ಕೋಳಿ ಸಾರು ಮಾಡ್ಲಿಲ್ಲ ಅಂತಾ ಪತ್ನಿ ಹಲ್ಲೆ; ಪತ್ನಿ ಕಳ್ಕೊಂಡು ಜೈಲು ಸೇರಿದ ಪತಿ

ಇತ್ತೀಚೆಗೆ ಗಂಡ-ಹೆಂಡತಿ ಸಣ್ಣ, ಸಣ್ಣ ವಿಷಯಗಳಿಗೂ ಬೇರ್ಪಟ್ಟು ನೆಕ್ಸ್ಟ್​ ಲೇವೆಲ್​​​ಗೆ ಹೋಗ್ತಾರೆ. ಅಂತೆಯೇ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಆಘಾತಕಾರಿ ಘಟನೆ ನಡೆದಿದೆ.

ಕೋಳಿ ಸಾರು ಮಾಡದಿದ್ದಕ್ಕೆ ಕೋಪಿಸಿಕೊಂಡ ಪತಿ ಆಕೆಯ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಆಕೆ ಜೀವವನ್ನೇ ಕಳೆದುಕೊಂಡಿದ್ದಾಳೆ. ಕೊನೆಗೆ ಪ್ರಕರಣವನ್ನು ಮುಚ್ಚಿ ಹಾಕಲು ಆರೋಪಿ ನದಿಗೆ ಎಸೆದು ಬಂದಿದ್ದ. ಕಳೆದ ಆಗಸ್ಟ್​​ನಲ್ಲಿಯೇ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.

ಆಗಿದ್ದೇನು..?
ರೀನಾ ಎಂಬ 21 ವರ್ಷದ ಹುಡುಗಿ ನಿಗಮ್ ಎಂಬಾತನ ಮದುವೆ ಆಗಿದ್ದಳು. ಕಳೆದ ಆಗಸ್ಟ್ 21 ರಂದು ನಿಗಮ್ ಮನೆಗೆ ಮದ್ಯ ಸೇವಿಸಿ ಬಂದಿದ್ದ. ಬರುವಾಗ ಚಿಕನ್ ತೆಗೆದುಕೊಂಡು ಬಂದಿದ್ದ. ಚಿಕನ್ ತಂದಿದ್ದ ಆತ, ಪತ್ನಿ ಕೋಳಿ ಸಾರು ಮಾಡುತ್ತಾಳೆ ಅಂದುಕೊಂಡಿದ್ದ. ಆದರೆ ಆಕೆ, ಮುಂಚೆಯೇ ಸಾಂಬರ್​​ಗೆ ತಯಾರಿ ಮಾಡಿದ್ದರಿಂದ ತರಕಾರಿ ಸಾರು ಮಾಡಿದ್ದಳು. ಇದರಿಂದ ಕೋಪಿಸಿಕೊಂಡು ಆತ, ರೀನಾ ಮೇಲೆ ಹಲ್ಲೆ ಮಾಡಿದ್ದಾನೆ.
ಗಂಡನ ಹಲ್ಲೆಯಿಂದ ಮನನೊಂದ ರೀನಾ ದುಡುಕಿ ನಿರ್ಧಾರಕ್ಕೆ ಬಂದು ನೇಣು ಬಿಗಿದುಕೊಂಡಿದ್ದಾಳೆ. ಹೆಂಡತಿ ಮೃತಪಟ್ಟಿರೋದು ಗೊತ್ತಾಗುತ್ತಿದ್ದಂತೆಯೇ ನಿಗಮ್ ಭಯಭೀತನಾದ. ನಂತರ ಸಂಬಂಧಿಕರ ಸಹಾಯದಿಂದ ರೀನಾಳ ಮೃತ ದೇಹವನ್ನು ಗಂಗಾ ನದಿಗೆ ಎಸೆದು ಬಂದಿದ್ದ. ನಂತರ ಪೊಲೀಸ್ ಠಾಣೆಗೆ ಹೋಗಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದ.

ತನಿಖೆಯಲ್ಲಿ ಸತ್ಯ ಬಯಲು
ಪೊಲೀಸರು ತನಿಖೆ ನಡೆಸಿದಾಗ ಸತ್ಯ ಹೊರಬಿದ್ದಿದೆ. ಮಿಸ್ಸಿಂಗ್ ಕೇಸ್ ದಾಖಲಾಗುತ್ತಿದ್ದಂತೆಯೇ ರೀನಾಳ ಕುಟುಂಬಸ್ಥರು ನಿಗಮ್ ವಿರುದ್ಧ ವರದಕ್ಷಿಣೆ ಮತ್ತು ಕಿರುಕುಳ ಕೇಸ್ ದಾಖಲಿಸಿದ್ದರು. ನಂತರ ಅಧಿಕಾರಿಗಳು ತಮ್ಮದೇ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಅಸಲಿ ವಿಚಾರ ಗೊತ್ತಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!