IPL ಹರಾಜಿನ ಕಣದಲ್ಲಿ ಯಾರಿಗೆ ಕೈಹಿಡಿಯಲಿದೆ ಅದೃಷ್ಟ..?

ಐಪಿಎಲ್ ಆಟಗಾರರ ರಿಟೆನ್ಶನ್​​ ಭಾರೀ ಕುತೂಹಲ ಕೆರಳಿಸಿದೆ. ತೆರೆ ಹಿಂದೆ ಆಟಗಾರರ ರೀಟೇನ್ ಮತ್ತು ರಿಲೀಸ್ ಪ್ಲಾನ್ ಮಾಡಿಕೊಳ್ಳುತ್ತಿರುವ ಫ್ರಾಂಚೈಸಿಗಳು, ಸೀಕ್ರೆಟ್ ಆಗೇ ಕೆಲಸ ಮಾಡುತ್ತಿವೆ. ಐಪಿಎಲ್ ಆಟಗಾರರ ರಿಟೆನ್ಶನ್​​ ಭಾರೀ ಕುತೂಹಲ ಕೆರಳಿಸಿದೆ. ತೆರೆ ಹಿಂದೆ ಆಟಗಾರರ ರೀಟೇನ್ ಮತ್ತು ರಿಲೀಸ್ ಪ್ಲಾನ್ ಮಾಡಿಕೊಳ್ಳುತ್ತಿರುವ ಫ್ರಾಂಚೈಸಿಗಳು, ಸೀಕ್ರೆಟ್ ಆಗೇ ಕೆಲಸ ಮಾಡುತ್ತಿವೆ. ಡೆಡ್​​ಲೈನ್​​ಗೆ ಇನ್ನು ಕೇವಲ ನಾಲ್ಕೇ ನಾಲ್ಕು ದಿನಗಳು ಮಾತ್ರ ಬಾಕಿ ಉಳಿದಿದೆ. ಆದ್ರೂ ಫ್ರಾಂಚೈಸಿಗಳು ಕ್ಲೋಸ್ಡ್ ಡೋರ್ ಹಿಂದೆನೇ ಚಟುವಟಿಕೆಗಳಲ್ಲಿ ಬ್ಯೂಸಿಯಾಗಿವೆ.

ಐಪಿಎಲ್ ಸೀಸನ್-19 ಹರಾಜಿಗೂ ಮುನ್ನ ಪ್ಲೇಯರ್ಸ್ ರಿಟೆನ್ಶನ್,​​​​​​​​​​​​​​​ ಫ್ರಾಂಚೈಸಿಗಳಿಗೆ ಪ್ರತಿಷ್ಟೆಯ ಕಣವಾಗಿದೆ. ಆಟಗಾರರ ರಿಟೆನ್ಶನ್ ಅಥವಾ ರಿಲೀಸ್ ವಿಚಾರದಲ್ಲಿ ಫ್ರಾಂಚೈಸಿ ಒಂದೇ ಒಂದು ಯಡವಟ್ಟು ಮಾಡಿದ್ರೂ ಸೀಸನ್​​​ ಉದ್ದಕ್ಕೂ ಅದು ಇನ್ನಿಲ್ಲದಂತೆ ಕಾಡಲಿದೆ. ಹಾಗಾಗಿ ಹಗಲು ರಾತ್ರಿ ಎನ್ನದೇ ಫ್ರಾಂಚೈಸಿ ಮಾಲೀಕರು, ಆಟಗಾರರನ್ನ ಎಚ್ಚರಿಕೆಯಿಂದಲೇ ರೀಟೇನ್ ಮತ್ತು ರಿಲೀಸ್ ಮಾಡ್ತಿದ್ದಾರೆ. ಹಾಗೆ ಸಾರಥಿಯ ಆಯ್ಕೆಯಲ್ಲೂ, ಜಾಣ್ಮೆಯ ನಡೆ ಅನುಸರಿಸುತ್ತಿದ್ದಾರೆ.

ನಾಯಕ ಯಾರು..?
ರಾಜಸ್ಥಾನ್ ರಾಯಲ್ ತಂಡದ ನಾಯಕ ಸಂಜು ಸ್ಯಾಮ್ಸನ್, ತಂಡವನ್ನ ಬಿಡಲು ಧೃಡ ನಿರ್ಧಾರ ಮಾಡಿದ್ದಾರೆ. ಸದ್ಯ ಟ್ರೇಡ್ ಮೂಲಕ ವ್ಯವಹಾರ ನಡೆಸ್ತಿರುವ ಸಂಜು ಬದಲಿಗೆ ಆರ್​ಆರ್​, ನೂತನ ನಾಯಕನ ಆಯ್ಕೆಯಲ್ಲಿ ಬ್ಯೂಸಿಯಾಗಿದೆ. ರಾಜಸ್ಥಾನ್ ಮುಂದೆ 3 ಆಪ್ಶನ್​ಗಳಿವೆ. ರಿಯಾನ್ ಪರಾಗ್, ಯಶಸ್ವಿ ಜೈಸ್ವಾಲ್ ಮತ್ತು ಧೃವ್ ಜುರೆಲ್, ಈ ಮೂವರು ಯುವ ಕ್ರಿಕೆಟಿಗರಲ್ಲಿ ಒಬ್ಬನನ್ನ ಆರ್​ಆರ್​ ಸಾರಥಿಯಾಗಿ ನೇಮಕ ಮಾಡಬೇಕಿದೆ.

ಶಮಿಗೆ ಸಿಎಸ್​​ಕೆ ಗಾಳ?
ಚೆನ್ನೈ ಸೂಪರ್​ಕಿಂಗ್ಸ್​ ಇರೋ ಬರೋ ಆಟಗಾರರನ್ನೆಲ್ಲಾ ತಂಡಕ್ಕೆ ಸೆಳೆಯಲು ಮುಂದಾಗಿದೆ. ಒಂದೆಡೆ ಸಂಜು ಸ್ಯಾಮ್ಸನ್​​​​ಗೆ ಗಾಳ ಹಾಕಿರುವ ಸಿಎಸ್​ಕೆ, ಜೊತೆಯಲ್ಲೇ ಕೆ.ಎಲ್.ರಾಹುಲ್, ಇಶಾನ್ ಕಿಶನ್ ಮತ್ತಿತರೆ ಆಟಗಾರರ ಮೇಲೂ ಕಣ್ಣಿಟ್ಟಿದೆ. ಲೇಟೆಸ್ಟ್ ವಿಚಾರ ಏನಪ್ಪಾ ಅಂದ್ರೆ ಚೆನ್ನೈ, ಹಿರಿಯ ಮತ್ತು ಅನುಭವಿ ವೇಗಿ ಮೊಹಮ್ಮದ್ ಶಮಿಯನ್ನ ತಂಡಕ್ಕೆ ಕರೆತರಲು ಪ್ಲಾನ್ ಮಾಡಿಕೊಂಡಿದಿಯಂತೆ. ಆದ್ರೆ ಇದು ಎಷ್ಟು ನಿಜ ಅನ್ನೋದೇ, ಸದ್ಯಕ್ಕೆ ಎಲ್ಲರಿಗೂ ಕಾಡ್ತಿರೋ ಪ್ರಶ್ನೆ.

ಸನ್​ರೈಸರ್ಸ್ ಹೈದ್ರಾಬಾದ್ ತಂಡ, ಬಿಗ್ ಸ್ಟಾರ್​ಗಳನ್ನ ರಿಲೀಸ್ ಮಾಡುವ ಸುದ್ದಿ ಬಿರುಗಾಳಿಯಂತೆ ಬೀಸಿತ್ತು. ಅದ್ರಲ್ಲೂ ಪ್ರಮುಖವಾಗಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ ಮತ್ತು ಬಿಗ್ ಹಿಟ್ಟರ್ ಹೆನ್ರಿಚ್ ಕ್ಲಾಸನ್​ರನ್ನ ಎಸ್​ಆರ್​ಹೆಚ್ ತಂಡದಿಂದ ರಿಲೀಸ್ ಮಾಡ್ತಾರೆ ಅನ್ನೋದು ಎಲ್ಲೆಡೆ ಹಬ್ಬಿತ್ತು. ಆದ್ರೀಗ ಹೈದ್ರಾಬಾದ್ ಫ್ರಾಂಚೈಸಿ, ಇಶಾನ್ ಕಿಶನ್ ಮತ್ತು ಹೆನ್ರಿಚ್ ಕ್ಲಾಸನ್​​ ತಂಡದಲ್ಲೇ ಉಳಿಯಲಿದ್ದಾರೆ ಅನ್ನೋದನ್ನ ಸ್ಪಷ್ಟಪಡಿಸಿದೆ.

 

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!