ಯಶ್ ತಾಯಿ ಪುಷ್ಪಾ ಎಚ್ಚರಿಕೆ ? ಮುಖ್ಯಮಂತ್ರಿ ಎದುರು ಹೋಗ್ತೀನಿ ದೂರು ಸ್ವೀಕರಿಸದ್ದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ !

ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರ ಆಗಸ್ಟ್ 1ರಂದು ಬಿಡುಗಡೆಯಾಯಿತು. ಸಿನಿಮಾವನ್ನು ನೋಡದೆ ನೆಗೆಟಿವ್ ವಿಮರ್ಶೆಗಳನ್ನು ಹಂಚಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಕೋರಿದ್ದಾರೆ. ಅವರು ಸಾಮಾಜಿಕ ಜಾಲತಾಣಗಳಲ್ಲಿನ ಈ ರೀತಿಯ ನಕಾರಾತ್ಮಕ ಪ್ರಚಾರದಿಂದ ಕನ್ನಡ ಚಿತ್ರರಂಗಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಆಗಸ್ಟ್ 1ರಂದು ರಿಲೀಸ್ ಆಯಿತು. ಈ ಸಿನಿಮಾಗೆ ಪೃಥ್ವಿ ಅಂಬರ್ ಹೀರೋ. ಗೋಪಾಲ್ ದೇಶಪಾಂಡೆ, ರಾಜೇಶ್ ನಟರಂಗ ಸೇರಿದಂತೆ ಅನೇಕರು ಈ ಚಿತ್ರದ ಭಾಗ ಆಗಿದ್ದಾರೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ಪುಷ್ಪಾ ಅವರು ಸಾಕಷ್ಟು ಸಂದರ್ಶನ ನೀಡಿದ್ದರು. ಸಿನಿಮಾ ರಿಲೀಸ್ ಬಳಿಕವೂ ಇದನ್ನು ಮುಂದುವರಿಸಿದ್ದಾರೆ. ಅನೇಕ ಕಡೆಗಳಲ್ಲಿ ಪುಷ್ಪಾ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಸರ್ಕಾರಕ್ಕೆ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಹಾಗೂ ವೈರತ್ವ ಇದ್ದೇ ಇದೆ. ಸಿನಿಮಾ ರಂಗ ಕೂಡ ಇದಕ್ಕೆ ಹೊರತಾಗಿಲ್ಲ. ಚಿತ್ರವನ್ನು ನೋಡದೇ ಕೆಲವರು ಸೋಶಿಯಲ್ ಮೀಡಿಯಾದಲ್ಲಿ ನೆಗೆಟಿವ್ ವಿಮರ್ಶೆ ಹಂಚುವ ಕೆಲಸ ಮಾಡುತ್ತಿದ್ದಾರಂತೆ. ಈ ರೀತಿಯ ಆರೋಪವನ್ನು ಪುಷ್ಪಾ ಮಾಡಿದ್ದಾರೆ. ಜೊತೆಗೆ ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಪುಷ್ಪಾ ಕೋರಿಕೆ.

‘ಟಾಕಿಂಗ್ ಪ್ಯಾರಟ್’ ಹೆಸರಿನ ಯೂಟ್ಯೂಬ್ ಚಾನೆಲ್​ಗೆ ಪುಷ್ಪಾ ಸಂದರ್ಶನ ನೀಡಿದ್ದಾರೆ. ‘ನಮ್ಮ ಸಿನಿಮಾದ ಪ್ರಚಾರ ನೋಡಿ ಕೆಲವರು ನೆಗೆಟಿವ್ ಟಾಕ್​ ಹಬ್ಬಿಸಿದ್ದರು. ಸಿನಿಮಾ ಮಾಡುವವರಿಗೆ ನಿಜಕ್ಕೂ ಕಷ್ಟ ಇದೆ. ಇಲ್ಲಿ ನೂರು ತೊಂದರೆ ಇದೆ. ಮುಖ್ಯಮಂತ್ರಿ ಎದುರು ಹೋಗ್ತೀನಿ. ಇದನ್ನು ತಡೆಯಿರಿ ಎಂದು ಕೇಳುತ್ತೇನೆ. ಇದು ಸರ್ಕಾರದ ಕೆಲಸ’ ಎಂದು ಪುಷ್ಪಾ ಹೇಳಿದ್ದಾರೆ.

‘ಸಿನಿಮಾ ನೋಡಿ ಬಂದರೆ ತೊಂದರೆ ಇಲ್ಲ. ಆದರೆ, ಸುಮಾರು ಜನರು ಸಿನಿಮಾ ನೋಡದೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುತ್ತಿದ್ದಾರೆ. ಇದರಿಂದ ಅನೇಕರಿಗೆ ತೊಂದರೆ ಆಗುತ್ತಿದೆ. ನಾವು ದೂರು ತೆಗೆದುಕೊಂಡು ಬಂದಾಗ ಇದನ್ನು ಸ್ವೀಕರಿಸಬೇಕು. ಇಲ್ಲವಾದಲ್ಲಿ ರಾಕ್​ಲೈನ್​ ವೆಂಕಟೇಶ್​ಗೆ ಹೇಳಿ ಉಗ್ರ ಹೋರಾಟ ಮಾಡುತ್ತೇವೆ’ ಎಂದು ಪುಷ್ಪಾ ಅವರು ಹೇಳಿದ್ದಾರೆ.

‘ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳು ಏಕೆ ಓಡುತ್ತಿಲ್ಲ ಎಂಬುದಕ್ಕೆ ಈ ರೀತಿಯ ಕುತಂತ್ರಗಳೇ ಕಾರಣ. ನನ್ನ ದುಡ್ಡು ನಾನು ತಡೆದುಕೊಳ್ಳುತ್ತೇನೆ. ಆದರೆ, ಇನ್ನೊಬ್ಬರಿಗೆ ಕಷ್ಟ ಆಗಬಹುದು. ನಾವು ಒಂದು ನಿರ್ಧಾರಕ್ಕೆ ಬರಲೇಬೇಕು. ಮುಂದಿನ ದಿನಗಳಲ್ಲಿ ಅದನ್ನು ಮಾಡಿಯೇ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.

Related Posts

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ…

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

  ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!