ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆ, ಮೈ ಮೇಲೆ ಹರಿದ ಲಾರಿ

ರಸ್ತೆಯ ತುಂಬೆಲ್ಲಾ ಗುಂಡಿಗಳು ಇದ್ದರೆ ಅದುವೇ ಮೃತ್ಯು ಕೂಪಗಳಾಗುತ್ತಿವೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಮಂಗಳೂರಿನ ಕೂಳೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆಯ ತುಂಬಾ ಗುಂಡಿ ಬಿದ್ದಿದ್ದು, ಭೀಕರ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.
ಮಂಗಳೂರು: ಕೆಲವರು ವಾಹನ ಕೈಗೆ ಸಿಕ್ಕೊಡನೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ವೇಗವಾಗಿ ವಾಹನ ಓಡಿಸುತ್ತಾರೆ. ಅದಲ್ಲದೇ, ಅತೀ ವೇಗವಾಗಿ ವಾಹನ ಓಡಿಸಿ ಅಪಘಾತಗಳಾಗಿರುವ ಸುದ್ದಿಗಳನ್ನು ನೀವು ಕೇಳಿರುತ್ತೀರಿ. ಆದರೆ ಕಳಪೆ ಕಾಮಗಾರಿಯಿಂದ ರಸ್ತೆ ತುಂಬೆಲ್ಲಾ ಗುಂಡಿಗಳು ಬೀಳುತ್ತಿದ್ದು, ಇದುವೇ ಮೃತ್ಯು ಕೂಪಗಳಾಗುತ್ತಿದೆ. ಮಂಗಳೂರಿನ ಕೂಳೂರಿನಲ್ಲಿ ನಡೆದ ಈ ಘಟನೆಯೇ ಇದಕ್ಕೆ ಸಾಕ್ಷಿಯಾಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಯಿಂದಾಗಿ ನಿಯಂತ್ರಣ ಕಳೆದುಕೊಂಡು ದ್ವಿಚಕ್ರ ವಾಹನವೊಂದು ಉರುಳಿಬಿದ್ದಿದೆ. ಈ ದ್ವಿಚಕ್ರ ವಾಹನದಲ್ಲಿದ್ದ ಮಹಿಳೆಯೊಬ್ಬರು ಚಲಿಸುತ್ತಿದ್ದ ಲಾರಿಯ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾದ ಈ ವಿಡಿಯೋದಲ್ಲಿ ಅಪಘಾತದ ದೃಶ್ಯವನ್ನು ಕಾಣಬಹುದು. ದ್ವಿಚಕ್ರ ವಾಹನ ಓಡಿಸುತ್ತಿದ್ದ ಮಹಿಳೆಯೊಬ್ಬರು ರಸ್ತೆಯ ಗುಂಡಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ವಾಹನದೊಂದಿಗೆ ರಸ್ತೆಗೆ ಉರುಳಿ ಬೀಳುವುದನ್ನು ಕಾಣಬಹುದು. ಈ ವೇಳೆಯಲ್ಲಿ ಲಾರಿಯೊಂದು ಅತಿ ವೇಗದಿಂದ ಬಂದು ರಸ್ತೆಯ ಮೇಲೆ ಬಿದ್ದಿದ್ದ ಮಹಿಳೆಯ ಮೇಲಿನಿಂದ ಸಾಗಿರುವುದನ್ನು ಕಾಣಬಹುದು. ಸೆಪ್ಟೆಂಬರ್ 9ರ ಬೆಳಗ್ಗೆ 8-30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಮೃತ ಪಟ್ಟ ಮಹಿಳೆಯನ್ನು ಮಾಧವಿ (44) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಲಾರಿ ಚಾಲಕ ಮೊಹಮ್ಮದ್ ಫಾರೂಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳೀಯ ನಿವಾಸಿಗಳು ಈ ಅಪಘಾತಕ್ಕೆ ರಸ್ತೆಯ ದುಸ್ಥಿತಿಯೇ ಕಾರಣ ಎಂದು ರಾಜಕಾರಣಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪೋಸ್ಟ್ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಬಳಕೆದಾರರೊಬ್ಬರು, ಹೆದ್ದಾರಿಗಳ ನಿರಂತರ ನಿರ್ಲಕ್ಷ್ಯ ಹಾಗೂ ಕಳಪೆ ನಿರ್ವಹಣೆ, ಇತ್ತೀಚೆಗಿನ ದಿನಗಳಲ್ಲಿ ಪುನರಾವರ್ತಿತ ಅಪಘಾತಗಳು ನಡೆಯುವುದಕ್ಕೆ ಕಾರಣವಾಗುತ್ತಿದೆ. ಈ ನಿರ್ಲಕ್ಷ್ಯಕ್ಕಾಗಿ NHAI ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ಇಂತಹ ಹೃದಯವಿದ್ರಾವಕ ಜೀವಹಾನಿಯನ್ನು ತಡೆಗಟ್ಟಲು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯನ್ನು ಹೊಂದಿರಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಗುಂಡಿಯಿಂದ ಮತ್ತೊಂದು ಬಲಿ ದುರಂತ ನಷ್ಟ ಎಂದಿದ್ದಾರೆ. ಮತ್ತೊಬ್ಬರು, ಎಂತಹ ನಾಚಿಕೆಗೇಡು ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳುವುದಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!