IPL ಹರಾಜಿನ ಕಣದಲ್ಲಿ ಯಾರಿಗೆ ಕೈಹಿಡಿಯಲಿದೆ ಅದೃಷ್ಟ..?

ಐಪಿಎಲ್ ಆಟಗಾರರ ರಿಟೆನ್ಶನ್​​ ಭಾರೀ ಕುತೂಹಲ ಕೆರಳಿಸಿದೆ. ತೆರೆ ಹಿಂದೆ ಆಟಗಾರರ ರೀಟೇನ್ ಮತ್ತು ರಿಲೀಸ್ ಪ್ಲಾನ್ ಮಾಡಿಕೊಳ್ಳುತ್ತಿರುವ ಫ್ರಾಂಚೈಸಿಗಳು, ಸೀಕ್ರೆಟ್ ಆಗೇ ಕೆಲಸ ಮಾಡುತ್ತಿವೆ. ಐಪಿಎಲ್ ಆಟಗಾರರ ರಿಟೆನ್ಶನ್​​ ಭಾರೀ ಕುತೂಹಲ ಕೆರಳಿಸಿದೆ. ತೆರೆ ಹಿಂದೆ ಆಟಗಾರರ ರೀಟೇನ್ ಮತ್ತು ರಿಲೀಸ್ ಪ್ಲಾನ್ ಮಾಡಿಕೊಳ್ಳುತ್ತಿರುವ ಫ್ರಾಂಚೈಸಿಗಳು, ಸೀಕ್ರೆಟ್ ಆಗೇ ಕೆಲಸ ಮಾಡುತ್ತಿವೆ. ಡೆಡ್​​ಲೈನ್​​ಗೆ ಇನ್ನು ಕೇವಲ ನಾಲ್ಕೇ ನಾಲ್ಕು ದಿನಗಳು ಮಾತ್ರ ಬಾಕಿ ಉಳಿದಿದೆ. ಆದ್ರೂ ಫ್ರಾಂಚೈಸಿಗಳು ಕ್ಲೋಸ್ಡ್ ಡೋರ್ ಹಿಂದೆನೇ ಚಟುವಟಿಕೆಗಳಲ್ಲಿ ಬ್ಯೂಸಿಯಾಗಿವೆ.

ಐಪಿಎಲ್ ಸೀಸನ್-19 ಹರಾಜಿಗೂ ಮುನ್ನ ಪ್ಲೇಯರ್ಸ್ ರಿಟೆನ್ಶನ್,​​​​​​​​​​​​​​​ ಫ್ರಾಂಚೈಸಿಗಳಿಗೆ ಪ್ರತಿಷ್ಟೆಯ ಕಣವಾಗಿದೆ. ಆಟಗಾರರ ರಿಟೆನ್ಶನ್ ಅಥವಾ ರಿಲೀಸ್ ವಿಚಾರದಲ್ಲಿ ಫ್ರಾಂಚೈಸಿ ಒಂದೇ ಒಂದು ಯಡವಟ್ಟು ಮಾಡಿದ್ರೂ ಸೀಸನ್​​​ ಉದ್ದಕ್ಕೂ ಅದು ಇನ್ನಿಲ್ಲದಂತೆ ಕಾಡಲಿದೆ. ಹಾಗಾಗಿ ಹಗಲು ರಾತ್ರಿ ಎನ್ನದೇ ಫ್ರಾಂಚೈಸಿ ಮಾಲೀಕರು, ಆಟಗಾರರನ್ನ ಎಚ್ಚರಿಕೆಯಿಂದಲೇ ರೀಟೇನ್ ಮತ್ತು ರಿಲೀಸ್ ಮಾಡ್ತಿದ್ದಾರೆ. ಹಾಗೆ ಸಾರಥಿಯ ಆಯ್ಕೆಯಲ್ಲೂ, ಜಾಣ್ಮೆಯ ನಡೆ ಅನುಸರಿಸುತ್ತಿದ್ದಾರೆ.

