ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ. 15 ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೇರಿಫೇರಲ್ ರಿಂಗ್ ರೋಡ್ ಗೆ 3000ಕೋಟಿ ಕೊಡುವುದಾಗಿ ಹೇಳಿದ್ದರು.ಅದೂ ಇಲ್ಲ. 3000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ..?ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ ಎಂದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!