ಪತಿ ಕೊಂ*ದು ಕಥೆ ಕಟ್ಟಿದ್ದ ಪತ್ನಿ

29 ಜೂನ್ 2026 , ಮೈಸೂರು: ಮೈಸೂರಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾ*ವಿನ ಪ್ರಕರಣ ಕೊ*ಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ ಅವರೇ ಗಂಡನನ್ನು ಹ*ತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದಂಪತಿಗೆ ಮಕ್ಕಳಿರಲಿಲ್ಲ ಸಾಂಸಾರಿಕ ಕಲಹ, ಹಣಕಾಸು ಮತ್ತು ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು 50 ವರ್ಷದ ನಿತ್ಯಾನಂದ ಅವರು ಖಾಸಗಿ ಮಹೀಂದ್ರಾ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ ಸುಶೀಲ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ನಿತ್ಯಾನಂದ ಪ್ರತಿನಿತ್ಯ ಮದ್ಯಪಾನ ಮಾಡುತ್ತಿದ್ದರು. ಶನಿವಾರ ರಾತ್ರಿ ಕೂಡ ಸ್ನೇಹಿತರೊಂದಿಗೆ ಮದ್ಯಪಾನ ಮಾಡಿ ಮನೆಗೆ ತೆರಳಿದ್ದರು. ಬಳಿಕ ಮದ್ಯದ ಅಮಲಿನಲ್ಲಿ ಮಲಗಿದ್ದ ವೇಳೆ ಪತ್ನಿ ಸುಶೀಲ ಕುತ್ತಿಗೆಗೆ ಹಗ್ಗ ಬಿಗಿದು ಹ*ತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೊ*ಲೆ ಬಳಿಕ ಘಟನೆಗೆ ಹೃದಯಾಘಾತದ ಬಣ್ಣ ನೀಡಲು ಸುಶೀಲ ಯತ್ನಿಸಿದ್ದಾಳೆ ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಬಹಳ ಹೊತ್ತಾದರೂ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ನಿತ್ಯಾನಂದ ಅವರ ಸ್ನೇಹಿತ ದರ್ಶನ್ ಹಲವು ಬಾರಿ ಕರೆ ಮಾಡಿದ್ದರು. ಕರೆಗಳಿಗೆ ಸಮರ್ಪಕ ಉತ್ತರ ಸಿಗದ ಕಾರಣ ಅವರು ಮನೆ ಬಳಿ ಬಂದು ಬಾಗಿಲು ತಟ್ಟಿದರೂ ಸುಶೀಲ ಬಾಗಿಲು ತೆರೆಯಲಿಲ್ಲ ಎಂದು ತಿಳಿದುಬಂದಿದೆ.

ಬಳಿಕ ಸುಶೀಲ ಅವರು ನಿತ್ಯಾನಂದ ಅವರ ಅಣ್ಣನಿಗೆ ಕರೆ ಮಾಡಿ, “ನಿಮ್ಮ ತಮ್ಮನಿಗೆ ಹೃದಯಾಘಾತವಾಗಿದೆ” ಎಂದು ಮಾಹಿತಿ ನೀಡಿದ್ದಾರೆ. ತಕ್ಷಣ ಮನೆಗೆ ಆಗಮಿಸಿದ ನಿತ್ಯಾನಂದ ಅವರ ಅಣ್ಣ ಮೃ*ತದೇಹವನ್ನು ಪರಿಶೀಲಿಸಿದಾಗ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳು ಕಂಡುಬಂದಿವೆ.

ಇದರಿಂದ ಅನುಮಾನಗೊಂಡ ಅವರು ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಸುಶೀಲ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲೇ ಕೊ*ಲೆ ಮಾಡಿರುವ ವಿಚಾರವನ್ನು ಸುಶೀಲ ಒಪ್ಪಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಮ*ರಣೋತ್ತರ ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆಯ ಬಳಿಕ ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

Related Posts

ಇನ್ಮೇಲೆ ಪದೇ ಪದೇ ಕರೆಂಟ್ ಹೋಗಲ್ಲ

ವಿದ್ಯುತ್ ಲೈನ್‌ಗಳ ತಪಾಸಣೆಗೆ ಲಗ್ಗೆ ಇಟ್ಟ ಅತ್ಯಾಧುನಿಕ ಡ್ರೋನ್‌ಗಳು; ಶೇ. 85 ರಷ್ಟು ತಗ್ಗಿದ ವಿದ್ಯುತ್ ವ್ಯತ್ಯಯ ಕೆಪಿಟಿಸಿಎಲ್ ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಮಾರ್ಗಗಳ ತಪಾಸಣೆಗೆ ಡ್ರೋನ್ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಇದರಿಂದ ತಾಂತ್ರಿಕ ದೋಷಗಳಿಂದ ಉಂಟಾಗುವ ವಿದ್ಯುತ್ ವ್ಯತ್ಯಯದಲ್ಲಿ ಶೇ. 85ರಷ್ಟು…

ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು!

ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಗೌರವ ಭಾವದಿಂದ ಸ್ಮರಿಸಬೇಕಾದ ದಿನ; ಆಡಳಿತಗಾರರು ಕೃತಜ್ಞತೆಯಿಂದ ನೆನಪಿಸಿಕೊಳ್ಳಬೇಕಾದ ದಿನ. ಏಕೆಂದರೆ, ಬೆಂಗಳೂರಿನಂಥ ಮಹಾಮಹಿಮ ನಗರಕ್ಕೆ ತಳಪಾಯ ಹಾಕಿದ ನಾಡಪ್ರಭುಗಳ 513ನೇ ಜನ್ಮದಿನವಿದು. ಇದನ್ನು ಸರ್ಕಾರವೇ ವಿಜೃಂಭಣೆಯಿಂದ ಆಚರಿಸುತ್ತಿದ್ದು, ‘ಬೆಂಗಳೂರಿನ ಜನಕ’ರನ್ನು ಸ್ಮರಿಸುತ್ತಿದೆ. ಈ ಮೂಲಕ,…

You Missed

“ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನಿ, ಸಿಎಂಗಳಾಗುತ್ತಾರೆ”: ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ

“ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನಿ, ಸಿಎಂಗಳಾಗುತ್ತಾರೆ”: ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ

ಪತಿ ಕೊಂ*ದು ಕಥೆ ಕಟ್ಟಿದ್ದ ಪತ್ನಿ

ಪತಿ ಕೊಂ*ದು ಕಥೆ ಕಟ್ಟಿದ್ದ ಪತ್ನಿ

ಇನ್ಮೇಲೆ ಪದೇ ಪದೇ ಕರೆಂಟ್ ಹೋಗಲ್ಲ

ಇನ್ಮೇಲೆ ಪದೇ ಪದೇ ಕರೆಂಟ್ ಹೋಗಲ್ಲ

ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು!

ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು!

ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ

ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ

ಬಂಡೀಪುರ, ನಾಗರಹೊಳೆ ಸಫಾರಿ ಪುನರಾರಂಭ ​​

ಬಂಡೀಪುರ, ನಾಗರಹೊಳೆ ಸಫಾರಿ  ಪುನರಾರಂಭ ​​