IPL ಹರಾಜಿನ ಕಣದಲ್ಲಿ ಯಾರಿಗೆ ಕೈಹಿಡಿಯಲಿದೆ ಅದೃಷ್ಟ..?

ಐಪಿಎಲ್ ಆಟಗಾರರ ರಿಟೆನ್ಶನ್​​ ಭಾರೀ ಕುತೂಹಲ ಕೆರಳಿಸಿದೆ. ತೆರೆ ಹಿಂದೆ ಆಟಗಾರರ ರೀಟೇನ್ ಮತ್ತು ರಿಲೀಸ್ ಪ್ಲಾನ್ ಮಾಡಿಕೊಳ್ಳುತ್ತಿರುವ ಫ್ರಾಂಚೈಸಿಗಳು, ಸೀಕ್ರೆಟ್ ಆಗೇ ಕೆಲಸ ಮಾಡುತ್ತಿವೆ. ಐಪಿಎಲ್ ಆಟಗಾರರ ರಿಟೆನ್ಶನ್​​ ಭಾರೀ ಕುತೂಹಲ ಕೆರಳಿಸಿದೆ. ತೆರೆ ಹಿಂದೆ ಆಟಗಾರರ ರೀಟೇನ್ ಮತ್ತು ರಿಲೀಸ್ ಪ್ಲಾನ್ ಮಾಡಿಕೊಳ್ಳುತ್ತಿರುವ ಫ್ರಾಂಚೈಸಿಗಳು, ಸೀಕ್ರೆಟ್ ಆಗೇ ಕೆಲಸ ಮಾಡುತ್ತಿವೆ. ಡೆಡ್​​ಲೈನ್​​ಗೆ ಇನ್ನು ಕೇವಲ ನಾಲ್ಕೇ ನಾಲ್ಕು ದಿನಗಳು ಮಾತ್ರ ಬಾಕಿ ಉಳಿದಿದೆ. ಆದ್ರೂ ಫ್ರಾಂಚೈಸಿಗಳು ಕ್ಲೋಸ್ಡ್ ಡೋರ್ ಹಿಂದೆನೇ ಚಟುವಟಿಕೆಗಳಲ್ಲಿ ಬ್ಯೂಸಿಯಾಗಿವೆ.

ಐಪಿಎಲ್ ಸೀಸನ್-19 ಹರಾಜಿಗೂ ಮುನ್ನ ಪ್ಲೇಯರ್ಸ್ ರಿಟೆನ್ಶನ್,​​​​​​​​​​​​​​​ ಫ್ರಾಂಚೈಸಿಗಳಿಗೆ ಪ್ರತಿಷ್ಟೆಯ ಕಣವಾಗಿದೆ. ಆಟಗಾರರ ರಿಟೆನ್ಶನ್ ಅಥವಾ ರಿಲೀಸ್ ವಿಚಾರದಲ್ಲಿ ಫ್ರಾಂಚೈಸಿ ಒಂದೇ ಒಂದು ಯಡವಟ್ಟು ಮಾಡಿದ್ರೂ ಸೀಸನ್​​​ ಉದ್ದಕ್ಕೂ ಅದು ಇನ್ನಿಲ್ಲದಂತೆ ಕಾಡಲಿದೆ. ಹಾಗಾಗಿ ಹಗಲು ರಾತ್ರಿ ಎನ್ನದೇ ಫ್ರಾಂಚೈಸಿ ಮಾಲೀಕರು, ಆಟಗಾರರನ್ನ ಎಚ್ಚರಿಕೆಯಿಂದಲೇ ರೀಟೇನ್ ಮತ್ತು ರಿಲೀಸ್ ಮಾಡ್ತಿದ್ದಾರೆ. ಹಾಗೆ ಸಾರಥಿಯ ಆಯ್ಕೆಯಲ್ಲೂ, ಜಾಣ್ಮೆಯ ನಡೆ ಅನುಸರಿಸುತ್ತಿದ್ದಾರೆ.

