ಕೋಳಿ ಸಾರು ಮಾಡ್ಲಿಲ್ಲ ಅಂತಾ ಪತ್ನಿ ಹಲ್ಲೆ; ಪತ್ನಿ ಕಳ್ಕೊಂಡು ಜೈಲು ಸೇರಿದ ಪತಿ

ಇತ್ತೀಚೆಗೆ ಗಂಡ-ಹೆಂಡತಿ ಸಣ್ಣ, ಸಣ್ಣ ವಿಷಯಗಳಿಗೂ ಬೇರ್ಪಟ್ಟು ನೆಕ್ಸ್ಟ್​ ಲೇವೆಲ್​​​ಗೆ ಹೋಗ್ತಾರೆ. ಅಂತೆಯೇ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಆಘಾತಕಾರಿ ಘಟನೆ ನಡೆದಿದೆ.

ಕೋಳಿ ಸಾರು ಮಾಡದಿದ್ದಕ್ಕೆ ಕೋಪಿಸಿಕೊಂಡ ಪತಿ ಆಕೆಯ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಆಕೆ ಜೀವವನ್ನೇ ಕಳೆದುಕೊಂಡಿದ್ದಾಳೆ. ಕೊನೆಗೆ ಪ್ರಕರಣವನ್ನು ಮುಚ್ಚಿ ಹಾಕಲು ಆರೋಪಿ ನದಿಗೆ ಎಸೆದು ಬಂದಿದ್ದ. ಕಳೆದ ಆಗಸ್ಟ್​​ನಲ್ಲಿಯೇ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.

ಆಗಿದ್ದೇನು..?
ರೀನಾ ಎಂಬ 21 ವರ್ಷದ ಹುಡುಗಿ ನಿಗಮ್ ಎಂಬಾತನ ಮದುವೆ ಆಗಿದ್ದಳು. ಕಳೆದ ಆಗಸ್ಟ್ 21 ರಂದು ನಿಗಮ್ ಮನೆಗೆ ಮದ್ಯ ಸೇವಿಸಿ ಬಂದಿದ್ದ. ಬರುವಾಗ ಚಿಕನ್ ತೆಗೆದುಕೊಂಡು ಬಂದಿದ್ದ. ಚಿಕನ್ ತಂದಿದ್ದ ಆತ, ಪತ್ನಿ ಕೋಳಿ ಸಾರು ಮಾಡುತ್ತಾಳೆ ಅಂದುಕೊಂಡಿದ್ದ. ಆದರೆ ಆಕೆ, ಮುಂಚೆಯೇ ಸಾಂಬರ್​​ಗೆ ತಯಾರಿ ಮಾಡಿದ್ದರಿಂದ ತರಕಾರಿ ಸಾರು ಮಾಡಿದ್ದಳು. ಇದರಿಂದ ಕೋಪಿಸಿಕೊಂಡು ಆತ, ರೀನಾ ಮೇಲೆ ಹಲ್ಲೆ ಮಾಡಿದ್ದಾನೆ.
ಗಂಡನ ಹಲ್ಲೆಯಿಂದ ಮನನೊಂದ ರೀನಾ ದುಡುಕಿ ನಿರ್ಧಾರಕ್ಕೆ ಬಂದು ನೇಣು ಬಿಗಿದುಕೊಂಡಿದ್ದಾಳೆ. ಹೆಂಡತಿ ಮೃತಪಟ್ಟಿರೋದು ಗೊತ್ತಾಗುತ್ತಿದ್ದಂತೆಯೇ ನಿಗಮ್ ಭಯಭೀತನಾದ. ನಂತರ ಸಂಬಂಧಿಕರ ಸಹಾಯದಿಂದ ರೀನಾಳ ಮೃತ ದೇಹವನ್ನು ಗಂಗಾ ನದಿಗೆ ಎಸೆದು ಬಂದಿದ್ದ. ನಂತರ ಪೊಲೀಸ್ ಠಾಣೆಗೆ ಹೋಗಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದ.

ತನಿಖೆಯಲ್ಲಿ ಸತ್ಯ ಬಯಲು
ಪೊಲೀಸರು ತನಿಖೆ ನಡೆಸಿದಾಗ ಸತ್ಯ ಹೊರಬಿದ್ದಿದೆ. ಮಿಸ್ಸಿಂಗ್ ಕೇಸ್ ದಾಖಲಾಗುತ್ತಿದ್ದಂತೆಯೇ ರೀನಾಳ ಕುಟುಂಬಸ್ಥರು ನಿಗಮ್ ವಿರುದ್ಧ ವರದಕ್ಷಿಣೆ ಮತ್ತು ಕಿರುಕುಳ ಕೇಸ್ ದಾಖಲಿಸಿದ್ದರು. ನಂತರ ಅಧಿಕಾರಿಗಳು ತಮ್ಮದೇ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಅಸಲಿ ವಿಚಾರ ಗೊತ್ತಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!