ನಿಂಬೆ ಹಣ್ಣಿನ ಮೇಲೆ ಕಾರ್ ಹತ್ತಿಸಲು ಹೋಗಿ ಶೋ ರೂಮ್​​ನಿಂದ ಕಾರು ಸಮೇತ ಕೆಳಗೆ ಹಾರಿದ ಮಹಿಳೆ

ಸಾಮಾನ್ಯವಾಗಿ ಹೊಸ ವಾಹನ ಖರೀದಿಸಿದರೆ, ಗಾಡಿಗೆ ಯಾವುದೇ ದೃಷ್ಟಿಯಾಗದಿರಲಿ, ತನ್ನನ್ನು ಸದಾ ಸುರಕ್ಷಿತವಾಗಿಟ್ಟಿರಲಿ ಎಂದು ಪೂಜೆ ಮಾಡಿಸುವುದು ಸಹಜ. ಹಾಗೆಯೇ ಮಹಿಳೆಯೊಬ್ಬರು ಮಹಿಂದ್ರಾ ಅವರ ಥಾರ್​ ಗಾಡಿಯನ್ನು ಖರೀದಿಸಿದ್ದರು. ಶೋ ರೂಮ್​​ನ ಮೊದಲ ಮಹಡಿಯಲ್ಲಿ ನಿಂಬೆ ಹಣ್ಣಿನ ಮೇಲೆ ಗಾಡಿಯನ್ನು ಹತ್ತಿಸಲು ಹೋಗಿ, ಮೊದಲ ಮಹಡಿಯಿಂದ ಗಾಜು ಒಡೆದು ಗಾಡಿ ಸಮೇತ ಕೆಳಗೆ ಹಾರಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಮಾನಿ ಪವಾರ್ ದೆಹಲಿಯ ನಿರ್ಮಾಣ್ ವಿಹಾರ್‌ನಲ್ಲಿರುವ ಮಹೀಂದ್ರಾ ಶೋರೂಮ್‌ಗೆ ಭೇಟಿ ನೀಡಿ, 27 ಲಕ್ಷ ರೂಪಾಯಿ ಮೌಲ್ಯದ ತಮ್ಮ ಹೊಸ ಥಾರ್ ಕಾರಿನ ಡೆಲಿವರಿ ಪಡೆದರು. ಶೋರೂಮ್‌ನಿಂದ ಕಾರನ್ನು ಹೊರಗೆ ಓಡಿಸುವ ಮೊದಲು ಪೂಜೆ ಮತ್ತು ಆಚರಣೆ ಮಾಡಲು ಪವಾರ್ ನಿರ್ಧರಿಸಿದರು. ಶೋರೂಮ್‌ನ ಮೊದಲ ಮಹಡಿಯಲ್ಲಿ ನಿಲ್ಲಿಸಲಾಗಿದ್ದ ಥಾರ್‌ನ ಚಕ್ರದ ಮುಂದೆ ನಿಂಬೆಹಣ್ಣನ್ನು ಇರಿಸಲಾಗಿತ್ತು.ಅದರ ಮೇಲೆ ನಿಧಾನವಾಗಿ ಕಾರನ್ನು ಚಲಾಯಿಸುವ ಬದಲು ಆಕ್ಸಿಲರೇಟರ್ ಒತ್ತಿದ ಪರಿಣಾಮ ನೇರವಾಗಿ ಮೊದಲ ಮಹಡಿಯಿಂದ ಕಾರು ಕೆಳಗೆ ಬಿದ್ದಿದೆ. ಪವಾರ್ ಮತ್ತು ಒಳಗೆ ಕುಳಿತಿದ್ದ ವಿಕಾಸ್ ಕಾರಿನ ಕಿಡಕಿ ಒಡೆದು ಕೆಳಗೆ ಜಂಪ್ ಮಾಡಿದ್ದ ಕಾರಣ ಅಷ್ಟಾಗಿ ಗಾಯಗಳಾಗಿಲ್ಲ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!