ಕುಮಾರಸ್ವಾಮಿ ಖಾಲಿ ಟ್ರಂಕ್​ ಎಂದಿದ್ಯಾಕೆ ಡಿಕೆ ಶಿವಕುಮಾರ್;​ ಕಬ್ಬನ್ ಪಾರ್ಕ್​​ನಲ್ಲಿ ಡಿಸಿಎಂ ನಡಿಗೆ​​

ಕಬ್ಬನ್ ಪಾರ್ಕ್ ನಲ್ಲಿರೋ ಶೇಷಾದ್ರಿ ಅಯ್ಯರ್ ಪ್ರತಿಮೆಗೆ ಡಿಸಿಎಂ ಡಿಕೆ ಶಿವಕುಮಾರ್​ ಪುಷ್ಪಾರ್ಚನೆ ಮಾಡಿದ್ರು. ಮೈಸೂರು ದಿವಾನ್ ಆಗಿದ್ದ ಶೇಷಾದ್ರಿ ಅಯ್ಯರ್, ವಾಕ್ ಮುಗಿಸಿ ವೇದಿಕೆಗೆ ಬಂದ ಡಿಸಿಎಂ ಜನರ ಜೊತೆ ಸಂವಾದ ನಡೆಸಿದ್ರು.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಇಂದು ಕಬ್ಬನ್​ ಪಾರ್ಕ್​​ನಲ್ಲಿ ನಡಿಗೆ ​ಕಾರ್ಯಕ್ರಮ ಹಮ್ಮಿಕೊಂಡಿದ್ರು. ಕೆಲ ಕಾಲ ಪಾರ್ಕ್​​ನಲ್ಲಿ ವಾಕಿಂಗ್ (Walking) ನಡೆಸಿದ್ರು. ಇದೇ ವೇಳೆ ಸಾರ್ವಜನಿಕರ ಜೊತೆ ಕೂಡ ಚರ್ಚೆ ನಡೆಸಿದ್ರು. ಬಿ ಖಾತೆಯಿಂದ ಎ ಖಾತೆ ಪರಿವರ್ತನೆ ಬಗ್ಗೆ ಮಾತಾಡ್ತಾ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ರು.

ಕಬ್ಬನ್ ಪಾರ್ಕ್​​ನಲ್ಲಿ ಡಿಸಿಎಂ ವಾಕ್​
ಬೆಂಗಳೂರು ನಡಿಗೆ ಮೂಲಕ ಜನರ ಜೊತೆ ಹೆಜ್ಜೆ ಹಾಕಲು ಡಿಸಿಎಂ ಕಬ್ಬನ್ ಪಾರ್ಕಿಗೆ ಆಗಮಿಸಿದ್ರು. ಇಂದು ಎಲ್ಲ ಪಾಲಿಕೆ ವ್ಯಾಪ್ತಿಯ ಜನರಿಗೂ ದೂರು ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಬೆಳಗ್ಗೆ 7 ಗಂಟೆಗೆ ಬೆಂಗಳೂರು ನಡಿಗೆ ಆರಂಭವಾಯ್ತು, ಡಿಸಿಎಂಗೆ ಶಾಸಕ ರಿಜ್ವಾನಾ ಹರ್ಷದ್, ಹ್ಯಾರಿಸ್ ಸಾಥ್ ನೀಡಿದ್ರು.

ಕುಮಾರಸ್ವಾಮಿ ಖಾಲಿ ಟ್ರಂಕ್
ಸಾರ್ವಜನಿಕರ ಜೊತೆಗೆ ಖಾತಾ ಬಗ್ಗೆ ಡಿಸಿಎಂ ಮಾತುಕತೆ ನಡೆಸಿದ್ದಾರೆ. ಮಾತುಕತೆ ಸಮಯದಲ್ಲಿ ಕುಮಾರಸ್ವಾಮಿಯನ್ನ ಖಾಲಿ ಟ್ರಂಕ್ ಎಂದು ಕರೆದಿದ್ದಾರೆ. ಇದೇ ವೇಳೆ ಸಾರ್ವಜನಿಕರು ಒಳ್ಳೆಯ ಕೆಲಸ ಮಾಡ್ತಾ ಇದ್ದೀರಾ ಡಿಕೆಶಿಗೆ ಹೇಳಿದ್ದಾರೆ. ಇದಕ್ಕೆ ಥ್ಯಾಂಕ್ ಯೂ ಎಂದ ಡಿಸಿಎಂ ನಿಮ್ಮಂತಹ ಎಜ್ಯುಕೇಟೆಡ್ ಬಿ‌ ಖಾತಾದಿಂದ ಎ ಖಾತಾ ಮಾಡುವಂತದನ್ನು ಒಪ್ಪುತ್ತಿದ್ದೀರಾ ಎಂದಿದ್ದಾರೆ.

ಜನರ ಜೊತೆ ಡಿಸಿಎಂ ಸಂವಾದ
ಕಬ್ಬನ್ ಪಾರ್ಕ್ ನಲ್ಲಿರೋ ಶೇಷಾದ್ರಿ ಅಯ್ಯರ್ ಪ್ರತಿಮೆಗೆ ಡಿಸಿಎಂ ಡಿಕೆ ಶಿವಕುಮಾರ್​ ಪುಷ್ಪಾರ್ಚನೆ ಮಾಡಿದ್ರು. ಮೈಸೂರು ದಿವಾನ್ ಆಗಿದ್ದ ಶೇಷಾದ್ರಿ ಅಯ್ಯರ್, ವಾಕ್ ಮುಗಿಸಿ ವೇದಿಕೆಗೆ ಬಂದ ಡಿಸಿಎಂ ಜನರ ಜೊತೆ ಸಂವಾದ ನಡೆಸಿದ್ರು.ಸಿಗ್ನಲ್​​ನಲ್ಲಿ ಸಮಸ್ಯೆ ಹೆಚ್ಚಾಗಿದೆ. ಟನಲ್‌ ರಸ್ತೆ ವಿರೋಧಿಸುತ್ತಿದ್ದು, ಮುಂಬೈನಲ್ಲಿ ಅವರೇ ಟನಲ್‌ ರಸ್ತೆ ಮಾಡ್ತಿದ್ದಾರೆ. ಯಾವುದೇ ಕಾರಣಕ್ಕೂ ಟನಲ್‌ ರಸ್ತೆ ಕಾರ್ಯ ನಿಲ್ಲಿಸಬೇಡಿ ಎಂದು ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಮನವಿ ಮಾಡಿದೆ. ಲಾಲ್ ಬಾಗ್ ರೀತಿ ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಜನರು ಮನವಿ ಮಾಡಿದ್ದಾರೆ. ಕಬ್ಬನ್ ಪಾರ್ಕ್ ಒಳಗಿರೋ ಲೀಸ್ ಬಿಲ್ಡಿಂಗ್​​ಗಳ ತೆರವಿಗೆ ಆಗ್ರಹಿಸಿದ್ದಾರೆ.

ಲಾಲ್ ಬಾಗ್ ಮಾದರಿಯಲ್ಲೇ ಕಬ್ಬನ್ ಪಾರ್ಕ್ ನಲ್ಲಿ ಟಿಕೆಟ್ ಮಾಡಿ, ಯಾವುದೇ ದಿನ ಕಬ್ಬನ್ ಪಾರ್ಕ್ ನಲ್ಲಿ ವಾಹನಗಳು ಓಡಾಡದಂತೆ ಮನವಿ ಮಾಡಿದ್ರು. ಯಾವುದೇ ಕಮರ್ಷಿಯಲ್ ಚಟುವಟಿಕೆ ನಡೆಯದಂತೆ ಡಿಸಿಎಂಗೆ ಮನವಿ ಸಲ್ಲಿಸಿದ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷ ಉಮೇಶ್ ಆಗ್ರಹಿಸಿದ್ರು.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!