ಅಂಬೇಡ್ಕರ್ ಅವರ ಜೀವನ ಚರಿತ್ರೆ

ಡಾ ಬಿ. ಆರ್ ಅಂಬೇಡ್ಕರ್ ರವರು 14ನೇ ಏಪ್ರಿಲ್, 1891 ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್ ನಲ್ಲಿ ಹುಟ್ಟಿದರು. ಅಂಬೇಡ್ಕರ್ ರವರು ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು. ಇವರು ಮಹಾರ‍ ಜಾತಿಯಲ್ಲಿ ಹುಟ್ಟಿದರು. ಈ ಜಾತಿಯವರು ಹೆಚ್ಚಿನ ಜನ ಬ್ರಿಟಿಷ್ ಸರ್ಕಾರದ ಮಿಲಿಟರಿ ಸೇವೆಯಲ್ಲಿ ಉದ್ಯೋಗಕ್ಕಾಗಿ ಸೇರುತ್ತಿದ್ದರು.

ಇವರ ಅಜ್ಜ ಮಾಲೋಜಿ ಸಕ್ಪಾಲ್ ಅವರು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬಾಂಬೆ ಸೇನೆಯಲ್ಲಿ ಸೇರಿ, ಹವಾಲ್ದಾರರಾಗಿ ನಿವೃತ್ತಿ ಹೊಂದಿದ್ದರು. ಇವರು ಆ ಕಾಲಕ್ಕೆ 19 ಮೆಡಲ್ ಗಳನ್ನು ಗಳಿಸಿದ್ದರು. ಇವರಿಗೆ ಇಬ್ಬರು ಮಕ್ಕಳು ರಾಮಜಿ ಸಕ್ಪಾಲ್, ಮೀರಾ ಸಕ್ಪಾಲ್. ರಾಮಜಿ ಸಕ್ಪಾಲ್ ಅವರ ಹೆಂಡತಿ ಭೀಮಬಾಯಿ. ಇವರು ಠಾಣೆ ಜಿಲ್ಲೆಯ ಮುರಬಾದಕರ್ ಎಂಬ ಕುಟುಂಬದವರು.

ಇವರ ತಂದೆ ಹಾಗೂ ಆರು ಜನ ಚಿಕ್ಕಪ್ಪಂದಿರು, ಸೈನ್ಯದಲ್ಲಿ ಸುಬೇದಾರರಾಗಿದ್ದರು.ರಾಮಜಿ ಮತ್ತು ಭೀಮಬಾಯಿ ರವರು ಇಬ್ಬರು ಕಷ್ಟ ಸಹಿಷ್ಣುಗಳಾದ ಸತಿಪತಿಗಳಾಗಿದ್ದರು. ಇವರಿಗೆ 14 ಮಕ್ಕಳು ಹುಟ್ಟಿದರು. ಈ 14ನೇ ಮಗುವೇ ಅಂಬೇಡ್ಕರ್. ಅಂಬೇಡ್ಕರ್ ಅವರ ಮೊದಲ ಹೆಸರು ಭೀಮರಾವ್ ಆಗಿತ್ತು. ಡಾ. ಅಂಬೇಡ್ಕರರು ನಾನು ನನ್ನ ತಂದೆ ತಾಯಿಯರಿಗೆ 14 ನೇ ರತ್ನನಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು.

ರಾಮಜಿ ಸಕ್ಪಾಲ್ ರವರಿಗೆ 14 ಮಕ್ಕಳಲ್ಲಿ ಬದುಕುಳಿದ್ದಿದ್ದು 5 ಜನ ಮಕ್ಕಳು, ಅವರು ಮಂಜುಳಾ, ತುಳಸಿ, ಬಲರಾಮ, ಆನಂದರಾವ್ ಮತ್ತು ಭೀಮರಾವ್. ಭೀಮರಾವ್ 2 ವರ್ಷದ ಬಾಲಕನಿದ್ದಾಗ ತಂದೆ ನೌಕರಿಯಿಂದ ನಿವೃತ್ತಿ ಹೊಂದಿದರು. ಇವರು 14 ವರ್ಷಗಳವರೆಗೆ ಮಿಲಿಟರಿ ಶಾಲೆಯಲ್ಲಿ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸಿದ್ದರು. ಇವರು ಮರಾಠಿ, ಹಿಂದಿ ಭಾಷೆಯಲ್ಲಿ ಪ್ರಬುದ್ಧ ಜ್ಞಾನ ಹೊಂದಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!