ಆಂಗ್ಲರ ನಾಡಿನಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಪಾತ್ರ ನಿರ್ಣಾಯಕ….

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲು ಯಂಗ್ ಇಂಡಿಯಾ ಸಜ್ಜಾಗಿದೆ. ಈ ಯಂಗ್ ಇಂಡಿಯಾದಲ್ಲಿರುವ ಅತ್ಯಂತ ಅನುಭವಿ ಬ್ಯಾಟರ್ ಎಂದರೆ ನಮ್ಮ ಕನ್ನಡಿಗ ಕೆಎಲ್ ರಾಹುಲ್ . ಈಗಾಗಲೇ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿಯೇ ಈ ಬಾರಿ ಕನ್ನಡಿಗನ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ಈ ನಿರೀಕ್ಷೆಗಳೊಂದಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತ ಟೆಸ್ಟ್ ತಂಡದ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ರೋಹಿತ್ ಶರ್ಮಾ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಈ ಹಿಂದೆ ಹಿಟ್ಮ್ಯಾನ್ ಅನುಪಸ್ಥಿತಿಯಲ್ಲಿ ರಾಹುಲ್, ಯಶಸ್ವಿ ಜೈಸ್ವಾಲ್ ಜೊತೆ ಇನಿಂಗ್ಸ್ ಆರಂಭಿಸಿದ್ದರು.

ಹೀಗಾಗಿ ಈ ಬಾರಿ ಶುಭಾರಂಭದ ಜವಾಬ್ದಾರಿ ಕೆಎಲ್ ರಾಹುಲ್ ಹೆಗಲೇರುವುದು ಬಹುತೇಕ ಖಚಿತ. ಏಕೆಂದರೆ ಇಂಗ್ಲೆಂಡ್ನಲ್ಲಿ 9 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವ ಕೂಡ ಕೆಎಲ್ಆರ್ ಜೊತೆಗಿದೆ. ಈ ಒಂಭತ್ತು ಪಂದ್ಯಗಳಲ್ಲಿ 18 ಇನಿಂಗ್ಸ್ ಆಡಿರುವ ರಾಹುಲ್ 614 ರನ್ ಕಲೆಹಾಕಿದ್ದಾರೆ. ಅಂದರೆ 34.11 ಸರಾಸರಿಯಲ್ಲಿ ಆಂಗ್ಲರ ನಾಡಿನಲ್ಲಿ ರನ್ಗಳಿಸಿದ್ದಾರೆ .ಈ 18 ಇನಿಂಗ್ಸ್ಗಳಲ್ಲಿ ಕೆಎಲ್ ರಾಹುಲ್ ಬ್ಯಾಟ್ನಿಂದ 2 ಭರ್ಜರಿ ಶತಕಗಳು ಸಹ ಮೂಡಿಬಂದಿವೆ. ಹಾಗೆಯೇ ಒಂದು ಅರ್ಧಶತಕವನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಟೀಮ್ ಇಂಡಿಯಾದಲ್ಲಿರುವ ಬ್ಯಾಟರ್ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಕೂಡ ಕೆಎಲ್ ರಾಹುಲ್. ಇಂಗ್ಲೆಂಡ್ ವಿರುದ್ಧ ಈವರೆಗೆ 24 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ ಒಟ್ಟು 955 ರನ್ ಕಲೆಹಾಕಿದ್ದಾರೆ. ಹೀಗಾಗಿಯೇ ಆಂಗ್ಲರ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕಿದ್ದರೆ ಕನ್ನಡಿಗನ ಪಾತ್ರ ನಿರ್ಣಾಯಕವಾಗಲಿದೆ. ಈ ಜವಾಬ್ದಾರಿಯುತ ಪಾತ್ರದೊಂದಿಗೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಸೆಟೆದು ನಿಂತು ಭಾರತ ತಂಡಕ್ಕೆ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

 

 

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು