‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್ ‘ರಾಮರಸ’ ಚಿತ್ರದಲ್ಲಿ ಮಿಂಚಿಂಗ್.

ಶರಣ್ ನಟನೆಯ ‘ಅಧ್ಯಕ್ಷ’ ಸಿನಿಮಾ ನೋಡಿದವರಿಗೆ ನಟಿ ಹೆಬಾ ಪಟೇಲ್ ಅವರ ಪರಿಚಯ ಇದ್ದೇ ಇರುತ್ತದೆ. ಅದು ಅವರ ಮೊದಲ ಸಿನಿಮಾ ಕೂಡ ಹೌದು. ಆ ಸಿನಿಮಾ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದರು. ಬಳಿಕ ಅವರಿಗೆ ತಮಿಳು, ತೆಲುಗಿನಲ್ಲಿ ಸಿಕ್ಕಾಪಟ್ಟೆ ಅವಕಾಶಗಳು ಸಿಕ್ಕವು. ಬೇಡಿಕೆಯ ನಟಿಯಾಗಿ ಅವರು ಗುರುತಿಸಿಕೊಂಡರು. ಈಗ ಮತ್ತೆ ಅವರು ಕನ್ನಡ ಚಿತ್ರರಂಗಕ್ಕೆ ಕಮ್ಬ್ಯಾಕ್ ಮಾಡುತ್ತಿದ್ದಾರೆ ಎಂಬುದು ವಿಶೇಷ. ‘ರಾಮರಸ’ ಸಿನಿಮಾದಲ್ಲಿ ಹೆಬಾ ಪಟೇಲ್ ಅವರಿಗೆ ವಿಶೇಷವಾದ ಪಾತ್ರ ಇದೆ.
ಗುರು ದೇಶಪಾಂಡೆ ಅವರು ನಿರ್ಮಾಣ ಮಾಡುತ್ತಿರುವ ‘ರಾಮರಸ’ ಸಿನಿಮಾ ಕೌತುಕ ಮೂಡಿಸಿದೆ. ಈ ಸಿನಿಮಾವನ್ನು ‘ಜಿ ಸಿನಿಮಾಸ್’ ಹಾಗೂ ‘ಸೆವೆನ್ ಸ್ಟಾರ್ ಸ್ಟುಡಿಯೋಸ್’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಬಿ.ಎಂ. ಗಿರಿರಾಜ್ ಅವರು ‘ರಾಮರಸ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈಗ ಚಿತ್ರತಂಡಕ್ಕೆ ಹೆಬಾ ಪಟೇಲ್ ಸೇರ್ಪಡೆ ಆಗಿರುವ ಸುದ್ದಿಯನ್ನು ಹಂಚಿಕೊಳ್ಳಲಾಗಿದೆ.
ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಅವರ ‘ರಾಮರಸ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾಗೆ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಹೆಬಾ ಪಟೇಲ್ ನಿಭಾಯಿಸುವ ಪಾತ್ರವನ್ನು ಈ ಸಾಲುಗಳ ಮೂಲಕ ಚಿತ್ರತಂಡ ಬಣ್ಣಿಸಿದೆ.‘ಅವಳ ಅಂದಕ್ಕೆ ಸೋತವರು, ಮಾತಿಗೆ ಮರುಳಾದವರು, ನಡಿಗೆಗೆ ನಡುಗಿದವರಾರೂ, ಭೂಮಿ ಮೇಲೆ ಉಳಿದೇ ಇಲ್ಲ. ಗಂಡಸರ ಆಸೆಗೆ ಅವಳು ಒಂದು ಮಿಸ್ಟರಿ.. ಅವಳೇ ಭ್ರಮರಿ.’
ಈ ಸಿನಿಮಾದಲ್ಲಿ ಹೆಬಾ ಪಟೇಲ್ ಅವರು ಲುಕ್ ಹೇಗಿರಲಿದೆ ಎಂಬುದನ್ನು ಕೂಡ ಚಿತ್ರತಂಡದವರು ಬಹಿರಂಗಪಡಿಸಿದ್ದಾರೆ. ತುಂಬ ಗ್ಲಾಮರಸ್ ಆಗಿ ಅವರ ಕಾಣಿಸಿಕೊಂಡಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ಮೂಲಕ ‘ರಾಮರಸ’ ಸಿನಿಮಾ ಮೇಲಿನ ಕೌತುಕ ಜಾಸ್ತಿ ಆಗಿದೆ. ನಿರ್ಮಾಣದ ಜೊತೆ ಈ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಒಂದು ವಿಶೇಷವಾದ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!