ದರ್ಶನ್ ಜಾಮೀನು ರದ್ದತಿಗೆ ರಮ್ಯಾ ಪ್ರತಿಕ್ರಿಯೆ ಏನು.?

ದರ್ಶನ್ ಮತ್ತೆ ಜೈಲಿಗೆ; ನಟಿ ರಮ್ಯಾ ರಿಯಾಕ್ಷನ್ ಏನು?

ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬಳಿಕ ನಟಿ ರಮ್ಯಾ ಅವರು ಪ್ರತಿಕ್ರಿಯಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಯುತ ಪ್ರಕ್ರಿಯೆಗೆ ಅವರು ಒತ್ತು ನೀಡಿ ಎಂದಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದನ್ನು ಒತ್ತಿ ಹೇಳಿದ್ದಾರೆ. ಅವರ ಪೋಸ್ಟ್ ಈಗ ಎಲ್ಲ ಕಡೆಗಳಲ್ಲೂ ವೈರಲ್ ಆಗುತ್ತಿದೆ.

ನಟ ದರ್ಶನ್ ಅವರು ಮತ್ತೆ ಜೈಲು ಸೇರಲಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಈ ಬೆನ್ನಲ್ಲೇ ಅವರನ್ನು ಇಂದೇ ಬಂಧಿಸೋ ಸಾಧ್ಯತೆ ಇದೆ. ಈಗ ದರ್ಶನ್ ಪ್ರಕರಣದಲ್ಲಿ ನಟಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ. ಇಷ್ಟು ದಿನ ರಮ್ಯಾ vs ದರ್ಶನ್ ಫ್ಯಾನ್ಸ್ ಎಂಬ ಪರಿಸ್ಥಿತಿ ನಿರ್ಮಾಣ ಆಗಿತ್ತು. ಈಗ ದರ್ಶನ್ ಜಾಮೀನು ರದ್ದು ಆದೇಶದ ಬೆನ್ನಲ್ಲೇ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ. ‘ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಬಲವಾದ ಸಂದೇಶವನ್ನು ರವಾನಿಸುತ್ತದೆ’ ಎಂದಿದ್ದಾರೆ ರಮ್ಯಾ.

‘ನ್ಯಾಯಯುತವಾಗಿ ಪ್ರಕ್ರಿಯೆಯನ್ನು ಅನುಸರಿಸಿ. ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಳ್ಳಿ. ಇದು ದೀರ್ಘ ಮತ್ತು ಕಠಿಣ. ಆದರೆ ಸುರಂಗದ ಕೊನೆಯಲ್ಲಿ ಬೆಳಕು ಇದೆ ಎಂಬ ನಂಬಿಕೆ ಇರಲಿ ಎಂದು ನಾನು ಇತರರಿಗೆ ಹೇಳುತ್ತೇನೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ಸಿಕ್ಕೇ ಸಿಗುತ್ತದೆ. ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ’ ಎಂದು ರಮ್ಯಾ ಕೋರಿದ್ದಾರೆ.

ಇತ್ತೀಚೆಗೆ ಮಾತನಾಡಿದ್ದ ರಮ್ಯಾ, ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ನಂಬಿಕೆ ಇದೆ’ ಎಂದು ಹೇಳಿದ್ದರು. ಈ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ರಮ್ಯಾಗೆ ಅಶ್ಲೀಲ ಸಂದೇಶ ರವಾನೆ ಮಾಡಿದ್ದರು. ಇದು ರಮ್ಯಾ ಅಸಮಾಧಾನಕ್ಕೆ ಕಾರಣ ಆಗಿತ್ತು. ರಮ್ಯಾ ಈ ಸಂಬಂಧ ದೂರು ಕೂಡ ದಾಖಲಿಸಿದ್ದರು. ಈ ದೂರು ಆಧರಿಸಿ ಕೆಲವರನ್ನು ಬಂಧಿಸಲಾಗಿದೆ. ಈಗ ದರ್ಶನ್ ಬಂಧನ ಬೆನ್ನಲ್ಲೇ ರಮ್ಯಾ ಖುಷಿಯಾಗಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!