ಗೃಹ ಲಕ್ಷ್ಮೀ ಯೋಜನೆಯ 5 ಸಾವಿರ ಕೋಟಿ‌ ಹಣ ಎಲ್ಲಿ ಹೋಯ್ತು! ತಪ್ಪು ಲೆಕ್ಕ ಕೊಟ್ರಾ ಲಕ್ಷ್ಮೀ ಹೆಬ್ಬಾಳ್ಕರ್?

ಬೆಳಗಾವಿ : ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಅಧಿವೇಶನದಲ್ಲಿ ಗಮನಸೆಳೆದಿದ್ದಾರೆ. ಆದ್ರೆ, ಈ ಬಗ್ಗೆ ಮಹಿಳಾ ಮತ್ತು ಮಕ್ಕಳು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಪ್ಪು ಲೆಕ್ಕಾ ಕೊಟ್ಟಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಗೃಹ ಲಕ್ಷ್ಮೀ ಹಣವನ್ನು ಆಗಸ್ಟ್​ ತಿಂಗಳವರೆಗೂ ನೀಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ಆದ್ರೆ, ಆಗಸ್ಟ್​ ವರೆಗೂ ಹಣ ಬಿಡುಗಡೆ ಮಾಡಿಲ್ಲ. ಈ ಸಂಬಂಧ ಮಹೇಶ್ ಟೆಂಗಿನಕಾಯಿ ಅವರು ಸದನದಲ್ಲಿಂದು ಸರ್ಕಾರದ ಅಧಿಕೃತ ದಾಖಲೆ ಬಿಡುಗಡೆ ಮಾಡಿದ್ದು, ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಡುಗಡೆ ಮಾಡಿಲ್ಲದಿರುವುದು ದಾಖಲೆ ಮೂಲಕ ಬಹಿರಂಗವಾಗಿದೆ. ಹಾಗಾದ್ರೆ, ಐದು ಸಾವಿರ ಕೋಟಿ ರೂಪಾಯಿ ಎಲ್ಲೋಯ್ತು ಎಂದು ವಿಪಕ್ಷ ಪ್ರಶ್ನಿಸಿದೆ.

ಈ ಬಗ್ಗೆ ಸ್ಲೀಕರ್​​​​ಗೆ ಪತ್ರ
ಈ ಸಂಬಂಧ ಮಹೇಶ್ ಟೆಂಗಿನಕಾಯಿ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ಪತ್ರ ಬರೆದಿದ್ದು, ಆಗಸ್ಟ್ 2025ರ ವರೆಗೆ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಉತ್ತರಿಸಿದ್ದಾರೆ. ಆದರೆ ಬಿಡುಗಡೆ ಮಾಡಿಲ್ಲ ಎಂಬುದಕ್ಕೆ ನನ್ನ ಸರ್ಕಾರಿ ದಾಖಲೆ ಇದೆ. ಸದನಕ್ಕೆ ಸಚಿವರು ತಪ್ಪು ಮಾಹಿತಿ ನೀಡುತ್ತಿದ್ದಾರೆ . ಸದನದ ಹಕ್ಕು ಮತ್ತು ಗೌರವ ತೋರಿದ ಅಗೌರವ. ಈ ವಿಚಾರವಾಗಿ ತುರ್ತಾಗಿ ಸದನದಲ್ಲಿ ಮಾತನಾಡಲು ಅವಕಾಶ ಕೋಡಿ ಎಂದು ಪತ್ರ ಬರೆದಿದ್ದಾರೆ.

5 ಸಾವಿರ ಕೋಟಿ‌ ಹಣ ಎಲ್ಲಿ ಹೋಯ್ತು?
ದಾಖಲೆ ಬಿಡುಗಡೆ ಮಾಡಿದ ಬಳಿಕ ಪ್ರತಿಕ್ರಿಯಿಸಿರುವ ಮಹೇಶ್ ಟೆಂಗಿನಕಾಯಿ, ಡಿಸೆಂಬರ್ 9ರಂದು ಸದನದದಲ್ಲಿ ಗೃಹ ಲಕ್ಷ್ಮೀ ಹಣ ಬಿಡುಗಡೆ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಪ್ರಶ್ನೆ ಮಾಡಿದ್ದೆ. 2025ರ ಫೆಬ್ರವರಿ, ಮಾರ್ಚ್ ತಿಂಗಳ ಹಣ ಕೊಟ್ಟಿಲ್ಲ ಅಂತಾ ಕೇಳಿದ್ದೆ. ಇದಕ್ಕೆ ಸಚಿವರು ಆಗಸ್ಟ್​ ತಿಂಗಳವರೆಗೂ ಕೊಟ್ಟಿದ್ದೇವೆ ಎಂದು ಹೇಳಿದ್ರು. ಮತ್ತೆ ಪರಿಶೀಲಿಸುವಂತೆ ಕೇಳಿದ್ದೆವು, ಆದ್ರೂ ಕೊಟ್ಟಿರೋದಾಗಿ ಹೇಳಿದ್ರು. ಆದ್ರೆ, ಫೆಬ್ರವರಿ, ಮಾರ್ಚ್ ತಿಂಗಳ ‘ಗೃಹಲಕ್ಷ್ಮೀ’ ಹಣ ಬಿಡುಗಡೆ ಮಾಡಿಲ್ಲ. ಗದಗ, ಹಾವೇರಿ ಸೇರಿ ಮೂರು ಜಿಲ್ಲೆಗಳ ಬಗ್ಗೆ ದಾಖಲೆ ನೀಡಿದ್ದೇವೆ. ಫೆಬ್ರವರಿ, ಮಾರ್ಚ್ ತಿಂಗಳ ‘ಗೃಹಲಕ್ಷ್ಮೀ’ ಹಣ ಬಿಡುಗಡೆ ಮಾಡಿಲ್ಲ. ಬಿಡುಗಡೆ ಮಾಡಿದ್ರೆ 5 ಸಾವಿರ ಕೋಟಿ‌ ಹಣ ಎಲ್ಲಿ ಹೋಯ್ತು? ಎಂದು ಪ್ರಶ್ನಿಸಿದರು. ಈ ವಿಚಾರವನ್ನು ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಆರ್​.ಅಶೋಕ್ ಧ್ವನಿ ಎತ್ತಿದ್ದು, ಇದಕ್ಕೆ ಸಿಎಂ ಪ್ರತಿಕ್ರಿಯಿಸಿ, ಬಾಕಿ‌ ಇದ್ರೆ ಹಾಕುವುದಾಗಿ ಹೇಳಿದರು. ಅಲ್ಲದೇ ಸೋಮವಾರ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಮಜಾಯಿಷಿ ನೀಡಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!