ಅ*ಚಾರವೆಸಗಿದ ಆರೋಪಿಯನ್ನು ಎತ್ತಿನಗಾಡಿಗೆ ಕಟ್ಟಿ,ಬೆತ್ತಲೆ ಮೆರವಣಿಗೆ ; ಉತ್ತರ ಪ್ರದೇಶದಲ್ಲಿ ಘಟನೆ !!!

ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಅ*ಚಾರ ಆರೋಪಿಗೆ ಊರಿನವರೇ ಸೇರಿ ಬುದ್ಧಿ ಕಲಿಸಿದ್ದಾರೆ. ಅ*ಚಾರವೆಸಗಿದ 22 ವರ್ಷದ ಯುವಕನ ದೇಹವನ್ನು ಬೆತ್ತಲೆಯಾಗಿಸಿ ಎತ್ತಿನ ಗಾಡಿಗೆ ಕಟ್ಟಿ ಹಾಕಲಾಗಿದೆ. ಹಲವಾರು ಪುರುಷರು ಮತ್ತು ಮಹಿಳೆಯರು ಛೀ ಮಾರಿ ಹಾಕುತ್ತಿರುವುದನ್ನು ಮತ್ತು ಇತರ ವ್ಯಕ್ತಿಗಳು ಥಳಿಸಲು ಹೇಳುತ್ತಿರುವುದನ್ನು ನಾವು ವಿಡಿಯೋದಲ್ಲಿ ನೋಡಬಹುದಾಗಿದೆ. ಇದೀಗ ಈ ವಿಡಿಯೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಉತ್ತರ ಪ್ರದೇಶದ ಬಹ್ರೈಚ್ನ ವಿಶೇಷ್ಗಂಜ್ ಪ್ರದೇಶದಲ್ಲಿ ಅ*ಚಾರ ನಡೆಸಿದ ಆರೋಪಿಯನ್ನು ಎತ್ತಿನ ಗಾಡಿಗೆ ಕಟ್ಟಿ, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ವಿಡಿಯೋದಲ್ಲಿ 22 ವರ್ಷದ ಯುವಕನ ದೇಹವನ್ನು ಬೆತ್ತಲೆಯಾಗಿಸಿ, ಎತ್ತಿನ ಗಾಡಿಗೆ ಕಟ್ಟಿ ಹಾಕಲಾಗಿದೆ. ಕೆಲವರು ನಾಯಿಯನ್ನು ಅವನ ಮೇಲೆ ದಾಳಿ ಮಾಡಲು ಪ್ರಚೋದಿಸುತ್ತಿರುವುದನ್ನು ಕೂಡ ವಿಡಿಯೋದಲ್ಲಿ ನೋಡಬಹುದಾಗಿದೆ.

ಇನ್ನು ಈ ವಿಷಯಕ್ಕೆ ಕುರಿತಂತೆ, ಗುರುವಾರ ಈ ವೀಡಿಯೊ ವೈರಲ್ ಆದ ನಂತರ ಆತನ ಕುಟುಂಬವು ಸ್ಥಳೀಯ ಪೊಲೀಸರಿಗೆ ದೂರು ನೀಡಿತು. “ಮಹಿಳೆಯೊಬ್ಬರ ಲಿಖಿತ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಹ*ಲ್ಲೆ ಮತ್ತು ಹಾನಿಗಾಗಿ ಎಫ್ಐಆರ್ ದಾಖಲಿಸಲಾಗಿದೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಪಾಂಡೆ ತಿಳಿಸಿದ್ದಾರೆ. ಇನ್ನು ಈ ಪ್ರಕರಣ ಎಲ್ಲಿಯವರೆಗೆ ಹೋಗಿ ಮುಟ್ಟುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!