4 ವರ್ಷದ ಬಳಿಕ ಕಮ್​ಬ್ಯಾಕ್ ಮಾಡ್ತಾರಾ ABD?

 

ಹೋಗುತ್ವೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಡಿವಿಲಿಯರ್ಸ್​ ಡೆಡ್ಲಿ ಬ್ಯಾಟಿಂಗ್​​​ನಾ, ಕ್ರಿಕೆಟ್ ಫ್ಯಾನ್ಸ್ ಮರೆಯೋಕೆ ಸಾಧ್ಯನೆ ಇಲ್ಲ.

ಆರ್​ಸಿಬಿಯ ರಿಯಲ್ ಟ್ರಬಲ್ ಶೂಟರ್ ಆಗಿದ್ದ ಎಬಿ ಡಿವಿಲಿಯರ್ಸ್​, ಸಿಂಗಲ್ ಶೇರ್​ನಂತೆ ಘರ್ಜಿಸುತ್ತಾ ಮ್ಯಾಚ್ ಗೆಲ್ಲಿಸುತ್ತಿದ್ದ ವೀರ. ಈ ಡೆಡ್ಲಿ ಬ್ಯಾಟರ್ ಕ್ರಿಕೆಟ್ ಮೈದಾನದಿಂದ ದೂರ ಸರಿದು ವರ್ಷಗಳೇ ಉರುಳಿವೆ. ಆದ್ರೀಗ ಇದೇ ಎಬಿ ಡಿವಿಲಿಯರ್ಸ್​, ಅಭಿಮಾನಿಗಳಲ್ಲಿ ಹೊಸ ಭರವಸೆ ಹುಟ್ಟಿಹಾಕಿದ್ದಾರೆ. ಒಂದೇ ಒಂದು ಮಾತಿನಿಂದ ಆರ್​ಸಿಬಿಗೆ ಮರಳುವ ಕನಸು ಬಿಚ್ಚಿಟ್ಟಿದ್ದಾರೆ.

ಭವಿಷ್ಯದಲ್ಲಿ ನಾನು ಬೇರೆ ಯಾವುದಾದರೂ ಪಾತ್ರದಲ್ಲಿ ಐಪಿಎಲ್‌ಗೆ ಸೇರಬಹುದು. ಆದರೆ ಒಬ್ಬ ವೃತ್ತಿಪರ ಆಟಗಾರನಾಗಿ ಇಡೀ ಸೀಸನ್ ಆಡುವುದು ಸ್ವಲ್ಪ ಕಷ್ಟ. ಆ ದಿನಗಳು ಮುಗಿದು ಹೋಗಿವೆ ಎಂದು ಭಾವಿಸುತ್ತೇನೆ. ನನ್ನ ಹೃದಯ ಆರ್‌ಸಿಬಿ ಜೊತೆಗಿದೆ. ಯಾವಾಗಲೂ ಇರುತ್ತದೆ. ಆದ್ದರಿಂದ ಫ್ರಾಂಚೈಸಿ ನನಗೆ ಒಂದು ಪಾತ್ರ ಇದೆ ಎಂದು ಭಾವಿಸಿದರೆ, ಇದಕ್ಕೆ ಪೂರಕವಾಗಿ ಸಮಯ ಕೂಡಿ ಬಂದರೆ ನಾನು ಖಂಡಿತವಾಗಿಯೂ ಆರ್‌ಸಿಬಿಯಲ್ಲಿ ಇರುತ್ತೇನೆ.

