ಪತಿ ಕೊಂ*ದು ಕಥೆ ಕಟ್ಟಿದ್ದ ಪತ್ನಿ

29 ಜೂನ್ 2026 , ಮೈಸೂರು: ಮೈಸೂರಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾ*ವಿನ ಪ್ರಕರಣ ಕೊ*ಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ ಅವರೇ ಗಂಡನನ್ನು ಹ*ತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದಂಪತಿಗೆ ಮಕ್ಕಳಿರಲಿಲ್ಲ ಸಾಂಸಾರಿಕ ಕಲಹ, ಹಣಕಾಸು ಮತ್ತು ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು 50 ವರ್ಷದ ನಿತ್ಯಾನಂದ ಅವರು ಖಾಸಗಿ ಮಹೀಂದ್ರಾ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ ಸುಶೀಲ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ನಿತ್ಯಾನಂದ ಪ್ರತಿನಿತ್ಯ ಮದ್ಯಪಾನ ಮಾಡುತ್ತಿದ್ದರು. ಶನಿವಾರ ರಾತ್ರಿ ಕೂಡ ಸ್ನೇಹಿತರೊಂದಿಗೆ ಮದ್ಯಪಾನ ಮಾಡಿ ಮನೆಗೆ ತೆರಳಿದ್ದರು. ಬಳಿಕ ಮದ್ಯದ ಅಮಲಿನಲ್ಲಿ ಮಲಗಿದ್ದ ವೇಳೆ ಪತ್ನಿ ಸುಶೀಲ ಕುತ್ತಿಗೆಗೆ ಹಗ್ಗ ಬಿಗಿದು ಹ*ತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೊ*ಲೆ ಬಳಿಕ ಘಟನೆಗೆ ಹೃದಯಾಘಾತದ ಬಣ್ಣ ನೀಡಲು ಸುಶೀಲ ಯತ್ನಿಸಿದ್ದಾಳೆ ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಬಹಳ ಹೊತ್ತಾದರೂ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ನಿತ್ಯಾನಂದ ಅವರ ಸ್ನೇಹಿತ ದರ್ಶನ್ ಹಲವು ಬಾರಿ ಕರೆ ಮಾಡಿದ್ದರು. ಕರೆಗಳಿಗೆ ಸಮರ್ಪಕ ಉತ್ತರ ಸಿಗದ ಕಾರಣ ಅವರು ಮನೆ ಬಳಿ ಬಂದು ಬಾಗಿಲು ತಟ್ಟಿದರೂ ಸುಶೀಲ ಬಾಗಿಲು ತೆರೆಯಲಿಲ್ಲ ಎಂದು ತಿಳಿದುಬಂದಿದೆ.

ಬಳಿಕ ಸುಶೀಲ ಅವರು ನಿತ್ಯಾನಂದ ಅವರ ಅಣ್ಣನಿಗೆ ಕರೆ ಮಾಡಿ, “ನಿಮ್ಮ ತಮ್ಮನಿಗೆ ಹೃದಯಾಘಾತವಾಗಿದೆ” ಎಂದು ಮಾಹಿತಿ ನೀಡಿದ್ದಾರೆ. ತಕ್ಷಣ ಮನೆಗೆ ಆಗಮಿಸಿದ ನಿತ್ಯಾನಂದ ಅವರ ಅಣ್ಣ ಮೃ*ತದೇಹವನ್ನು ಪರಿಶೀಲಿಸಿದಾಗ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳು ಕಂಡುಬಂದಿವೆ.

ಇದರಿಂದ ಅನುಮಾನಗೊಂಡ ಅವರು ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಸುಶೀಲ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲೇ ಕೊ*ಲೆ ಮಾಡಿರುವ ವಿಚಾರವನ್ನು ಸುಶೀಲ ಒಪ್ಪಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಮ*ರಣೋತ್ತರ ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆಯ ಬಳಿಕ ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

Related Posts

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ಕರ್ನಾಟಕದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರು ಆರಂಭಿಸಿದ ಅಹಿಂದ ಹಾಗೂ ಸಾಮಾಜಿಕ ನ್ಯಾಯದ ಪರಂಪರೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದುವರಿಸಿದಂತೆ ಕಾಣುತ್ತಿದೆ. ಇತ್ತೀಚಿನ ಖಾತೆ ಹಂಚಿಕೆಯಲ್ಲಿ ಮಾಯಕೊಂಡ ಶಾಸಕ ಹಾಗೂ ದಲಿತ ಸಮುದಾಯದ ಮುಖಂಡ ಕೆ.ಎಸ್. ಬಸವಂತಪ್ಪ ಅವರಿಗೆ ಮುಜರಾಯಿ, ಮೀನುಗಾರಿಕೆ,…

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

You Missed

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !