ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ?

ಪಶ್ಚಿಮ ಏಷ್ಯಾ ಪ್ರದೇಶವು ಹೊತ್ತಿ ಉರಿಯುತ್ತಿದೆ. ಹಣವಂತರು ತಮ್ಮ ಹಣದ ಸುರಕ್ಷತೆಗೆ ಚಿನ್ನದ ಮೊರೆ ಹೋಗುತ್ತಿದ್ದಾರೆ. ಚಿನ್ನದ ಮೇಲೆ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಚಿನ್ನದ ಬೆಲೆ ಮತ್ತೆ ನಾಗಾಲೋಟ ಮಾಡುವುದು ನಿಶ್ಚಿತವಾಗಿದೆ. ತಜ್ಞರ ಪ್ರಕಾರ ಚಿನ್ನದ ಬೆಲೆ ಸದ್ಯದಲ್ಲೇ ಗ್ರಾಮ್​ಗೆ 20,000 ರೂ ಸಮೀಪ ಮುಟ್ಟಬಹುದು.

ಪಶ್ಚಿಮ ಏಷ್ಯನ್ ಪ್ರದೇಶದಲ್ಲಿ ಯುದ್ಧದ ವಾತಾವರಣ ಹೀಗೇ ಮುಂದುವರಿದರೆ ಚಿನ್ನದ ಬೆಲೆ ಹೈಜಂಪ್ ಮಾಡಿಕೊಂಡು ಸಾಗಬಹುದು ಎಂದು ಪರಿಣಿತರು ಊಹಿಸಿದ್ದಾರೆ. ಈಗಾಗಲೇ ಹೂಡಿಕೆದಾರರು ಗೋಲ್ಡ್ ಇಟಿಎಫ್​ಗಳನ್ನು ಹಣ ಹಾಕುವುದನ್ನು ಹೆಚ್ಚಿಸಿದ್ದಾರೆ. ಇದು ಇನ್ನೂ ಬಹಳಷ್ಟು ಹೆಚ್ಚಬಹುದು. ಡಾಲರ್ ಎದುರು ರುಪಾಯಿ ಮೌಲ್ಯದ ಕುಸಿತದ ಪರಿಣಾಮವೂ ಚಿನ್ನದ ಬೆಲೆ ಮೇಲೆ ಆಗಲಿದೆ.

20,000 ರೂ ಸಮೀಪಕ್ಕೆ ಚಿನ್ನದ ಬೆಲೆ?
ಸ್ಪಾಟ್ ಗೋಲ್ಡ್ ಬೆಲೆ ಒಂದು ಔನ್ಸ್​ಗೆ 5,400 ಯುಎಸ್ ಡಾಲರ್ ಇದೆ. ಅಂದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಗ್ರಾಮ್​ಗೆ 17,434 ರು ಬೆಲೆ ಇದೆ. ಈಗ ಜಾಗತಿಕವಾಗಿ ಭಯದ ವಾತಾವರಣ ತೀವ್ರಗೊಳ್ಳುತ್ತಿದ್ದು, ಇಂಥ ಸಂದರ್ಭಗಳಲ್ಲಿ ಚಿನ್ನದ ಮೇಲೆ ಹೂಡಿಕೆಗಳು ಹೆಚ್ಚುವುದು ಸ್ವಾಭಾವಿಕ. ಈಗ ಅದೇ ಆಗುತ್ತಿರುವುದು. ತಜ್ಞರು ಮಾಡಿರುವ ಅಂದಾಜು ಪ್ರಕಾರ, ಒಂದು ಔನ್ಸ್​ಗೆ 5,400 ಡಾಲರ್ ಇರುವ ಚಿನ್ನದ ಬೆಲೆ ಕೆಲ ದಿನಗಳಲ್ಲಿ 6,000 ಡಾಲರ್ ಮುಟ್ಟಬಹುದು. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ 19,400 ರೂ ಮುಟ್ಟಬಹುದು.

ವಿವಿಧ ದೇಶಗಳ ಸೆಂಟ್ರಲ್ ಬ್ಯಾಂಕುಗಳು ಚಿನ್ನದ ಖರೀದಿ ಹೆಚ್ಚಿಸಲಿವೆ. ಗೋಲ್ಡ್ ಇಟಿಎಫ್​ಗಳ ಮೇಲೆ ಹೂಡಿಕೆ ಹೆಚ್ಚಲಿವೆ. ಡಾಲರ್ ಎದುರು ರುಪಾಯಿ ಮೌಲ್ಯ ಕುಸಿಯುತ್ತಿದೆ. ಈ ಮೂರು ಅಂಶಗಳು ಚಿನ್ನದ ಬೆಲೆಯನ್ನು ಸಿಕ್ಕಾಪಟ್ಟೆ ಏರಿಸಬಹುದು. ಚಿನ್ನ ಮಾತ್ರವಲ್ಲ, ಬೆಳ್ಳಿ ಬೆಲೆಯೂ ಜಂಪ್ ಪಡೆಯಬಹುದು.ಭಾರತದಲ್ಲಿ ಚಿನ್ನದ ಬೆಲೆ ಸೋಮವಾರ ಬೆಳಗ್ಗೆ ಭರ್ಜರಿ ಇಳಿಕೆ ಕಂಡು ನಂತರ ಮತ್ತೆ ಶೇ. 4.37ರಷ್ಟು ಮೇಲೇರಿದೆ. ಅಪರಂಜಿ ಚಿನ್ನದ ಬೆಲೆ 17,000 ರೂ ಸಮೀಪಕ್ಕೆ ಹೋಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 296 ರೂ ದಾಟಿದೆ.

ಈ ಹಿನ್ನಲೆಯಲ್ಲಿ ತೈಲ ಬೆಲೆ ಏರಿಕೆ !
ಇರಾನ್ ಯುದ್ಧದ ಪರಿಣಾಮ ತೈಲ ಬೆಲೆ ಏರಿಕೆ ಆಗುವ ಭೀತಿ ಇದೆ. ಈಗಾಗಲೇ ಹೆಚ್ಚಿನ ಮಟ್ಟದಲ್ಲಿರುವ ತೈಲ ಬೆಲೆ ಬ್ಯಾರಲ್​ಗೆ 90 ಡಾಲರ್ ಮಟ್ಟದಲ್ಲೇ ಹೆಚ್ಚಿನ ಕಾಲ ಮುಂದುವರಿದರೆ ಭಾರತದ ಆರ್ಥಿಕತೆಗೆ ತುಸು ಹಿನ್ನಡೆ ತರಬಹುದು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!