ಭಾರತ- ಇಂಗ್ಲೆಂಡ್ ಸೆಮೀಸ್ ಕಾಳಗ ಯಾವಾಗ ಆರಂಭ?

ಭಾರತ- ಇಂಗ್ಲೆಂಡ್ ಸೆಮೀಸ್ ಕಾಳಗ ಯಾವಾಗ ಆರಂಭ?

2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಫೆಬ್ರವರಿ 5ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ಮುಖಾಮುಖಿಯಾಗಲಿವೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ಪಂದ್ಯದ ನೇರಪ್ರಸಾರ ವೀಕ್ಷಿಸಬಹುದು. ಎರಡೂ ತಂಡಗಳ ಬಲಿಷ್ಠ ಸ್ಕ್ವಾಡ್‌ಗಳ ವಿವರ ಇಲ್ಲಿದೆ. ಈ ರೋಚಕ ಕದನಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

2026 ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯಗಳು ಇಂದಿನಿಂದ ಆರಂಭವಾಗಲಿವೆ. ಇಂದು ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್‌ ತಂಡವನ್ನು ಎದುರಿಸಲಿದೆ. ನಾಳೆ ಆತಿಥೇಯ ಭಾರತ ತಂಡವನ್ನು ಇಂಗ್ಲೆಂಡ್‌ ಎದುರಿಸಲಿದೆ. ಒಂದೆಡೆ ಭಾರತ ತಂಡ ಗುಂಪು ಹಂತದಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿತ್ತು. ಇತ್ತ ಇಂಗ್ಲೆಂಡ್‌ ಒಂದು ಪಂದ್ಯದಲ್ಲಿ ಸೋತಿತ್ತಾದರೂ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿತ್ತು. ಸೂಪರ್ 8 ಸುತ್ತಿನಲ್ಲಿ ಭಾರತ 1 ಪಂದ್ಯವನ್ನು ಸೋತು, 2 ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಟಿಕೆಟ್ ಪಡೆದರೆ, ಇತ್ತ ಇಂಗ್ಲೆಂಡ್‌ ಆಡಿದ ಮೂರು ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಹೀಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಲಾಗಿದೆ. ಹೀಗಾಗಿ ಈ ಹೈವೋಲ್ಟೇಜ್ ಕದನದ ಪೂರ್ಣ ವಿವರ ಇಲ್ಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಫೆಬ್ರವರಿ 5 ರಂದು ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್​ನ ವಿವಿಧ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ ಸ್ಟಾರ್​ನಲ್ಲೂ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ

ಉಭಯ ತಂಡಗಳು
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್.

ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮೀ ಓವರ್ಟನ್, ಆದಿಲ್ ರಶೀದ್, ಫಿಲಿಪ್ ಸಾಲ್ಟ್, ಜೋಶ್ ಟಂಗ್,

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!