ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ?

ಪಶ್ಚಿಮ ಏಷ್ಯಾ ಪ್ರದೇಶವು ಹೊತ್ತಿ ಉರಿಯುತ್ತಿದೆ. ಹಣವಂತರು ತಮ್ಮ ಹಣದ ಸುರಕ್ಷತೆಗೆ ಚಿನ್ನದ ಮೊರೆ ಹೋಗುತ್ತಿದ್ದಾರೆ. ಚಿನ್ನದ ಮೇಲೆ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಚಿನ್ನದ ಬೆಲೆ ಮತ್ತೆ ನಾಗಾಲೋಟ ಮಾಡುವುದು ನಿಶ್ಚಿತವಾಗಿದೆ. ತಜ್ಞರ ಪ್ರಕಾರ ಚಿನ್ನದ ಬೆಲೆ ಸದ್ಯದಲ್ಲೇ ಗ್ರಾಮ್​ಗೆ 20,000 ರೂ ಸಮೀಪ ಮುಟ್ಟಬಹುದು.

ಪಶ್ಚಿಮ ಏಷ್ಯನ್ ಪ್ರದೇಶದಲ್ಲಿ ಯುದ್ಧದ ವಾತಾವರಣ ಹೀಗೇ ಮುಂದುವರಿದರೆ ಚಿನ್ನದ ಬೆಲೆ ಹೈಜಂಪ್ ಮಾಡಿಕೊಂಡು ಸಾಗಬಹುದು ಎಂದು ಪರಿಣಿತರು ಊಹಿಸಿದ್ದಾರೆ. ಈಗಾಗಲೇ ಹೂಡಿಕೆದಾರರು ಗೋಲ್ಡ್ ಇಟಿಎಫ್​ಗಳನ್ನು ಹಣ ಹಾಕುವುದನ್ನು ಹೆಚ್ಚಿಸಿದ್ದಾರೆ. ಇದು ಇನ್ನೂ ಬಹಳಷ್ಟು ಹೆಚ್ಚಬಹುದು. ಡಾಲರ್ ಎದುರು ರುಪಾಯಿ ಮೌಲ್ಯದ ಕುಸಿತದ ಪರಿಣಾಮವೂ ಚಿನ್ನದ ಬೆಲೆ ಮೇಲೆ ಆಗಲಿದೆ.

20,000 ರೂ ಸಮೀಪಕ್ಕೆ ಚಿನ್ನದ ಬೆಲೆ?
ಸ್ಪಾಟ್ ಗೋಲ್ಡ್ ಬೆಲೆ ಒಂದು ಔನ್ಸ್​ಗೆ 5,400 ಯುಎಸ್ ಡಾಲರ್ ಇದೆ. ಅಂದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಗ್ರಾಮ್​ಗೆ 17,434 ರು ಬೆಲೆ ಇದೆ. ಈಗ ಜಾಗತಿಕವಾಗಿ ಭಯದ ವಾತಾವರಣ ತೀವ್ರಗೊಳ್ಳುತ್ತಿದ್ದು, ಇಂಥ ಸಂದರ್ಭಗಳಲ್ಲಿ ಚಿನ್ನದ ಮೇಲೆ ಹೂಡಿಕೆಗಳು ಹೆಚ್ಚುವುದು ಸ್ವಾಭಾವಿಕ. ಈಗ ಅದೇ ಆಗುತ್ತಿರುವುದು. ತಜ್ಞರು ಮಾಡಿರುವ ಅಂದಾಜು ಪ್ರಕಾರ, ಒಂದು ಔನ್ಸ್​ಗೆ 5,400 ಡಾಲರ್ ಇರುವ ಚಿನ್ನದ ಬೆಲೆ ಕೆಲ ದಿನಗಳಲ್ಲಿ 6,000 ಡಾಲರ್ ಮುಟ್ಟಬಹುದು. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ 19,400 ರೂ ಮುಟ್ಟಬಹುದು.

ವಿವಿಧ ದೇಶಗಳ ಸೆಂಟ್ರಲ್ ಬ್ಯಾಂಕುಗಳು ಚಿನ್ನದ ಖರೀದಿ ಹೆಚ್ಚಿಸಲಿವೆ. ಗೋಲ್ಡ್ ಇಟಿಎಫ್​ಗಳ ಮೇಲೆ ಹೂಡಿಕೆ ಹೆಚ್ಚಲಿವೆ. ಡಾಲರ್ ಎದುರು ರುಪಾಯಿ ಮೌಲ್ಯ ಕುಸಿಯುತ್ತಿದೆ. ಈ ಮೂರು ಅಂಶಗಳು ಚಿನ್ನದ ಬೆಲೆಯನ್ನು ಸಿಕ್ಕಾಪಟ್ಟೆ ಏರಿಸಬಹುದು. ಚಿನ್ನ ಮಾತ್ರವಲ್ಲ, ಬೆಳ್ಳಿ ಬೆಲೆಯೂ ಜಂಪ್ ಪಡೆಯಬಹುದು.ಭಾರತದಲ್ಲಿ ಚಿನ್ನದ ಬೆಲೆ ಸೋಮವಾರ ಬೆಳಗ್ಗೆ ಭರ್ಜರಿ ಇಳಿಕೆ ಕಂಡು ನಂತರ ಮತ್ತೆ ಶೇ. 4.37ರಷ್ಟು ಮೇಲೇರಿದೆ. ಅಪರಂಜಿ ಚಿನ್ನದ ಬೆಲೆ 17,000 ರೂ ಸಮೀಪಕ್ಕೆ ಹೋಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 296 ರೂ ದಾಟಿದೆ.

ಈ ಹಿನ್ನಲೆಯಲ್ಲಿ ತೈಲ ಬೆಲೆ ಏರಿಕೆ !
ಇರಾನ್ ಯುದ್ಧದ ಪರಿಣಾಮ ತೈಲ ಬೆಲೆ ಏರಿಕೆ ಆಗುವ ಭೀತಿ ಇದೆ. ಈಗಾಗಲೇ ಹೆಚ್ಚಿನ ಮಟ್ಟದಲ್ಲಿರುವ ತೈಲ ಬೆಲೆ ಬ್ಯಾರಲ್​ಗೆ 90 ಡಾಲರ್ ಮಟ್ಟದಲ್ಲೇ ಹೆಚ್ಚಿನ ಕಾಲ ಮುಂದುವರಿದರೆ ಭಾರತದ ಆರ್ಥಿಕತೆಗೆ ತುಸು ಹಿನ್ನಡೆ ತರಬಹುದು.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!