ನನ್ನ ಸಿನಿಮಾ ಸೋಲಲು ಅವನೇ ಕಾರಣ ಯಶ್ ತಾಯಿ ಪುಷ್ಪ ದೂರು.

ಯಶ್ ತಾಯಿ: ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪಲತಾ ಸಿನಿಮಾ ನಿರ್ಮಾಪಕಿ ಆಗಿದ್ದಾರೆ. ಅವರ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಯ್ತು. ಇದೀಗ ಯಶ್ ತಾಯಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಮ್ಮ ಸಿನಿಮಾ ಸೋಲಿಗೆ ಖ್ಯಾತ ನಿರ್ಮಾಪಕರೊಬ್ಬರು ಕಾರಣವೆಂದು ಹೆಸರು ಹೇಳಿ ಆರೋಪ ಮಾಡಿದ್ದಾರೆ. ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿರುವ ನಿರ್ಮಾಪಕಿ ಪುಷ್ಪ, ‘ನಮ್ಮ ಸಿನಿಮಾ ಸೋಲಲು ಜನರು ಕಾರಣ ಅಲ್ಲ, ಬೇರೆ ಕಾರಣ ಇದೆ. ನಮ್ಮ ಸಿನಿಮಾಕ್ಕೆ ಚಿತ್ರಮಂದಿರ ಕೊಡದೆ ತೊಂದರೆ ಮಾಡಲಾಗಿದೆ. ಅದು ಯಾರೂ ಅಲ್ಲ ಕಾರ್ತಿಕ್, ಆ ವ್ಯಕ್ತಿ ತನ್ನ ಸಿನಿಮಾಕ್ಕೆ ಚಿತ್ರಮಂದಿರಗಳನ್ನು ಇಟ್ಟುಕೊಂಡು ನಮ್ಮ ಸಿನಿಮಾಕ್ಕೆ ಸರಿಯಾಗಿ ಚಿತ್ರಮಂದಿರಗಳನ್ನು ಕೊಡದೆ ತೊಂದರೆ ಕೊಟ್ಟಿದ್ದಾರೆ. ನಾನು ಹೆಸರು ಹೇಳಿಯೇ ಆರೋಪ ಮಾಡುತ್ತೀನಿ’ ಎಂದಿದ್ದಾರೆ. ಆ ಮೂಲಕ ಕೆಆರ್​ಜಿ ನಿರ್ಮಾಣ ಸಂಸ್ಥೆಯ ನಿರ್ಮಾಪಕ ಮತ್ತು ವಿತರಕ ಕಾರ್ತಿಕ್ ಗೌಡ ಮೇಲೆ ನೇರ ಆರೋಪ ಮಾಡಿದ್ದಾರೆ.

 

‘ನಾಳೆ ನನ್ನ ಸಿನಿಮಾಗಳು ಚೆನ್ನಾಗಿ ಹೋದಾಗ ನಾನು ಸಹ ಅವರಿಗೆ ಇದೇ ಕೆಲಸ ಕೊಡುತ್ತೇನೆ. ಅವರು ಮಾಡಿದ್ದು ಸಹಿಸಿಕೊಂಡು ಇರೋಕೆ ಬಂದವಳಲ್ಲ ನಾನು, ನನಗೆ ತಿರುಗಿ ಕೊಡೋದು ಗೊತ್ತು, ಅದೇ ಕೆಲಸವನ್ನು ನಾನು ಮಾಡುತ್ತೇನೆ. ಕಾರ್ತಿಕ್ ಮಾಡಿದ್ದಾನೆ ಎಂಬುದು ನನಗೆ ಗೊತ್ತು, ಅವರ ಹಿಂದೆ ಯಾರೋ ಇದ್ದು ಈ ಕೆಲಸ ಮಾಡಿಸಿದ್ದಾರೆ. ಅದು ಯಾರು ಎಂಬುದು ಸಹ ನನಗೆ ಗೊತ್ತು, ಮುಂದಿನ ದಿನಗಳಲ್ಲಿ ಅವರ ಹೆಸರನ್ನೂ ಸಹ ಮಾಧ್ಯಮಗಳ ಮುಂದೆ ತರುತ್ತೀನಿ’ ಎಂದಿದ್ದಾರೆ ಪುಷ್ಪಲತಾ.‘ಪ್ರಪಂಚ ಗುಂಡಗಿದೆ, ಇಂದು ನನಗೆ ಆಗಿದ್ದು ನಾಳೆ ಅವರಿಗೆ ಆಗಲಿದೆ.

ಯಾರೋ ದುರುದ್ದೇಶದಿಂದಲೇ ಚಿತ್ರಮಂದಿರಗಳ ವಿಷಯದಲ್ಲಿ ನನ್ನನ್ನು ತುಳಿದಿದ್ದಾರೆ ಎಂಬುದು ನನಗೆ ಗೊತ್ತು. ಹಾಗೆಂದು ಹೆದರಿ ನಾನು ಹಿಂದಕ್ಕೆ ಹೋಗುವವಳಲ್ಲ. ನನ್ನನ್ನು ತುಳಿದಷ್ಟೂ ಸಹ ನಾನು ಎದುರು ನಿಂತುಕೊಳ್ಳುತ್ತೀನಿ. ನನ್ನ ಯಾರೂ ಕೆಣಕಬಾರದು, ಕೆಣಕಿದರೆ ನಾನಿನ್ನೂ ಡಬಲ್ ಆಗುತ್ತೀನಿ’ ಎಂದು ಎಚ್ಚರಿಕೆ ಕೊಟ್ಟಿದ್ದಾರೆ ಪುಷ್ಪ. ಕೆಆರ್​ಜಿ ಸಂಸ್ಥೆ ನಿರ್ಮಾಣ ಮಾಡಿದ್ದ ‘ಎಕ್ಕ’ ಸಿನಿಮಾ ಜುಲೈ 18ಕ್ಕೆ ಬಿಡುಗಡೆ ಆಗಿತ್ತು. ಅದಾದ ಕೆಲ ದಿನಗಳ ಬಳಿಕ ಪುಷ್ಪ ಅವರ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಬಿಡುಗಡೆ ಆಗಿತ್ತು. ಈಗ ಪುಷ್ಪ ಅವರ ಆರೋಪವೆಂದರೆ ‘ಎಕ್ಕ’ ಸಿನಿಮಾ ಪ್ರದರ್ಶನ ಆಗುತ್ತಿದ್ದ ಕಾರಣದಿಂದಾಗಿ ಕಾರ್ತಿಕ್ ಅವರು ‘ಕೊತ್ತಲವಾಡಿ’ ಸಿನಿಮಾಕ್ಕೆ ಚಿತ್ರಮಂದಿರಗಳನ್ನು ಬಿಟ್ಟುಕೊಡಲಿಲ್ಲ ಎಂದಿದ್ದಾರೆ. ಆರೋಪದ ಬಗ್ಗೆ ಕಾರ್ತಿಕ್ ಈ ವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು