ಪತಿಯ ಮನೆಯ ಮುಂದೆ ಪತ್ನಿ ಧರಣಿ ಕಾರಣ ವರದಕ್ಷಿಣೆ …!

ತುಮಕೂರಿನ ಪತಿ ಮನೆ ಮುಂದೆ ಪತ್ನಿಯ ಧರಣಿ ಸತ್ಯಾಗ್ರಹ
ಪತಿ, ಪೋಷಕರು ತನಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದ ಪ್ರೇರಣಾ
ತನ್ನ ಒಡವೆ ವಾಪಸ್ ಕೊಡುವಂತೆ ಪ್ರೇರಣಾರಿಂದ ಧರಣಿ
ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿರುವ ನವ ವಿವಾಹಿತೆ ತನ್ನ ಪತಿಯ ಮನೆಯ ಮುಂದೆ ಧರಣಿ ನಡೆಸುತ್ತಿದ್ದಾರೆ. ಮದುವೆ ವೇಳೆ ತನಗೆ ತನ್ನ ಪೋಷಕರು ನೀಡಿದ್ದ ಒಡವೆಗಳನ್ನು ಗಂಡ ಹಾಗೂ ಗಂಡನ ಮನೆಯವರು ಇಟ್ಟುಕೊಂಡಿದ್ದಾರೆ. ಅವುಗಳನ್ನು ವಾಪಸ್ ನೀಡಬೇಕೆಂದು ಆಗ್ರಹಿಸಿ ಪತಿಯ ಮನೆ ಮುಂದೆ ಪತ್ನಿ ಧರಣಿ ಆರಂಭಿಸಿದ್ದಾರೆ. ತುಮಕೂರು ನಗರದ ಸಪ್ತಗಿರಿ ಬಡಾವಣೆಯ ಪತಿ ಪ್ರಜ್ವಲ್ ಶಂಕರ್ ಮನೆ ಮುಂದೆ ಪತ್ನಿ ಪ್ರೇರಣಾ ಧರಣಿ ಆರಂಭಿಸಿದ್ದಾರೆ.
ತನಗೆ ವರದಕ್ಷಿಣೆ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ್ದಾರೆ ಎಂದು ಪತ್ನಿ ಪ್ರೇರಣಾ ಆರೋಪ ಮಾಡಿದ್ದಾರೆ. ಮನೆಯ ಮುಂದೆ ಧರಣಿ ನಡೆಸುತ್ತಿರುವ ಸೊಸೆ ಪ್ರೇರಣಾಳನ್ನು ಅತ್ತೆ, ಮಾವ, ಗಂಡ ಭೇಟಿಯಾಗದೇ ಮನೆಯೊಳಗೆ ಇದ್ದಾರೆ.
ನಾನೇ ಬೇಡವಾದ ಮೇಲೆ, ನನ್ನ ಚಿನ್ನದ ಒಡವೆಗಳನ್ನು ಏಕೆ ಇಟ್ಟುಕೊಂಡಿದ್ದೀರಿ, ಅವುಗಳನ್ನು ವಾಪಸ್ ಕೊಡಿ ಎಂದು ಪತ್ನಿ ಪ್ರೇರಣಾ ಆಗ್ರಹಿಸುತ್ತಿದ್ದಾರೆ. ಮದುವೆ ವೇಳೆ ತನಗೆ ತನ್ನ ಪೋಷಕರು 130 ಗ್ರಾಂ ಚಿನ್ನದ ಆಭರಣ ನೀಡಿದ್ದರು. ಅವುಗಳನ್ನು ತನಗೆ ವಾಪಸ್ ನೀಡಬೇಕು ಅನ್ನೋದು ಪತ್ನಿ ಪ್ರೇರಣಾ ಆಗ್ರಹ. ಈಗ ನಮ್ಮ ಅಪ್ಪ, ಅಮ್ಮ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಅವರ ಸಾಲ ತೀರಿಸಲು ನಮಗೆ ನಮ್ಮ ಒಡವೆಗಳು ವಾಪಸ್ ಬೇಕು ಎಂದು ಪತ್ನಿ ಪ್ರೇರಣಾ ಪಟ್ಟು ಹಿಡಿದಿದ್ದಾರೆ. ಮಗಳು ಪ್ರೇರಣಾ ಜೊತೆ ತಾಯಿ ಚಂದ್ರಕಲಾ ಕೂಡ ಧರಣಿ ನಡೆಸುತ್ತಿದ್ದಾರೆ.

