ನನ್ನ ಸಿನಿಮಾ ಸೋಲಲು ಅವನೇ ಕಾರಣ ಯಶ್ ತಾಯಿ ಪುಷ್ಪ ದೂರು.

ಯಶ್ ತಾಯಿ: ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪಲತಾ ಸಿನಿಮಾ ನಿರ್ಮಾಪಕಿ ಆಗಿದ್ದಾರೆ. ಅವರ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಯ್ತು. ಇದೀಗ ಯಶ್ ತಾಯಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಮ್ಮ ಸಿನಿಮಾ ಸೋಲಿಗೆ ಖ್ಯಾತ ನಿರ್ಮಾಪಕರೊಬ್ಬರು ಕಾರಣವೆಂದು ಹೆಸರು ಹೇಳಿ ಆರೋಪ ಮಾಡಿದ್ದಾರೆ. ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿರುವ ನಿರ್ಮಾಪಕಿ ಪುಷ್ಪ, ‘ನಮ್ಮ ಸಿನಿಮಾ ಸೋಲಲು ಜನರು ಕಾರಣ ಅಲ್ಲ, ಬೇರೆ ಕಾರಣ ಇದೆ. ನಮ್ಮ ಸಿನಿಮಾಕ್ಕೆ ಚಿತ್ರಮಂದಿರ ಕೊಡದೆ ತೊಂದರೆ ಮಾಡಲಾಗಿದೆ. ಅದು ಯಾರೂ ಅಲ್ಲ ಕಾರ್ತಿಕ್, ಆ ವ್ಯಕ್ತಿ ತನ್ನ ಸಿನಿಮಾಕ್ಕೆ ಚಿತ್ರಮಂದಿರಗಳನ್ನು ಇಟ್ಟುಕೊಂಡು ನಮ್ಮ ಸಿನಿಮಾಕ್ಕೆ ಸರಿಯಾಗಿ ಚಿತ್ರಮಂದಿರಗಳನ್ನು ಕೊಡದೆ ತೊಂದರೆ ಕೊಟ್ಟಿದ್ದಾರೆ. ನಾನು ಹೆಸರು ಹೇಳಿಯೇ ಆರೋಪ ಮಾಡುತ್ತೀನಿ’ ಎಂದಿದ್ದಾರೆ. ಆ ಮೂಲಕ ಕೆಆರ್​ಜಿ ನಿರ್ಮಾಣ ಸಂಸ್ಥೆಯ ನಿರ್ಮಾಪಕ ಮತ್ತು ವಿತರಕ ಕಾರ್ತಿಕ್ ಗೌಡ ಮೇಲೆ ನೇರ ಆರೋಪ ಮಾಡಿದ್ದಾರೆ.

 

‘ನಾಳೆ ನನ್ನ ಸಿನಿಮಾಗಳು ಚೆನ್ನಾಗಿ ಹೋದಾಗ ನಾನು ಸಹ ಅವರಿಗೆ ಇದೇ ಕೆಲಸ ಕೊಡುತ್ತೇನೆ. ಅವರು ಮಾಡಿದ್ದು ಸಹಿಸಿಕೊಂಡು ಇರೋಕೆ ಬಂದವಳಲ್ಲ ನಾನು, ನನಗೆ ತಿರುಗಿ ಕೊಡೋದು ಗೊತ್ತು, ಅದೇ ಕೆಲಸವನ್ನು ನಾನು ಮಾಡುತ್ತೇನೆ. ಕಾರ್ತಿಕ್ ಮಾಡಿದ್ದಾನೆ ಎಂಬುದು ನನಗೆ ಗೊತ್ತು, ಅವರ ಹಿಂದೆ ಯಾರೋ ಇದ್ದು ಈ ಕೆಲಸ ಮಾಡಿಸಿದ್ದಾರೆ. ಅದು ಯಾರು ಎಂಬುದು ಸಹ ನನಗೆ ಗೊತ್ತು, ಮುಂದಿನ ದಿನಗಳಲ್ಲಿ ಅವರ ಹೆಸರನ್ನೂ ಸಹ ಮಾಧ್ಯಮಗಳ ಮುಂದೆ ತರುತ್ತೀನಿ’ ಎಂದಿದ್ದಾರೆ ಪುಷ್ಪಲತಾ.‘ಪ್ರಪಂಚ ಗುಂಡಗಿದೆ, ಇಂದು ನನಗೆ ಆಗಿದ್ದು ನಾಳೆ ಅವರಿಗೆ ಆಗಲಿದೆ.

ಯಾರೋ ದುರುದ್ದೇಶದಿಂದಲೇ ಚಿತ್ರಮಂದಿರಗಳ ವಿಷಯದಲ್ಲಿ ನನ್ನನ್ನು ತುಳಿದಿದ್ದಾರೆ ಎಂಬುದು ನನಗೆ ಗೊತ್ತು. ಹಾಗೆಂದು ಹೆದರಿ ನಾನು ಹಿಂದಕ್ಕೆ ಹೋಗುವವಳಲ್ಲ. ನನ್ನನ್ನು ತುಳಿದಷ್ಟೂ ಸಹ ನಾನು ಎದುರು ನಿಂತುಕೊಳ್ಳುತ್ತೀನಿ. ನನ್ನ ಯಾರೂ ಕೆಣಕಬಾರದು, ಕೆಣಕಿದರೆ ನಾನಿನ್ನೂ ಡಬಲ್ ಆಗುತ್ತೀನಿ’ ಎಂದು ಎಚ್ಚರಿಕೆ ಕೊಟ್ಟಿದ್ದಾರೆ ಪುಷ್ಪ. ಕೆಆರ್​ಜಿ ಸಂಸ್ಥೆ ನಿರ್ಮಾಣ ಮಾಡಿದ್ದ ‘ಎಕ್ಕ’ ಸಿನಿಮಾ ಜುಲೈ 18ಕ್ಕೆ ಬಿಡುಗಡೆ ಆಗಿತ್ತು. ಅದಾದ ಕೆಲ ದಿನಗಳ ಬಳಿಕ ಪುಷ್ಪ ಅವರ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಬಿಡುಗಡೆ ಆಗಿತ್ತು. ಈಗ ಪುಷ್ಪ ಅವರ ಆರೋಪವೆಂದರೆ ‘ಎಕ್ಕ’ ಸಿನಿಮಾ ಪ್ರದರ್ಶನ ಆಗುತ್ತಿದ್ದ ಕಾರಣದಿಂದಾಗಿ ಕಾರ್ತಿಕ್ ಅವರು ‘ಕೊತ್ತಲವಾಡಿ’ ಸಿನಿಮಾಕ್ಕೆ ಚಿತ್ರಮಂದಿರಗಳನ್ನು ಬಿಟ್ಟುಕೊಡಲಿಲ್ಲ ಎಂದಿದ್ದಾರೆ. ಆರೋಪದ ಬಗ್ಗೆ ಕಾರ್ತಿಕ್ ಈ ವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!