ಅಂಬೇಡ್ಕರ್ ಅವರ ಜೀವನ ಚರಿತ್ರೆ

ಡಾ ಬಿ. ಆರ್ ಅಂಬೇಡ್ಕರ್ ರವರು 14ನೇ ಏಪ್ರಿಲ್, 1891 ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್ ನಲ್ಲಿ ಹುಟ್ಟಿದರು. ಅಂಬೇಡ್ಕರ್ ರವರು ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು. ಇವರು ಮಹಾರ‍ ಜಾತಿಯಲ್ಲಿ ಹುಟ್ಟಿದರು. ಈ ಜಾತಿಯವರು ಹೆಚ್ಚಿನ ಜನ ಬ್ರಿಟಿಷ್ ಸರ್ಕಾರದ ಮಿಲಿಟರಿ ಸೇವೆಯಲ್ಲಿ ಉದ್ಯೋಗಕ್ಕಾಗಿ ಸೇರುತ್ತಿದ್ದರು.

ಇವರ ಅಜ್ಜ ಮಾಲೋಜಿ ಸಕ್ಪಾಲ್ ಅವರು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬಾಂಬೆ ಸೇನೆಯಲ್ಲಿ ಸೇರಿ, ಹವಾಲ್ದಾರರಾಗಿ ನಿವೃತ್ತಿ ಹೊಂದಿದ್ದರು. ಇವರು ಆ ಕಾಲಕ್ಕೆ 19 ಮೆಡಲ್ ಗಳನ್ನು ಗಳಿಸಿದ್ದರು. ಇವರಿಗೆ ಇಬ್ಬರು ಮಕ್ಕಳು ರಾಮಜಿ ಸಕ್ಪಾಲ್, ಮೀರಾ ಸಕ್ಪಾಲ್. ರಾಮಜಿ ಸಕ್ಪಾಲ್ ಅವರ ಹೆಂಡತಿ ಭೀಮಬಾಯಿ. ಇವರು ಠಾಣೆ ಜಿಲ್ಲೆಯ ಮುರಬಾದಕರ್ ಎಂಬ ಕುಟುಂಬದವರು.

ಇವರ ತಂದೆ ಹಾಗೂ ಆರು ಜನ ಚಿಕ್ಕಪ್ಪಂದಿರು, ಸೈನ್ಯದಲ್ಲಿ ಸುಬೇದಾರರಾಗಿದ್ದರು.ರಾಮಜಿ ಮತ್ತು ಭೀಮಬಾಯಿ ರವರು ಇಬ್ಬರು ಕಷ್ಟ ಸಹಿಷ್ಣುಗಳಾದ ಸತಿಪತಿಗಳಾಗಿದ್ದರು. ಇವರಿಗೆ 14 ಮಕ್ಕಳು ಹುಟ್ಟಿದರು. ಈ 14ನೇ ಮಗುವೇ ಅಂಬೇಡ್ಕರ್. ಅಂಬೇಡ್ಕರ್ ಅವರ ಮೊದಲ ಹೆಸರು ಭೀಮರಾವ್ ಆಗಿತ್ತು. ಡಾ. ಅಂಬೇಡ್ಕರರು ನಾನು ನನ್ನ ತಂದೆ ತಾಯಿಯರಿಗೆ 14 ನೇ ರತ್ನನಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು.

ರಾಮಜಿ ಸಕ್ಪಾಲ್ ರವರಿಗೆ 14 ಮಕ್ಕಳಲ್ಲಿ ಬದುಕುಳಿದ್ದಿದ್ದು 5 ಜನ ಮಕ್ಕಳು, ಅವರು ಮಂಜುಳಾ, ತುಳಸಿ, ಬಲರಾಮ, ಆನಂದರಾವ್ ಮತ್ತು ಭೀಮರಾವ್. ಭೀಮರಾವ್ 2 ವರ್ಷದ ಬಾಲಕನಿದ್ದಾಗ ತಂದೆ ನೌಕರಿಯಿಂದ ನಿವೃತ್ತಿ ಹೊಂದಿದರು. ಇವರು 14 ವರ್ಷಗಳವರೆಗೆ ಮಿಲಿಟರಿ ಶಾಲೆಯಲ್ಲಿ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸಿದ್ದರು. ಇವರು ಮರಾಠಿ, ಹಿಂದಿ ಭಾಷೆಯಲ್ಲಿ ಪ್ರಬುದ್ಧ ಜ್ಞಾನ ಹೊಂದಿದ್ದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು