ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ’ (AM/NS India) ಪಾತ್ರವಾಗಿದೆ. ಕಂಪನಿಯ ಈ ಮಹತ್ತರ ಸಾಧನೆಯನ್ನು ಪರಿಗಣಿಸಿ, ಜಾಗತಿಕ ಮಟ್ಟದ ಪ್ರಮುಖ ಸಂಸ್ಥೆಯಾದ ‘ಅಮೆರಿಕನ್ ಬ್ಯೂರೋ ಆಫ್ ಶಿಪ್ಪಿಂಗ್’ (ಎಬಿಎಸ್) ಅಂತಾರಾಷ್ಟ್ರೀಯ ಪ್ರಮಾಣ ಪತ್ರವನ್ನೂ ನೀಡಿದ್ದು, ಇದು ಜಾಗತಿಕ ಮಟ್ಟದಲ್ಲಿ ಈ ಪೈಪ್‌ಗಳ ಗುಣಮಟ್ಟ ಹಾಗೂ ಬಲವನ್ನು ದೃಢಪಡಿಸಿದೆ.

ಈವರೆಗೆ ತೈಲ ಮತ್ತು ಅನಿಲ ಉದ್ಯಮಗಳು, ಆಫ್‌ಶೋರ್ ಗಾಳಿ ಯಂತ್ರಗಳು ಹಾಗೂ ಆಳ ಸಮುದ್ರದ ಪೈಪ್‌ಲೈನ್‌ಗಳ ನಿರ್ಮಾಣಕ್ಕೆ ಬೇಕಾಗುವ ಇಂತಹ ಬಲಿಷ್ಠ ಪೈಪ್‌ಗಳನ್ನು ಭಾರತವು ಯುರೋಪ್ ದೇಶಗಳಿಂದ ಆಮದು ಮಾಡಿಕೊಳ್ಳಬೇಕಿತ್ತು. ಆದರೆ ಇದೀಗ ಈ ಪೈಪ್‌ಗಳನ್ನು ಸಂಪೂರ್ಣವಾಗಿ ದೇಶೀಯವಾಗಿಯೇ ಉತ್ಪಾದಿಸುವ ಮೂಲಕ ‘ಆತ್ಮನಿರ್ಭರ ಭಾರತ’ ಮತ್ತು ‘ವಿಕಸಿತ್ ಭಾರತ್’ ಯೋಜನೆಗಳಿಗೆ ಬಹುದೊಡ್ಡ ಕೊಡುಗೆ ಸಿಕ್ಕಂತಾಗಿದೆ. ಇದರಿಂದಾಗಿ ಭಾರತದ ಆಫ್‌ಶೋರ್ ಮತ್ತು ಇಂಜಿನಿಯರಿಂಗ್ ವಲಯದ ಕಂಪನಿಗಳಿಗೆ ಆಮದು ವೆಚ್ಚ ಹಾಗೂ ಸಮಯ ಉಳಿಯಲಿದ್ದು, ಈಗಾಗಲೇ ದೇಶದ ಪ್ರಮುಖ ತೈಲ ಮತ್ತು ಅನಿಲ ಉತ್ಪಾದನಾ ಕಂಪನಿಯೊಂದಕ್ಕೆ ಈ ಪೈಪ್‌ಗಳನ್ನು ಭಾರಿ ಪ್ರಮಾಣದಲ್ಲಿ ಪೂರೈಸಲಾಗಿದೆ.

ಗುಜರಾತ್‌ನ ಹಜೀರಾದಲ್ಲಿರುವ ಕಂಪನಿಯ ಘಟಕದಲ್ಲಿ ‘ಸಬ್‌ಮರ್ಜ್ಡ್ ಆರ್ಕ್ ವೆಲ್ಡಿಂಗ್’ (SAW) ತಂತ್ರಜ್ಞಾನವನ್ನು ಬಳಸಿ ಈ ಪೈಪ್‌ಗಳನ್ನು ತಯಾರಿಸಲಾಗಿದೆ. ಅಮೆರಿಕನ್ ಪೆಟ್ರೋಲಿಯಂ ಇನ್‌ಸ್ಟಿಟ್ಯೂಟ್‌ನ (API) 5L X100Q ಗ್ರೇಡ್‌ಗೆ ಸಮನಾದ ಈ EQ70 ಗ್ರೇಡ್ ಪೈಪ್‌ಗಳು ಅತ್ಯಂತ ಹೆಚ್ಚಿನ ಬಲವನ್ನು (690 MPa) ಹೊಂದಿವೆ. ಇವು ಅತ್ಯಂತ ಬಲಿಷ್ಠವಾಗಿದ್ದರೂ ತೆಳುವಾಗಿ ಮತ್ತು ಹಗುರವಾಗಿರುವುದರಿಂದ ಸಮುದ್ರದ ಅಲೆಗಳು ಹಾಗೂ ಒತ್ತಡವನ್ನು ಸುಲಭವಾಗಿ ತಡೆದುಕೊಳ್ಳುತ್ತವೆ. ಪಡೆದುಕೊಂಡಿರುವ ಎಬಿಎಸ್ ಪ್ರಮಾಣಪತ್ರದಿಂದಾಗಿ, ಜಗತ್ತಿನ ಯಾವುದೇ ದೇಶದ ಸಾಗರ ಯೋಜನೆಗಳಿಗೂ ಈ ಪೈಪ್‌ಗಳನ್ನು ಪೂರೈಸುವ ಅರ್ಹತೆಯನ್ನು ಕಂಪನಿ ಪಡೆದುಕೊಂಡಿದೆ.

ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ ಜಗತ್ತಿನ ಮುಂಚೂಣಿ ಸ್ಟೀಲ್ ಉತ್ಪಾದನಾ ಸಂಸ್ಥೆಗಳಾದ ಆರ್ಸೆಲರ್ ಮಿತ್ತಲ್ ಮತ್ತು ನಿಪ್ಪಾನ್ ಸ್ಟೀಲ್ ನಡುವಿನ ಜಂಟಿ ಉದ್ಯಮವಾಗಿದೆ. ಇದು ವರ್ಷಕ್ಕೆ 90 ಲಕ್ಷ ಟನ್ ಕಚ್ಚಾ ಉಕ್ಕನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, ಆಂಧ್ರಪ್ರದೇಶದಲ್ಲಿ 82 ಲಕ್ಷ ಟನ್ ಸಾಮರ್ಥ್ಯದ ಹೊಸ ಇಂಟಿಗ್ರೇಟೆಡ್ ಸ್ಟೀಲ್ ಪ್ಲಾಂಟ್ ಅನ್ನು ಸಹ ಸ್ಥಾಪಿಸುತ್ತಿದೆ. ವಿಶೇಷವೆಂದರೆ, ಕೇಂದ್ರ ಉಕ್ಕು ಸಚಿವಾಲಯದಿಂದ ‘ಗ್ರೀನ್ ಸ್ಟೀಲ್ ಪ್ರಮಾಣಪತ್ರ’ ಪಡೆದ ಭಾರತದ ಏಕೈಕ ಇಂಟಿಗ್ರೇಟೆಡ್ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಯೂ ಇದಕ್ಕಿದೆ.

Related Posts

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಮಠ-ಮಾನ್ಯಗಳು ಮತ್ತು ಸಂಸ್ಥೆಗಳ ಆಡಳಿತದಲ್ಲಿ ಆರ್ಥಿಕ ಪಾರದರ್ಶಕತೆ ಅತ್ಯಗತ್ಯವೆಂದು ಪ್ರತಿಪಾದಿಸಿದ್ದಾರೆ. ಆಯೋಧ್ಯೆಯ ರಾಮಮಂದಿರದ ಹುಂಡಿ ಕಳ್ಳತನದ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಈ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹಾಗೂ ನ್ಯಾಯಾಲಯದಲ್ಲಿ ತನಿಖೆ…

You Missed

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!