ಅಜಯ್ ರಾವ್ ವಿರುದ್ಧ ಕುಟುಂಬ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ನೀಡಿದ ಪತ್ನಿ !

ಜನಪ್ರಿಯ ಕನ್ನಡ ನಟ ಅಜಯ್ ರಾವ್ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ಅವರು ತಮ್ಮ ಪತ್ನಿ ಸಪ್ನಾ ಜೊತೆಗೆ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ದಂಪತಿ 2014 ರ ಡಿಸೆಂಬರ್ 18 ರಂದು ಹೊಸಪೇಟೆಯಲ್ಲಿ ಪ್ರೀತಿಸಿ ಸರಳವಾಗಿ ವಿವಾಹವಾದರು. ಇವರಿಗೆ ಚರಿಷ್ಮಾ ಎಂಬ ಮಗಳಿದ್ದಾಳೆ, ಅವಳು 2019 ರಲ್ಲಿ ಜನಿಸಿದ್ದಾಳೆ. ಮದುವೆಯಾದ 11 ವರ್ಷಗಳ ನಂತರ, ಅಜಯ್ ಮತ್ತು ಸಪ್ನಾ ಬೇರ್ಪಟ್ಟಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಮಧ್ಯೆ, ಸಪ್ನಾ ಅವರು ಅಜಯ್ ರಾವ್ ವಿರುದ್ಧ ಕುಟುಂಬ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ (ಸೆಕ್ಷನ್ 12) ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಅವರ ಮಗಳು ಚರಿಷ್ಮಾ ಕೂಡ ಅಜಯ್ ವಿರುದ್ಧ ದೂರು ನೀಡಿರುವ ಬಗ್ಗೆ ವರದಿಯಾಗಿದೆ, ಆದರೆ ಈ ಪ್ರಕರಣದ ಕುರಿತು ಇನ್ನಷ್ಟು ಮಾಹಿತಿಗಳು ಬಹಿರಂಗವಾಗಬೇಕಿದೆ.

ಅಜಯ್ ರಾವ್ 2003ರಲ್ಲಿ ಬಿಡುಗಡೆಯಾದ ‘ಎಕ್ಸ್ಕ್ಯೂಸ್ ಮೀ’ ಚಿತ್ರದಿಂದ ನಾಯಕ ನಟನಾಗಿ ಸಿನಿ ಕ್ಷೇತ್ರಕ್ಕೆ ಪ್ರವೇಶಿಸಿದರು. ಇದರ ಮೊದಲು ಅವರು ‘ಕಿಚ್ಚ’ ಚಿತ್ರದ ಮೂಲಕ ಸುದೀಪ್ ಗೆಳೆಯನ ಪಾತ್ರದಲ್ಲಿ ಅಭಿನಯಿಸಿದ್ದರು. ನಂತರ ‘ತಾಜ್ ಮಹಲ್’, ‘ಪ್ರೇಮ್ ಕಹಾನಿ’, ‘ಕೃಷ್ಣನ್ ಲವ್ ಸ್ಟೋರಿ’, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ’, ‘ಕೃಷ್ಣ-ಲೀಲಾ’ ಮುಂತಾದ ಹಲವಾರು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ‘ಯುದ್ಧಕಾಂಡ 2’ ಚಿತ್ರದಲ್ಲಿ ಅವರು ನಟನೆಯ ಜೊತೆಗೆ ನಿರ್ಮಾಣ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!