ನಾಯಕ ಯಾರು..?
ರಾಜಸ್ಥಾನ್ ರಾಯಲ್ ತಂಡದ ನಾಯಕ ಸಂಜು ಸ್ಯಾಮ್ಸನ್, ತಂಡವನ್ನ ಬಿಡಲು ಧೃಡ ನಿರ್ಧಾರ ಮಾಡಿದ್ದಾರೆ. ಸದ್ಯ ಟ್ರೇಡ್ ಮೂಲಕ ವ್ಯವಹಾರ ನಡೆಸ್ತಿರುವ ಸಂಜು ಬದಲಿಗೆ ಆರ್​ಆರ್​, ನೂತನ ನಾಯಕನ ಆಯ್ಕೆಯಲ್ಲಿ ಬ್ಯೂಸಿಯಾಗಿದೆ. ರಾಜಸ್ಥಾನ್ ಮುಂದೆ 3 ಆಪ್ಶನ್​ಗಳಿವೆ. ರಿಯಾನ್ ಪರಾಗ್, ಯಶಸ್ವಿ ಜೈಸ್ವಾಲ್ ಮತ್ತು ಧೃವ್ ಜುರೆಲ್, ಈ ಮೂವರು ಯುವ ಕ್ರಿಕೆಟಿಗರಲ್ಲಿ ಒಬ್ಬನನ್ನ ಆರ್​ಆರ್​ ಸಾರಥಿಯಾಗಿ ನೇಮಕ ಮಾಡಬೇಕಿದೆ.

ಶಮಿಗೆ ಸಿಎಸ್​​ಕೆ ಗಾಳ?
ಚೆನ್ನೈ ಸೂಪರ್​ಕಿಂಗ್ಸ್​ ಇರೋ ಬರೋ ಆಟಗಾರರನ್ನೆಲ್ಲಾ ತಂಡಕ್ಕೆ ಸೆಳೆಯಲು ಮುಂದಾಗಿದೆ. ಒಂದೆಡೆ ಸಂಜು ಸ್ಯಾಮ್ಸನ್​​​​ಗೆ ಗಾಳ ಹಾಕಿರುವ ಸಿಎಸ್​ಕೆ, ಜೊತೆಯಲ್ಲೇ ಕೆ.ಎಲ್.ರಾಹುಲ್, ಇಶಾನ್ ಕಿಶನ್ ಮತ್ತಿತರೆ ಆಟಗಾರರ ಮೇಲೂ ಕಣ್ಣಿಟ್ಟಿದೆ. ಲೇಟೆಸ್ಟ್ ವಿಚಾರ ಏನಪ್ಪಾ ಅಂದ್ರೆ ಚೆನ್ನೈ, ಹಿರಿಯ ಮತ್ತು ಅನುಭವಿ ವೇಗಿ ಮೊಹಮ್ಮದ್ ಶಮಿಯನ್ನ ತಂಡಕ್ಕೆ ಕರೆತರಲು ಪ್ಲಾನ್ ಮಾಡಿಕೊಂಡಿದಿಯಂತೆ. ಆದ್ರೆ ಇದು ಎಷ್ಟು ನಿಜ ಅನ್ನೋದೇ, ಸದ್ಯಕ್ಕೆ ಎಲ್ಲರಿಗೂ ಕಾಡ್ತಿರೋ ಪ್ರಶ್ನೆ.

ಸನ್​ರೈಸರ್ಸ್ ಹೈದ್ರಾಬಾದ್ ತಂಡ, ಬಿಗ್ ಸ್ಟಾರ್​ಗಳನ್ನ ರಿಲೀಸ್ ಮಾಡುವ ಸುದ್ದಿ ಬಿರುಗಾಳಿಯಂತೆ ಬೀಸಿತ್ತು. ಅದ್ರಲ್ಲೂ ಪ್ರಮುಖವಾಗಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ ಮತ್ತು ಬಿಗ್ ಹಿಟ್ಟರ್ ಹೆನ್ರಿಚ್ ಕ್ಲಾಸನ್​ರನ್ನ ಎಸ್​ಆರ್​ಹೆಚ್ ತಂಡದಿಂದ ರಿಲೀಸ್ ಮಾಡ್ತಾರೆ ಅನ್ನೋದು ಎಲ್ಲೆಡೆ ಹಬ್ಬಿತ್ತು. ಆದ್ರೀಗ ಹೈದ್ರಾಬಾದ್ ಫ್ರಾಂಚೈಸಿ, ಇಶಾನ್ ಕಿಶನ್ ಮತ್ತು ಹೆನ್ರಿಚ್ ಕ್ಲಾಸನ್​​ ತಂಡದಲ್ಲೇ ಉಳಿಯಲಿದ್ದಾರೆ ಅನ್ನೋದನ್ನ ಸ್ಪಷ್ಟಪಡಿಸಿದೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!