ರೀಲ್ಸ್ ಮಾಡಲು ಹೋಗಿ ಜಲಪಾತದಲ್ಲಿ ಕೊಚ್ಚಿಹೋದ ಯೂಟ್ಯೂಬರ್ !

ಭುವನೇಶ್ವರ ( ಒಡಿಶಾ ): ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಯೂಟ್ಯೂಬರ್ ಕೊಚ್ಚಿಹೋದ ಘಟನೆ ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ನಡೆದಿದೆ.

ದುಡುಮಾ ಜಲಪಾತದಲ್ಲಿ ಘಟನೆ ನಡೆದಿದೆ. ನೀರಿನಲ್ಲಿ ಸಿಲುಕಿ ಬೆರ್ಹಾಂಪುರ್‌ನ ಸಾಗರ್ ತುಡು (22) ಎಂಬ ಯೂಟ್ಯೂಬರ್ ನಾಪತ್ತೆಯಾಗಿದ್ದಾನೆ. ಸಾಗರ್ ತನ್ನ ಯೂಟ್ಯೂಬ್ ಚಾನೆಲ್‌ಗಾಗಿ ಪ್ರಮುಖ ಪ್ರವಾಸಿ ತಾಣಗಳ ವೀಡಿಯೋಗಳನ್ನು ಚಿತ್ರೀಕರಿಸಲು ಬಂದಿದ್ದಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ

ಕಟಕ್‌ನಿಂದ ತನ್ನ ಸ್ನೇಹಿತ ಅಭಿಜಿತ್ ಬೆಹೆರಾ ಜೊತೆ ಕೊರಾಪುಟ್‌ಗೆ ಬಂದಿದ್ದ ಸಾಗರ್ ಜಲಪಾತದಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ರೀಲ್ ರೆಕಾರ್ಡ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ಜಲಪಾತದಲ್ಲಿ ಹಠಾತ್ ನೀರಿನ ಪ್ರಮಾಣ ಏರಿಕೆಯಾದ ಪರಿಣಾಮ ಬಂಡೆಯ ಮೇಲೆ ನಿಂತಿದ್ದ ಸಾಗರ್ ಕೊಚ್ಚಿಹೋಗಿದ್ದಾನೆ. ನಾಪತ್ತೆಯಾಗಿರುವ ಸಾಗರ್‌ಗಾಗಿ ಅಗ್ನಿಶಾಮಕ ದಳ ರಕ್ಷಣಾ ಪಡೆಗಳಿಂದ ಶೋಧ ಕಾರ್ಯ ನಡೆಯುತ್ತಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!