2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಈ ಮಹತ್ವದ ಆಯವ್ಯಯ ಮಂಡಿಸುತ್ತಿದ್ದಾರೆ. ಇದು ಕೇವಲ ಬಜೆಟ್ ಮಾತ್ರವಲ್ಲ, ರಾಜ್ಯದ ಇತಿಹಾಸದಲ್ಲೇ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ.ಕರುನಾಡಿನ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಈಗ ಎಲ್ಲರ ಕಣ್ಣು ಇಂದು ಮಂಡನೆಯಾಗಲಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಮೇಲಿದೆ.

ರಾಜ್ಯದಲ್ಲಿ ಅತಿ ಹೆಚ್ಚು ಹಾಗೂ ದೇಶದಲ್ಲಿ ಎರಡನೇ ಅತಿ ಹೆಚ್ಚು ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯ ತಮ್ಮ ಆಯ-ವ್ಯಯ ಲೆಕ್ಕ ಬಿಚ್ಚಿಟ್ಟಿದ್ದಾರೆ .

ರಾಜ್ಯದ ಕೆಲ ದೇವಸ್ಥಾನಗಳಿಗೂ ಬಜೆಟ್ ನಲ್ಲಿ ಸಿಹಿ ಸುದ್ದಿ ಸಿಕ್ಕಿದೆ. ಕುಕ್ಕೆ ಶ್ರೀ ಸುಬ್ರಮಣ್ಯ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಪ್ರತ್ಯೇಕ ಪ್ರಾಧಿಕಾರ ಸ್ಥಾಪನೆ ಮಾಡಲಾಗಿದೆ. ಹೊರ ರಾಜ್ಯದ ಪುಣ್ಯ ಕ್ಷೇತ್ರಗಳಲ್ಲಿರುವ ಮುಜರಾಯಿ ಅಧೀನದ ಛತ್ರಗಳ ನವೀಕರಣ, ವಾರಣಾಸಿಯ ಛತ್ರ, ಮಂತ್ರಾಲಯ ಶ್ರೀ ರಾಘವೇಂದ್ರ ದೇವಸ್ಥಾನದ ಛತ್ರ, ಶ್ರೀಶೈಲಂ ಕ್ಷೇತ್ರದ ಛತ್ರ, ತುಳಜಾಪುರ ಕ್ಷೇತ್ರದ ಛತ್ರ ನವೀಕರಣಕ್ಕೆ ನಿರ್ಧಾರ ಮಾಡಿದ್ದಾರೆ. ಮುಜರಾಯಿ ವ್ಯಾಪ್ತಿಯ 259 ಕಲ್ಯಾಣಿಗಳನ್ನು ಪುಮಶ್ಚೇತನಕ್ಕೆ ಕ್ರಮ, ಕಾಶ್ಮೀರದ ಮಾತಾ ವೈಷ್ಣೋದೇವಿ ಯಾತ್ರಿಕರಿಗೆ 5 ಸಾವಿರ ಧನಸಹಾಯ, ಡಿಬಿಟಿ ಮೂಲಕ ಯಾತ್ರಿಕರಿಗೆ ಹಣ ಸಂದಾಯ ಮಾಡಲು ಒಪ್ಪಿಗೆ ನೀಡಲಾಗಿದೆ.

ಈ ವರ್ಷ 2026-27ನೇ ಸಾಲಿನ ರಾಜ್ಯ ಬಜೆಟ್​​ ಮಂಡನೆ ಮಾಡಲಾಗಿದೆ. ಈ ಬಾರಿ ಇಲಾಖೆಗಳಿಗೆ ರೆವಿನ್ಯೂ ಟಾರ್ಗೆಟ್ ನೀಡಲಾಗಿದೆ.

ಸಾರಿಗೆ ಇಲಾಖೆಗೆ: 15500 ಕೋಟಿ ಟಾರ್ಗೆಟ್
ನೊಂದಣಿ ಮುದ್ರಾಂಕ: 29000 ಕೋಟಿ ಟಾರ್ಗೆಟ್
ಅಬಕಾರಿ ಇಲಾಖೆಗೆ: 45000 ಕೋಟಿ ಟಾರ್ಗೆಟ್
ಗಣಿ ಇಲಾಖೆಗೆ: 11000 ಕೋಟಿ ಟಾರ್ಗೆಟ್
ವಾಣಿಜ್ಯ ಇಲಾಖೆಗೆ: 125000 ಕೋಟಿ ಟಾರ್ಗೆಟ್

 

ಬಜೆಟ್ ನಲ್ಲಿ ಕನ್ನಡ ಚಿತ್ರರಂಗಕ್ಕೆ ಕಿರು ಕಾಣಿಕೆ ಕೊಟ್ಟ ರಾಜ್ಯ ಸರ್ಕಾರ!

ಈ ವರ್ಷದ ಬಜೆಟ್​​ನಲ್ಲಿ ಕನ್ನಡ ಚಿತ್ರರಂಗಕ್ಕೆ ರಾಜ್ಯ ಸರ್ಕಾರ ಕಿರು ಕಾಣಿಕೆ ಕೊಟ್ಟಿದೆ. ಫಿಲ್ಮಿ ಸಿಟಿ ಯಲ್ಲಿ ಥೀಮ್ ಪಾರ್ಕ್, ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಸಿದ್ದರಾಮಯ್ಯ ಚಿತ್ರರಂಗಕ್ಕೆ ಸಿನಿಮಿತ್ರನ ಕಾಣಿಕೆ ಕೊಟ್ಟಿದ್ದಾರೆ. ಚಿತ್ರರಂಗದ ನೆರವಿಗೆ “ಸಿನಿ ಮಿತ್ರ” ಡಿಜಿಟಲ್ ವ್ಯವಸ್ಥೆ ಜಾರಿಗೆ ಅಸ್ತು ಎನ್ನಲಾಗಿದೆ. ಉತ್ತಮ ಚಿತ್ರಗಳಿಗೆ ಸಬ್ಸಿಡಿಗಾಗಿ 20 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಆದರೆ ಮೈಸೂರಿನ ಫಿಲ್ಮಿ ಸಿಟಿ ಕೆಲಸ ಆರಂಭಿಸುವ ಬಗ್ಗೆ ಬಜೆಟ್ ನಲ್ಲಿ ಸುಳಿವು ಇಲ್ಲ, ಈ ಬಾರಿಯ ಬಜೆಟ್ ನಲ್ಲೂ ಜನತಾ ಟಾಕೀಸ್ ಬಗ್ಗೆ ಸರ್ಕಾರ ಗಮನ ಹರಿಸಿಲ್ಲ.

ರಾಜ್ಯ ಬಜೆಟ್​​ನಲ್ಲಿ ಈ ಬಾರಿ ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಅನುದಾನ?

ಈ ಬಾರಿಯ 2026-27 ನೇ ಸಾಲಿನ ಬಜೆಟ್​​ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಅನುದಾನ ಘೋಷಣೆ ಮಾಡಿದ್ದಾರೆ ನೋಡಿ.
ಪಶುಸಂಗೋಪನೆ – 4084 ಕೋಟಿ
ಕೃಷಿ ಮತ್ತು ತೋಟಗಾರಿಕೆ – 8373 ಕೋಟಿ
ಆಹಾರ, ನಾಗರೀಕ ಸರಬರಾಜು – 7942 ಕೋಟಿ
ಲೊಕೋಪಯೋಗಿ – 11424 ಕೋಟಿ
ಸಮಾಜ ಕಲ್ಯಾಣ ಇಲಾಖೆ- 18612 ಕೋಟಿ
ಕಂದಾಯ ಇಲಾಖೆ- 19845 ಕೋಟಿ
ಆರೋಗ್ಯ ಕುಟುಂಬ ಕಲ್ಯಾಣ – 17818 ಕೋಟಿ
ಶಿಕ್ಷಣ ಇಲಾಖೆ- 47224 ಕೋಟಿ
ಮಹಿಳಾ ಮಕ್ಕಳ ಕಲ್ಯಾಣ – 34929 ಕೋಟಿ
ಇಂಧನ ಇಲಾಖೆ- 29947 ಕೋಟಿ
ಗ್ರಾಮೀಣಾಭಿವೃದ್ಧಿ ಇಲಾಖೆ- 26559 ಕೋಟಿ
ನೀರಾವರಿ- 22436 ಕೋಟಿ
ನಗರಾಭಿವೃದ್ಧಿ,ವಸತಿ ಇಲಾಖೆ- 22203 ಕೋಟಿ

ಒಳಾಡಳಿತ ಬಂದರು- 23100 ಕೋಟಿ
ಇತರೆ ವೆಚ್ಚ- 172757 ಕೋಟಿ

ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯೂ ಹಣ ಮೀಸಲಿಟ್ಟ ಸರ್ಕಾರ

ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯೂ ಸರ್ಕಾರ ಹಣ ಮೀಸಲಿಟ್ಟಿದೆ. ಹಾಗಾದ್ರೆ ಯಾವೆಲ್ಲಾ ಯೋಜನೆ ಎಷ್ಟು ಅನುದಾನ ಮೀಸಲಿಟ್ಟಿದ್ದಾರೆ?
ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಹಣ ಮೀಸಲು
ಅನ್ನ ಭಾಗ್ಯ ಯೋಜನೆಗೆ 6,200 ಕೋಟಿ ಮೀಸಲು
ಗೃಹ ಜ್ಯೋತಿ ಯೋಜನೆಗೆ ಈ ವರ್ಷ 10,578 ಕೋಟಿ ಮೀಸಲು
ಶಕ್ತಿ ಯೋಜನೆಗೆ 5,300 ಕೋಟಿ ಹಣ ಮೀಸಲು
ಯುವ ನಿಧಿಗೆ ಯಾವುದೇ ಅನುದಾನ ಮೀಸಲಿಡದ ಸರ್ಕಾರ

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!