ಗಣೇಶನಿಗೆ ‘ಏಕದಂತ’ ಹೆಸರು ಬಂದಿದ್ದೇಗೆ ?

ಯಾವುದೇ ಕಾರ್ಯಕ್ರಮ ಅಥವಾ ಸಮಾರಂಭ ಪ್ರಾರಂಭಿಸುವ ಮೊದಲು ಯಾವುದೇ ಅಡಚಣೆ ಅಥವಾ ತೊಂದರೆ ಆಗದಂತೆ ವಿಘ್ನನಿವಾರಕ ಗಣಪತಿಗೆ ಪೂಜೆ ಸಲ್ಲಿಸುವುದು ವಾಡಿಕೆ. ಗಣೇಶನಿಗೆ ಹಲವು ನಾಮ. ಗಜಾನನ, ಗಣಪತಿ, ವಕ್ರತುಂಡ, ವಿನಾಯಕ, ಏಕದಂತ, ಗಣೇಶ ಹೀಗೆ ಹತ್ತು ಹಲವು ಹೆಸರುಗಳಿಂದ ಗಣಪತಿಯನ್ನು ಆರಾಧಿಸಲಾಗುತ್ತದೆ. ಅವುಗಳಲ್ಲಿ ಏಕದಂತ ಎನ್ನುವ ಹೆಸರೂ ಒಂದು. ಗಣೇಶನ ಒಂದು ದಂತ ಮುರಿದಿರುವ ಕಾರಣ ಆತನನ್ನು ಏಕದಂತ ಎಂದು ಕರೆಯಲಾಗುತ್ತದೆ. ಗಣೇಶ ಏಕದಂತನಾಗಲು ಕಾರಣವೇನು? ಪುರಾಣದ ಕಥೆ ಏನು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ಪರಶುರಾಮ ಮತ್ತು ಗಣೇಶನ ನಡುವೆ ಯುದ್ಧ:
ಒಮ್ಮೆ ಕಾರ್ತವೀರ್ಯನನ್ನು ವಧೆ ಮಾಡಿ ಕೃತಾರ್ಥರಾದ ಪರಶುರಾಮರು ಕೈಲಾಸಕ್ಕೆ ಹೋದರು. ಅಲ್ಲಿ ಅವರಿಗೆ ಗಣಗಳ ಮತ್ತು ಗಣಾಧೀಶನಾದ ಗಣಪತಿಯ ಭೇಟಿ ಆಯಿತು. ಪರಶುರಾಮರಿಗೆ ಭಗವಾನ್‌ ಶಂಕರನ ಭೇಟಿ ಮಾಡುವ ಇಚ್ಛೆ ಇತ್ತು. ಆದರೆ ಆ ಸಮಯದಲ್ಲಿ ಶಿವ-ಪಾರ್ವತಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು.

ಪರಮೇಶ್ವರನಿಗೆ ನಮಸ್ಕಾರ ಮಾಡಲು ಅಂತಃಪುರಕ್ಕೆ ಹೊರಟಿದ್ದೇನೆ. ಅವರಿಗೆ ವಂದಿಸಿ ಶೀಘ್ರವಾಗಿ ಹಿಂತಿರುಗುವೆನು. ಯಾರ ಕೃಪೆಯಿಂದ ನಾನು ಕಾರ್ತವೀರ್ಯನನ್ನು ವಧಿಸಿ, ಇಪ್ಪತ್ತೊಂದು ಬಾರಿ ಭೂಮಿಯನ್ನು ಕ್ಷತ್ರೀಯ ರಹಿತ ಮಾಡಿದೆನೋ ಅಂಥಾ ಜಗದ್ಗುರುವನ್ನು ನಾನು ಶೀಘ್ರವಾಗಿ ಭೇಟಿ ಆಗಲೇಬೇಕು ಎಂದು ಪರಶುರಾಮರು ಗಣೇಶನಿಗೆ ತಿಳಿಸಿದರು. ಆದರೆ ಗಣೇಶ ಅವರನ್ನು ಒಳಗೆ ಬಿಡುವುದಿಲ್ಲ.

