
ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ ಎಂದರು.