ಎಬಿ ಡಿವಿಲಿಯರ್ಸ್, ಮಾಜಿ ಕ್ರಿಕೆಟರ್​

ಐಪಿಎಲ್​ ಆರಂಭದಲ್ಲಿ ಐಪಿಎಲ್​​ಗೆ ಎಂಟ್ರಿ ನೀಡಿದ್ದ ಡಿವಿಲಿಯರ್ಸ್​, ಡೆಲ್ಲಿ ಡೇರ್ ಡೆವಿಲ್ಸ್​ ತಂಡದ ಪರ ಆಡಿದ್ದರು. ಆದ್ರೆ, ಈ ಬಳಿಕ ಆರ್​ಸಿಬಿಗೆ ಎಂಟ್ರಿ ನೀಡಿದ ಎಬಿಡಿಗೆ ಬೆಂಗಳೂರೇ 2ನೇ ತವರಾಗಿತ್ತು. 2011ರಲ್ಲಿ ಆರ್​ಸಿಬಿ ಪಾಲಿನ ಆಪತ್ಬಾಂಧವನಾಗಿ ಬಂದ ಎಬಿ ಡಿವಿಲಿಯರ್ಸ್​, ಬರೋಬ್ಬರಿ 11 ವರ್ಷಗಳ ಕಾಲ ರೆಡ್ ಆರ್ಮಿಯ ರಿಯಲ್ ಮ್ಯಾಚ್ ವಿನ್ನರ್ & ಗೇಮ್ ಚೇಂಜರ್ ಆಗಿದ್ದರು. ಆದ್ರೆ, 2021ರಲ್ಲಿ ಎಲ್ಲಾ ಮಾದರಿಯಿಂದ ದೂರ ಸರಿದಿದ್ದ ಎಬಿಡಿ, ಈಗ ಮತ್ತೆ ಆರ್​ಸಿಬಿಗೆ ಕಮ್​ಬ್ಯಾಕ್ ಮಾಡುವ ಆಸೆ ಬಿಚ್ಚಿಟ್ಟಿದ್ದಾರೆ. ಆದ್ರೆ, ಆಟಗಾರನಾಗಿ ಅಲ್ಲ.

11 ವರ್ಷ ಆರ್​ಸಿಬಿ ಪರ ಆಡಿರುವ ಎಬಿ ಡಿವಿಲಿಯರ್ಸ್​, ಮತ್ತೆ ಆರ್​ಸಿಬಿ ಗ್ಯಾಂಗ್ ಸೇರುವ ಇಚ್ಚೆ ಹೊಂದಿದ್ದಾರೆ. ಆದ್ರೆ, ಬ್ಯಾಟ್ಸ್​ಮನ್​ ಆಗಿ ಅಲ್ಲ. ಹೊಸ ರೋಲ್​ನಲ್ಲಿ ಅನ್ನೋದು ಸ್ವತಃ ಡಿವಿಲಿಯರ್ಸ್ ಹೇಳಿಕೊಂಡಿದ್ದಾರೆ. ಆರ್​ಸಿಬಿ ಯಶಸ್ಸಿನ ಭಾಗವಾಗುವ ಹೆಬ್ಬಯಕೆ ಹೊಂದಿರುವ ಡಿವಿಲಿಯರ್ಸ್​, ಬ್ಯಾಕ್ ಎಂಡ್​​ನಲ್ಲಿ ಕೆಲಸ ಮಾಡುವ ಹಿಂಟ್​ ಸಹ ನೀಡಿದ್ದಾರೆ. ಹೀಗಾಗಿ ಯಾವ ರೋಲ್​​ನಲ್ಲಿ ಮಿಸ್ಟರ್ 360 ಕಾಣಿಸಿಕೊಳ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಆರ್​ಸಿಬಿ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಎಬಿ ಡಿವಿಲಿಯರ್ಸ್​, ರೆಡ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳುವ ಕನಸು ಹೊಂದಿದ್ದಾರೆ ನಿಜ. ಆದ್ರೆ, ಆ ಕನಸು ಸಾಕಾರಗೊಳ್ಳಬೇಕಾದ್ರೆ, ಅದಕ್ಕೆ ಸಮಯ, ಸಂದರ್ಭ ಕೂಡಿ ಬರಬೇಕಿದೆ. ಇದಕ್ಕೆ ಮತ್ತಷ್ಟು ದಿನಗಳು ಕಾಯಬೇಕಿದೆ. ಆದ್ರೆ, ಎಬಿ ಡಿವಿಲಿಯರ್ಸ್ ಭವಿಷ್ಯದಲ್ಲಿ​ ಆರ್​ಸಿಬಿ ಸೇರೋದಂತೂ ಸತ್ಯ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಸ್ಟಾರ್ ಅಥ್ಲೀಟ್ ಮೊದಲಿಂದಲೂ RCB ಅಭಿಮಾನಿ….

ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ್ದು, ಫ್ರಾಂಚೈಸಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದೆ. ಕೇವಲ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು