ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಖಡಕ್ ನಿಯಮ; ಸರ್ಕಾರದಿಂದ ಹೊಸ ಆದೇಶ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಂಡ ಶೂಟಿಂಗ್ ನಡೆಸುವಾಗ ನಿಯಮ ಉಲ್ಲಂಘನೆ ಆರೋಪ ಎದುರಾಗಿತ್ತು. ಈ ಬೆನ್ನಲ್ಲೇ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ.
‘ಕಾಂತಾರ ಚಾಪ್ಟರ್ 1’ ಹಾಗೂ ‘ಟಾಕ್ಸಿಕ್’ ಸಿನಿಮಾಗಳ ಶೂಟಿಂಗ್ ವೇಳೆ ಸಾಕಷ್ಟು ವಿವಾದ ಹುಟ್ಟಿಕೊಂಡಿತ್ತು. ‘ಟಾಕ್ಸಿಕ್’ ತಂಡದವರು ಮರ ಕಡಿದ ಆರೋಪ ಹೊತ್ತರೆ, ‘ಕಾಂತಾರ’ ತಂಡದವರು ಬಾಂಬ್ ಸ್ಫೋಟ್ ಮಾಡಿದ ಹಾಗೂ ಅರಣ್ಯದಲ್ಲಿ ಬೆಂಕಿ ಹಚ್ಚಿದ ಆರೋಪ ಎದುರಿಸಿದರು. ಇದು ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ.
‘ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಇತ್ಯಾದಿಗಳನ್ನು ಚಿತ್ರೀಕರಿಸಲು ಶುಲ್ಕ ಪಡೆದು ಅನುಮತಿಸಲಾಗುತ್ತಿದೆ. ಪ್ರಸ್ತುತ ಅರಣ್ಯ ಪ್ರದೇಶದ ಚಿತ್ರೀಕರಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡುತ್ತಿರುವುದು ಸರಿಯಷ್ಟೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದಾಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಚುರಗೊಂಡಿರುವುದನ್ನು ಗಮನಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
‘ಅರಣ್ಯ ಪ್ರದೇಶಗಳಲ್ಲಿ ವಿವಿಧ ಬಗೆಯ ಚಿತ್ರೀಕರಣಕ್ಕೆ ಸ್ಥಳೀಯ ಮಟ್ಟದ ಅಧಿಕಾರಿಗಳು ಅನುಮತಿಯನ್ನು ನೀಡುತ್ತಿದ್ದಾರೆ. ಇದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿಯು ಹೊರ ಜಗತ್ತಿಗೆ ದೊರೆಯುವ ಸಂಭವವಿರುತ್ತದೆ. ಅರಣ್ಯ ಮತ್ತು ವನ್ಯಜೀವಿಗಳ ಸೂಕ್ಷ್ಮತೆಯ ಅರಿವಿಲ್ಲದೆ ಪರಿಸರ ಹಾಗೂ ಜೀವ ವೈವಿಧ್ಯಕ್ಕೆ ದಕ್ಕೆ ಉಂಟಾಗುವ ಸಂಭವವಿರುತ್ತದೆ’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
‘ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳನ್ನು ಉಳಿಸುವ ಹಿತದೃಷ್ಟಿಯಿಂದ, ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಬೇಕು’ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!