ನಾನು ಬಳ್ಳಾರಿಗೆ ಬಂದಾಗ ರೆಡ್ಡಿ-ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು : ಸಿಎಂ ಸಿದ್ದರಾಮಯ್ಯ

ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ. ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು.
ದೇವಸ್ಥಾನದ ಬಾಗಿಲಲ್ಲಿ ಒಬ್ನೇ ನಿಂತು ಭಾಷಣ ಮಾಡಿ ಹೋಗಿದ್ದೆ. ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡೋಕೂ ಜನ ಭಯ ಬೀಳ್ತಿದ್ರು ಎಂದು ರೆಡ್ಡಿ ದರ್ಬಾರ್ ಅವಧಿಯ ಘಟನೆಗಳನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು ದಬ್ಬಾಳಿಕೆ, ದೌರ್ಜನ್ಯದ ಆ ದಿನಗಳನ್ನು ನೆನಪಿಸಿದರು.

ಅಕ್ರಮ ಗಣಿಗಾರಿಕೆ ವಿರುದ್ಧ, ರೆಡ್ಡಿ ಬ್ರದರ್ಸ್ ಬಳ್ಳಾರಿಯನ್ನು ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್ ಗೆ ಕಾಲಿಟ್ಟರೂ ಜಿಲ್ಲಾ ಮಟ್ಟದ ಅಧಿಕಾರಿಗಳೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಣಲು ಬರಲಿಲ್ಲ. ಆ ಮಟ್ಟದಲ್ಲಿ ಅಧಿಕಾರಿಗಳಲ್ಲಿ ಭಯ, ಭೀತಿ ಸೃಷ್ಟಿ ಮಾಡಿದ್ದರು.

ನಾನು ಇಬ್ರಾಹಿಂ ಚುನಾವಣಾ ಪ್ರಚಾರಕ್ಕೆ ಬಂದರೆ ಕಾರ್ಯಕ್ರಮ ಮಾಡಲು, ನನಗೆ ಭಾಷಣ ಮಾಡಲು ಜಾಗ ಕೊಡಲಿಲ್ಲ. ದೇವಸ್ಥಾನದ ಬಾಗಿಲಲ್ಲಿ ನಾನು ಭಾಷಣ ಮಾಡಿ ಹೋದೆ. ಮತ್ತೆ ಏನಾದರೂ ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಮತ್ತೆ ಅದೇ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ. ಬಿಜೆಪಿಯನ್ನು ಸೋಲಿಸಿ ಬಳ್ಳಾರಿಯನ್ನು ಉಳಿಸಿ ಎಂದು ಕರೆ ನೀಡಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!