ನಾಯಕ ಯಾರು..?
ರಾಜಸ್ಥಾನ್ ರಾಯಲ್ ತಂಡದ ನಾಯಕ ಸಂಜು ಸ್ಯಾಮ್ಸನ್, ತಂಡವನ್ನ ಬಿಡಲು ಧೃಡ ನಿರ್ಧಾರ ಮಾಡಿದ್ದಾರೆ. ಸದ್ಯ ಟ್ರೇಡ್ ಮೂಲಕ ವ್ಯವಹಾರ ನಡೆಸ್ತಿರುವ ಸಂಜು ಬದಲಿಗೆ ಆರ್​ಆರ್​, ನೂತನ ನಾಯಕನ ಆಯ್ಕೆಯಲ್ಲಿ ಬ್ಯೂಸಿಯಾಗಿದೆ. ರಾಜಸ್ಥಾನ್ ಮುಂದೆ 3 ಆಪ್ಶನ್​ಗಳಿವೆ. ರಿಯಾನ್ ಪರಾಗ್, ಯಶಸ್ವಿ ಜೈಸ್ವಾಲ್ ಮತ್ತು ಧೃವ್ ಜುರೆಲ್, ಈ ಮೂವರು ಯುವ ಕ್ರಿಕೆಟಿಗರಲ್ಲಿ ಒಬ್ಬನನ್ನ ಆರ್​ಆರ್​ ಸಾರಥಿಯಾಗಿ ನೇಮಕ ಮಾಡಬೇಕಿದೆ.

ಶಮಿಗೆ ಸಿಎಸ್​​ಕೆ ಗಾಳ?
ಚೆನ್ನೈ ಸೂಪರ್​ಕಿಂಗ್ಸ್​ ಇರೋ ಬರೋ ಆಟಗಾರರನ್ನೆಲ್ಲಾ ತಂಡಕ್ಕೆ ಸೆಳೆಯಲು ಮುಂದಾಗಿದೆ. ಒಂದೆಡೆ ಸಂಜು ಸ್ಯಾಮ್ಸನ್​​​​ಗೆ ಗಾಳ ಹಾಕಿರುವ ಸಿಎಸ್​ಕೆ, ಜೊತೆಯಲ್ಲೇ ಕೆ.ಎಲ್.ರಾಹುಲ್, ಇಶಾನ್ ಕಿಶನ್ ಮತ್ತಿತರೆ ಆಟಗಾರರ ಮೇಲೂ ಕಣ್ಣಿಟ್ಟಿದೆ. ಲೇಟೆಸ್ಟ್ ವಿಚಾರ ಏನಪ್ಪಾ ಅಂದ್ರೆ ಚೆನ್ನೈ, ಹಿರಿಯ ಮತ್ತು ಅನುಭವಿ ವೇಗಿ ಮೊಹಮ್ಮದ್ ಶಮಿಯನ್ನ ತಂಡಕ್ಕೆ ಕರೆತರಲು ಪ್ಲಾನ್ ಮಾಡಿಕೊಂಡಿದಿಯಂತೆ. ಆದ್ರೆ ಇದು ಎಷ್ಟು ನಿಜ ಅನ್ನೋದೇ, ಸದ್ಯಕ್ಕೆ ಎಲ್ಲರಿಗೂ ಕಾಡ್ತಿರೋ ಪ್ರಶ್ನೆ.

ಸನ್​ರೈಸರ್ಸ್ ಹೈದ್ರಾಬಾದ್ ತಂಡ, ಬಿಗ್ ಸ್ಟಾರ್​ಗಳನ್ನ ರಿಲೀಸ್ ಮಾಡುವ ಸುದ್ದಿ ಬಿರುಗಾಳಿಯಂತೆ ಬೀಸಿತ್ತು. ಅದ್ರಲ್ಲೂ ಪ್ರಮುಖವಾಗಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ ಮತ್ತು ಬಿಗ್ ಹಿಟ್ಟರ್ ಹೆನ್ರಿಚ್ ಕ್ಲಾಸನ್​ರನ್ನ ಎಸ್​ಆರ್​ಹೆಚ್ ತಂಡದಿಂದ ರಿಲೀಸ್ ಮಾಡ್ತಾರೆ ಅನ್ನೋದು ಎಲ್ಲೆಡೆ ಹಬ್ಬಿತ್ತು. ಆದ್ರೀಗ ಹೈದ್ರಾಬಾದ್ ಫ್ರಾಂಚೈಸಿ, ಇಶಾನ್ ಕಿಶನ್ ಮತ್ತು ಹೆನ್ರಿಚ್ ಕ್ಲಾಸನ್​​ ತಂಡದಲ್ಲೇ ಉಳಿಯಲಿದ್ದಾರೆ ಅನ್ನೋದನ್ನ ಸ್ಪಷ್ಟಪಡಿಸಿದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!