ಅಜಯ್ ರಾವ್ ವಿರುದ್ಧ ಕುಟುಂಬ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ನೀಡಿದ ಪತ್ನಿ !

ಜನಪ್ರಿಯ ಕನ್ನಡ ನಟ ಅಜಯ್ ರಾವ್ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ಅವರು ತಮ್ಮ ಪತ್ನಿ ಸಪ್ನಾ ಜೊತೆಗೆ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ದಂಪತಿ 2014 ರ ಡಿಸೆಂಬರ್ 18 ರಂದು ಹೊಸಪೇಟೆಯಲ್ಲಿ ಪ್ರೀತಿಸಿ ಸರಳವಾಗಿ ವಿವಾಹವಾದರು. ಇವರಿಗೆ ಚರಿಷ್ಮಾ ಎಂಬ ಮಗಳಿದ್ದಾಳೆ, ಅವಳು 2019 ರಲ್ಲಿ ಜನಿಸಿದ್ದಾಳೆ. ಮದುವೆಯಾದ 11 ವರ್ಷಗಳ ನಂತರ, ಅಜಯ್ ಮತ್ತು ಸಪ್ನಾ ಬೇರ್ಪಟ್ಟಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಮಧ್ಯೆ, ಸಪ್ನಾ ಅವರು ಅಜಯ್ ರಾವ್ ವಿರುದ್ಧ ಕುಟುಂಬ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ (ಸೆಕ್ಷನ್ 12) ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಅವರ ಮಗಳು ಚರಿಷ್ಮಾ ಕೂಡ ಅಜಯ್ ವಿರುದ್ಧ ದೂರು ನೀಡಿರುವ ಬಗ್ಗೆ ವರದಿಯಾಗಿದೆ, ಆದರೆ ಈ ಪ್ರಕರಣದ ಕುರಿತು ಇನ್ನಷ್ಟು ಮಾಹಿತಿಗಳು ಬಹಿರಂಗವಾಗಬೇಕಿದೆ.

ಅಜಯ್ ರಾವ್ 2003ರಲ್ಲಿ ಬಿಡುಗಡೆಯಾದ ‘ಎಕ್ಸ್ಕ್ಯೂಸ್ ಮೀ’ ಚಿತ್ರದಿಂದ ನಾಯಕ ನಟನಾಗಿ ಸಿನಿ ಕ್ಷೇತ್ರಕ್ಕೆ ಪ್ರವೇಶಿಸಿದರು. ಇದರ ಮೊದಲು ಅವರು ‘ಕಿಚ್ಚ’ ಚಿತ್ರದ ಮೂಲಕ ಸುದೀಪ್ ಗೆಳೆಯನ ಪಾತ್ರದಲ್ಲಿ ಅಭಿನಯಿಸಿದ್ದರು. ನಂತರ ‘ತಾಜ್ ಮಹಲ್’, ‘ಪ್ರೇಮ್ ಕಹಾನಿ’, ‘ಕೃಷ್ಣನ್ ಲವ್ ಸ್ಟೋರಿ’, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ’, ‘ಕೃಷ್ಣ-ಲೀಲಾ’ ಮುಂತಾದ ಹಲವಾರು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ‘ಯುದ್ಧಕಾಂಡ 2’ ಚಿತ್ರದಲ್ಲಿ ಅವರು ನಟನೆಯ ಜೊತೆಗೆ ನಿರ್ಮಾಣ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!