ಪತಿಯ ಮನೆಯ ಮುಂದೆ ಪತ್ನಿ ಧರಣಿ ಕಾರಣ ವರದಕ್ಷಿಣೆ …!

ತುಮಕೂರಿನ ಪತಿ ಮನೆ ಮುಂದೆ ಪತ್ನಿಯ ಧರಣಿ ಸತ್ಯಾಗ್ರಹ
ಪತಿ, ಪೋಷಕರು ತನಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದ ಪ್ರೇರಣಾ
ತನ್ನ ಒಡವೆ ವಾಪಸ್ ಕೊಡುವಂತೆ ಪ್ರೇರಣಾರಿಂದ ಧರಣಿ
ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿರುವ ನವ ವಿವಾಹಿತೆ ತನ್ನ ಪತಿಯ ಮನೆಯ ಮುಂದೆ ಧರಣಿ ನಡೆಸುತ್ತಿದ್ದಾರೆ. ಮದುವೆ ವೇಳೆ ತನಗೆ ತನ್ನ ಪೋಷಕರು ನೀಡಿದ್ದ ಒಡವೆಗಳನ್ನು ಗಂಡ ಹಾಗೂ ಗಂಡನ ಮನೆಯವರು ಇಟ್ಟುಕೊಂಡಿದ್ದಾರೆ. ಅವುಗಳನ್ನು ವಾಪಸ್ ನೀಡಬೇಕೆಂದು ಆಗ್ರಹಿಸಿ ಪತಿಯ ಮನೆ ಮುಂದೆ ಪತ್ನಿ ಧರಣಿ ಆರಂಭಿಸಿದ್ದಾರೆ. ತುಮಕೂರು ನಗರದ ಸಪ್ತಗಿರಿ ಬಡಾವಣೆಯ ಪತಿ ಪ್ರಜ್ವಲ್ ಶಂಕರ್ ಮನೆ ಮುಂದೆ ಪತ್ನಿ ಪ್ರೇರಣಾ ಧರಣಿ ಆರಂಭಿಸಿದ್ದಾರೆ.
ತನಗೆ ವರದಕ್ಷಿಣೆ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ್ದಾರೆ ಎಂದು ಪತ್ನಿ ಪ್ರೇರಣಾ ಆರೋಪ ಮಾಡಿದ್ದಾರೆ. ಮನೆಯ ಮುಂದೆ ಧರಣಿ ನಡೆಸುತ್ತಿರುವ ಸೊಸೆ ಪ್ರೇರಣಾಳನ್ನು ಅತ್ತೆ, ಮಾವ, ಗಂಡ ಭೇಟಿಯಾಗದೇ ಮನೆಯೊಳಗೆ ಇದ್ದಾರೆ.
ನಾನೇ ಬೇಡವಾದ ಮೇಲೆ, ನನ್ನ ಚಿನ್ನದ ಒಡವೆಗಳನ್ನು ಏಕೆ ಇಟ್ಟುಕೊಂಡಿದ್ದೀರಿ, ಅವುಗಳನ್ನು ವಾಪಸ್ ಕೊಡಿ ಎಂದು ಪತ್ನಿ ಪ್ರೇರಣಾ ಆಗ್ರಹಿಸುತ್ತಿದ್ದಾರೆ. ಮದುವೆ ವೇಳೆ ತನಗೆ ತನ್ನ ಪೋಷಕರು 130 ಗ್ರಾಂ ಚಿನ್ನದ ಆಭರಣ ನೀಡಿದ್ದರು. ಅವುಗಳನ್ನು ತನಗೆ ವಾಪಸ್ ನೀಡಬೇಕು ಅನ್ನೋದು ಪತ್ನಿ ಪ್ರೇರಣಾ ಆಗ್ರಹ. ಈಗ ನಮ್ಮ ಅಪ್ಪ, ಅಮ್ಮ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಅವರ ಸಾಲ ತೀರಿಸಲು ನಮಗೆ ನಮ್ಮ ಒಡವೆಗಳು ವಾಪಸ್ ಬೇಕು ಎಂದು ಪತ್ನಿ ಪ್ರೇರಣಾ ಪಟ್ಟು ಹಿಡಿದಿದ್ದಾರೆ. ಮಗಳು ಪ್ರೇರಣಾ ಜೊತೆ ತಾಯಿ ಚಂದ್ರಕಲಾ ಕೂಡ ಧರಣಿ ನಡೆಸುತ್ತಿದ್ದಾರೆ.

ರಾಜ್ಯ ಮಹಿಳಾ ಆಯೋಗ ಹಾಗೂ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರತಿ, ಪ್ರೇರಣಾ-ಪ್ರಜ್ವಲ್ ಶಂಕರ್ ಮದುವೆ ಪೋಟೋ.

ಕಳೆದ ವರ್ಷದ ಆಗಸ್ಟ್ ನಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಟೌನ್ ನಿವಾಸಿ ಪ್ರೇರಣಾ ಹಾಗೂ ತುಮಕೂರಿನ ಸಪ್ತಗಿರಿ ಬಡಾವಣೆಯ ನಿವಾಸಿ ಪ್ರಜ್ವಲ್ ಶಂಕರ್ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದರು. ಮದುವೆಯಾದ ನಾಲ್ಕು ತಿಂಗಳಲ್ಲೇ ಪತಿ ಪ್ರಜ್ವಲ್ ಶಂಕರ್ ಹಾಗೂ ಪೋಷಕರು ತನಗೆ ವರದಕ್ಷಿಣೆ ಕಿರುಕುಳ ನೀಡಿದ್ದರು ಎಂದು ಪತ್ನಿ ಪ್ರೇರಣಾ ಆರೋಪಿಸಿ ತುಮಕೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನ ಮೇಲೆ ಹಲ್ಲೆ ನಡೆಸಿ, ದೈಹಿಕ, ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ತುಮಕೂರಿನ ಮಹಿಳಾ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಎರಡು ಕಡೆಯವರನ್ನು ಕರೆಸಿ, ರಾಜೀ ಸಂಧಾನ ಮಾಡಿ ಪೊಲೀಸರು ಬುದ್ದಿವಾದ ಹೇಳಿ ಕಳಿಸಿದ್ದಾರೆ. ಆದರೇ, ಮತ್ತೆ ಪತಿ ಪ್ರಜ್ವಲ್ ಶಂಕರ್ ಹಾಗೂ ಆತನ ಪೋಷಕರು ನನಗೆ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ್ದಾರೆ ಎಂದು ಪತ್ನಿ ಪ್ರೇರಣಾ ಆರೋಪಿಸಿದ್ದಾರೆ. ಈಗ ನ್ಯಾಯಕ್ಕಾಗಿ ಆಗ್ರಹಿಸಿ ರಾಜ್ಯ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ.
ತನ್ನ ಚಿನ್ನಾಭರಣಗಳನ್ನು ವಾಪಸ್ ನೀಡುವವರೆಗೂ ಪತಿಯ ಮನೆಯ ಮುಂದೆ ಧರಣಿ ಮುಂದುವರಿಸುವುದಾಗಿ ಪ್ರೇರಣಾ ಹೇಳಿದ್ದಾರೆ.

Related Posts

ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!

  ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!