ರಾಜ್ಯ ಮಹಿಳಾ ಆಯೋಗ ಹಾಗೂ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರತಿ, ಪ್ರೇರಣಾ-ಪ್ರಜ್ವಲ್ ಶಂಕರ್ ಮದುವೆ ಪೋಟೋ.

ಕಳೆದ ವರ್ಷದ ಆಗಸ್ಟ್ ನಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಟೌನ್ ನಿವಾಸಿ ಪ್ರೇರಣಾ ಹಾಗೂ ತುಮಕೂರಿನ ಸಪ್ತಗಿರಿ ಬಡಾವಣೆಯ ನಿವಾಸಿ ಪ್ರಜ್ವಲ್ ಶಂಕರ್ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದರು. ಮದುವೆಯಾದ ನಾಲ್ಕು ತಿಂಗಳಲ್ಲೇ ಪತಿ ಪ್ರಜ್ವಲ್ ಶಂಕರ್ ಹಾಗೂ ಪೋಷಕರು ತನಗೆ ವರದಕ್ಷಿಣೆ ಕಿರುಕುಳ ನೀಡಿದ್ದರು ಎಂದು ಪತ್ನಿ ಪ್ರೇರಣಾ ಆರೋಪಿಸಿ ತುಮಕೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನ ಮೇಲೆ ಹಲ್ಲೆ ನಡೆಸಿ, ದೈಹಿಕ, ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ತುಮಕೂರಿನ ಮಹಿಳಾ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಎರಡು ಕಡೆಯವರನ್ನು ಕರೆಸಿ, ರಾಜೀ ಸಂಧಾನ ಮಾಡಿ ಪೊಲೀಸರು ಬುದ್ದಿವಾದ ಹೇಳಿ ಕಳಿಸಿದ್ದಾರೆ. ಆದರೇ, ಮತ್ತೆ ಪತಿ ಪ್ರಜ್ವಲ್ ಶಂಕರ್ ಹಾಗೂ ಆತನ ಪೋಷಕರು ನನಗೆ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ್ದಾರೆ ಎಂದು ಪತ್ನಿ ಪ್ರೇರಣಾ ಆರೋಪಿಸಿದ್ದಾರೆ. ಈಗ ನ್ಯಾಯಕ್ಕಾಗಿ ಆಗ್ರಹಿಸಿ ರಾಜ್ಯ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ.
ತನ್ನ ಚಿನ್ನಾಭರಣಗಳನ್ನು ವಾಪಸ್ ನೀಡುವವರೆಗೂ ಪತಿಯ ಮನೆಯ ಮುಂದೆ ಧರಣಿ ಮುಂದುವರಿಸುವುದಾಗಿ ಪ್ರೇರಣಾ ಹೇಳಿದ್ದಾರೆ.

Related Posts

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

  ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

ಮೈಸೂರಿನ ಫಾಲ್ಕನ್ ಟೈರ್ಸ್ ಲಿ. ನ ಮಾಜಿ ಮಾಲೀಕ ಅಂದರ್ !

    ಬಹು ವರ್ಷಗಳ ಹಿಂದೆ ಫಾಲ್ಕನ್ ಟೈರ್ಸ್ ನ ಕಾರ್ಮಿಕರಿಗೆ ಅನ್ಯಾಯವೆಸಗಿ ಕಾರ್ಮಿಕರನ್ನು ಬೀದಿ ಪಾಲು ಮಾಡಿದ್ದ ಪವನ್ ಕುಮಾರ್ ರುಹಿಯಾ 315 ಕೋಟಿ ರೂ. ಸೈಬರ್ ವಂಚನೆ ಪ್ರತ್ಯೇಕ ಪ್ರಕರಣದಲ್ಲಿ ಪವನ್ ಕುಮಾರ್ ರುಹಿಯಾ ಬಂಧನ ಈ ಕಳ್ಳನಿಗೆ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು