ಸಾರಿಗೆ ವ್ಯವಸ್ಥೆ ಇರುವುದಿಲ್ಲ

ಮಾರ್ಚ್ 22 ರ ಶನಿವಾರದಂದು ಓಲಾ, ಉಬರ್, ಆಟೋ, ಸಾರಿಗೆ ವ್ಯವಸ್ಥೆಯನ್ನು ನಂಬಿ ರಸ್ತೆಗಿಳಿಯುವ ಮುನ್ನ ಜನರು ಯೋಚಿಸಬೇಕು. ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘದೊಂದಿಗೆ ಕ್ಯಾಬ್ ಚಾಲಕರು ಬಂದ್ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಯಾವುದಾದರೂ ಕೆಲಸಕ್ಕಾಗಿ ಅಥವಾ ದೈನಂದಿನ ಪ್ರಯಾಣಕ್ಕಾಗಿ ಓಲಾ, ಉಬರ್, ಆಟೋಗಳನ್ನು ಅವಲಂಬಿಸಿಕೊಂಡಿದ್ದರೆ ಸ್ವಂತ ವಾಹನದಲ್ಲಿ ತೆರಳುವುದು ಒಳ್ಳೆಯದು. ಸಾರಿಗೆ ಬಸ್ ಸಂಚಾರ ಇಲ್ಲದ ಕಾರಣ ಇದರಿಂದ ದೂರದ ಊರುಗಳಿಗೆ ತೆರಳುವವರಿಗೆ ಇದರಿಂದ ಸಮಸ್ಯೆಯಾಗಬಹುದು. ಹೀಗಾಗಿ ಬೇರೆ ಜಿಲ್ಲೆಗಳಿಗೆ ತೆರಳುವವರು ಶುಕ್ರವಾರ ಸಂಜೆಯೇ ತೆರಳುವುದು ಉತ್ತಮ.
ಬ್ಯಾಂಕ್ ಗಳು ತೆರೆದಿರುವುದಿಲ್ಲ

ಕರ್ನಾಟಕ ಬಂದ್ ಬಿಸಿ ಬ್ಯಾಂಕ್ ಗಳಿಗೆ ತಟ್ಟುವುದಿಲ್ಲವಾದರೂ ಕೂಡ ಮಾರ್ಚ್ 22 ನಾಲ್ಕನೇ ಶನಿವಾರವಾರ ಕಾರಣ ಬ್ಯಾಂಕ್ ಗಳು ತೆರೆದಿರುವುದಿಲ್ಲ. ಹೀಗಾಗಿ ಜನರು ತಮ್ಮ ಬ್ಯಾಂಕ್ ಕೆಲಸಗಳೇನಾದರೂ ಇದ್ದರೆ ಶುಕ್ರವಾರದೊಳಗೆ ಮಾಡಿ ಮುಗಿಸಿ.
ನ್ಯಾಯ ಬೆಲೆ ಅಂಗಡಿಗಳು ತೆರೆದಿರುತ್ತಾ?

ಪಡಿತರ ಚೀಟಿದಾರರು ಮಾರ್ಚ್ 22 ರಂದು ರೇಷನ್ ಅಕ್ಕಿ ತರಲು ಯೋಚಿಸಿಕೊಂಡಿದ್ದರೆ ಈ ಕೆಲಸವನ್ನು ಇಂದು ನಾಳೆಯೊಳಗೆ ಮುಗಿಸಿಕೊಳ್ಳುವುದು ಒಳ್ಳೆಯದು. ಇದೇ ಶನಿವಾರ ಕರ್ನಾಟಕ ಬಂದ್ ಇರುವ ಕಾರಣ ಈ ಬಂದ್ ಬಿಸಿ ನ್ಯಾಯ ಬೆಲೆ ಅಂಗಡಿಗಳ ಮೇಲೂ ತಟ್ಟಲಿದೆ.