ಇದರಿಂದ ಕೋಪಗೊಂಡ ಪರಶುರಾಮರು ನನ್ನನ್ನು ಒಳಗೆ ಬಿಡದಿದ್ದರೆ ನನ್ನೊಂದಿಗೆ ಯುದ್ಧ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ನಾನು ಗೆದ್ದರೆ ಶಿವನನ್ನು ಭೇಟಿಯಾಗಲು ನನ್ನನ್ನು ಒಳಗೆ ಬಿಡಬೇಕು ಎಂದು ಪರಶುರಾಮರು ಗಣೇಶನಿಗೆ ಸವಾಲೆಸೆದರು. ಗಣೇಶನು ಯುದ್ಧದ ಸವಾಲನ್ನು ಸ್ವೀಕರಿಸಿದನು. ಇಬ್ಬರ ನಡುವೆ ಘೋರ ಯುದ್ಧ ನಡೆಯಿತು. ಯುದ್ಧದ ಸಮಯದಲ್ಲಿ, ಪರಶುರಾಮರು ತಮ್ಮ ಕೊಡಲಿಯಿಂದ ಗಣೇಶನ ಮೇಲೆ ದಾಳಿ ಮಾಡಿದರು. ಇದನ್ನು ಎದುರಿಸಲು ಗಣೇಶ ತನ್ನ ಎಡಗಡೆಯ ದಂತವನ್ನು ಬಳಸಿದರು. ಇದರ ಪರಿಣಾಮವಾಗಿ ಗಣೇಶನ ದಂತ ಮುರಿಯುತ್ತದೆ. ಗಣೇಶನ ಒಂದು ಹಲ್ಲು ಮುರಿದ ಕಾರಣ ಆತನನ್ನು ಏಕದಂತ ಎಂದು ಕರೆಯುತ್ತಾರೆ.

ಗಣೇಶನಷ್ಟೇ ಪರಶುರಾಮರು ಯುದ್ಧದಲ್ಲಿ ನಿಪುಣರಾಗಿರದ್ದರು. ಇವರಿಬ್ಬರ ನಡುವಿನ ಯುದ್ಧ ಎನ್ನುವಂತಹದ್ದು ಭಯಾನಕವಾಗಿದ್ದು, ಈ ಯುದ್ಧದಲ್ಲಿ ಗಣೇಶನು ತನ್ನ ಒಂದು ದಂತವನ್ನು ಕಳೆದುಕೊಳ್ಳುತ್ತಾನೆ. ಇದರ ನಂತರ ಗಣೇಶನು ಒಂದೇ ದಂತವನ್ನು ಹೊಂದಿದ್ದು, ಏಕದಂತ ಎನ್ನುವ ಹೆಸರನ್ನು ಪಡೆದುಕೊಳ್ಳುತ್ತಾನೆ.

ಮಹಾಭಾರತದ ಕಥೆ:
ಮತ್ತೊಂದು ಕಥೆಯ ಪ್ರಕಾರ, ಮಹಾಭಾರತವನ್ನು ಗಣೇಶ ಮಹಾಭಾರತವನ್ನ ಬರೆಯುವ ಸಮಯದಲ್ಲಿ, ಮಹರ್ಷಿ ವೇದವ್ಯಾಸರು ಗಣೇಶ ನಾನು ಹೇಳುತ್ತಾ ಹೋಗುತ್ತೇನೆ, ನೀನು ಬರೆಯುತ್ತಾ ಹೋಗಬೇಕು ಅರ್ಧಕ್ಕೆ ನಿಲ್ಲಿಸುವಂತಿಲ್ಲ ಎಂದು ತಾಕೀತು ಮಾಡಿರುತ್ತಾರೆ. ಇದಕ್ಕೆ ಒಪ್ಪಿ ಗಣೇಶ ಬರೆಯುತ್ತಿರುತ್ತಾನೆ. ಆದರೆ ಬರೆಯುವಾಗ ಯಾವುದೋ ಸಮಸ್ಯೆ ಎದುರಾಗುತ್ತದೆ. ತಕ್ಷಣ ಗಣೇಶ ತನ್ನ ದಂತವನ್ನು ಮುರಿದು ಅದರಲ್ಲಿ ಬರೆಯಲು ಆರಂಭಿಸಿದ ಎನ್ನುವ ನಂಬಿಕೆ ಇದೆ.

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!