮ: ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆ ನಿವಾರಣೆಗೆ ಈ ಕಾರ್ಯಕ್ರಮದಡಿ ಶಿಬಿರಗಳ ಆಯೋಜನೆ ಮಾಡಲಾಗುವುದು. 5 ಕೋಟಿ ರೂ. ವೆಚ್ಚದಲ್ಲಿ 1000 ಗ್ರಾಮ ಪಂಚಾಯತಿಗಳಲ್ಲಿ “ಫಲಧಾರೆ” ಎಂಬ ಹೆಸರಿನಲ್ಲಿ ಶಿಬಿರ ನಡೆಸಲಾಗುವುದು.

5.ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ: 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 11 ಪಾಲಿಟೆಕ್ನಿಕ್ ಕಾಲೇಜುಗಳನ್ನು ಮಾದರಿ ಸಂಸ್ಥೆಗಳಾಗಿ ಅಭಿವೃದ್ಧಿ ಮಾಡುವ ಉದ್ದೇಶದಿಂದ 2,500 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೊಳಿಸಲಾಗುವುದು.

6.ಕೇರಳ ಮಾದರಿಯ ಗಂಭೀರ ಕಾಯಿಲೆಗಳಿರುವ ರೋಗಿಗಳಿಗೆ ಗೃಹಾಧಾರಿತ ಉಪಶಮನ ಆರೈಕೆ:
ಮನೆಗಳಲ್ಲೇ ಚಿಕಿತ್ಸಾ ಸೇವೆ, ಗಂಭೀರ ದೀರ್ಘಕಾಲೀನ, ಮಾರಣಾಂತಿಕ ಕಾಯಿಲೆಗಳಿರುವ ರೋಗಿಗಳಿಗೆ ಈ ಯೋಜನೆಯಡಿ ಆರೈಕೆ ಮಾಡಲಾಗುವುದು. Palliym India ಸಂಸ್ಥೆಯ ಸಹಯೋಗದೊಂದಿಗೆ ಯೋಜನೆಯನ್ನು ಜಾರಿಗೊಳಿಸಲಾಗುವುದು

7.ಮುಖ್ಯಮಂತ್ರಿ ಸೌರ ಕೃಷಿ ಯೋಜನೆ:
ಈ ಯೋಜನೆಯಡಿ ಕೆಪಿಟಿಸಿಎಲ್ ಉಪಕೇಂದ್ರಗಳಲ್ಲಿ ಸೌರ ವಿದ್ಯುತ್ ಸ್ಥಾವರಗಳ ನಿರ್ಮಾಣ ಮಾಡಲಾಗುವುದು. ಅಂದಾಜು 10,500 ಕೋಟಿ ರೂ. ವೆಚ್ಚದಲ್ಲಿ 300 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರಗಳ ಆರಂಭಗೊಳಿಸಲು ನಿರ್ಧರಿಸಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!