ಆಪರೇಷನ್ ಸಿಂಧೂರ ಒಂದೊಳ್ಳೆ ರೋಚಕ ಕಥೆ ಎಂದ ನಿರ್ದೇಶಕ ….

ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಮಂದಿ ಭಾರತೀಯರು ಉಗ್ರರ ದಾಳಿಗೆ ಕೊನೆಯುಸಿರೆಳೆದಿದ್ದರು. ಇಂದು ಭಾರತ, ಪಾಕಿಸ್ತಾನಿಯರಿಗೆ ತಕ್ಕ ಪಾಠ ಕಲಿಸಿದೆ ಎಂದು ಹೇಳಬಹುದು.ಇದರ ಬೆನ್ನಲ್ಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕನ್ನಡದಲ್ಲಿ ಸಿನಿಮವಾಗುವ ಚರ್ಚೆಯಾಗುತ್ತಿದೆ.
ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಜಸ್ಟ್ 23 ನಿಮಿಷದಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನು ಏಕಕಾಲಕ್ಕೆ ಧ್ವಂಸ ಮಾಡಿರೋ ಕಾರ್ಯಾಚರಣೆ ಮೈ ಜುಮ್ಮೆನ್ನುವಂತೆ ಮಾಡಿದೆ. ಭಾರತೀಯ ಸೇನೆಯ ಈ ಯಶಸ್ವಿ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಅನ್ನೋ ಹೆಸರಿಟ್ಟಿರೋದೇ ವಿಶೇಷವಾಗಿದೆ.ಆಪರೇಷನ್ ಸಿಂಧೂರ ಪಹಲ್ಗಾಮ್‌ನಲ್ಲಿ ಸಿಂಧೂರ ಅಳಿಸಿದ ಉಗ್ರರ ಸಂಹಾರದ ಪ್ರತೀಕವಾಗಿದೆ. ಕಣ್ಣ ಮುಂದೆಯೇ ಗಂಡನನ್ನು ಕಳೆದುಕೊಂಡ ಮಹಿಳೆಯರಿಗೆ ನ್ಯಾಯ ನೀಡುವ ಭಾರತದ ಹೋರಾಟವಾಗಿದೆ. ಭಯೋತ್ಪಾದಕರ ಬುಡಕ್ಕೆ ಬೆಂಕಿ ಇಟ್ಟಿರುವ ಅಪರೇಷನ್ ಸಿಂಧೂರ ಭಾರತದ ಇತಿಹಾಸದಲ್ಲಿ ಅಚ್ಚಳಿಯದೇ ಉಳಿಯೋದರಲ್ಲೂ ಅನುಮಾನವೇ ಇಲ್ಲ.

ಆಪರೇಷನ್ ಸಿಂಧೂರದ ಬಗ್ಗೆ ಎಲ್ಲೆಲ್ಲೂ ಚರ್ಚೆಯಾಗುತ್ತಿರುವಾಗಲೇ ಆಪರೇಷನ್ ಸಿಂಧೂರ ಸಿನಿಮಾ ಆಗುತ್ತಾ ಅನ್ನೋದು ಕುತೂಹಲ ಕೆರಳಿಸಿದೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಎ.ಎಂ.ಆರ್ ರಮೇಶ್‌ ಅವರು ಈ ಬಗ್ಗೆ ಮಾತನಾಡಿ ಇದು ಒಂದೊಳ್ಳೆ ರೋಚಕ ಕಥೆ ಅನ್ನೋದ್ರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.ಸೈನೈಡ್, ಅಟ್ಟಹಾಸ ಅನ್ನೋ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಎ.ಎಂ.ಆರ್ ರಮೇಶ್ ಅವರು ಮಾತನಾಡಿ ಇಂದು ನಿಜಕ್ಕೂ ರೋಮಾಂಚನವಾಗುತ್ತಿದೆ. ಭಯೋತ್ಪಾದಕರು ಸತ್ತಿದ್ರೆ, ನಿಜಕ್ಕೂ ಖುಷಿಯ ವಿಚಾರ. ಇಂತಹದೊಂದು ಪ್ರತೀಕಾರದ ದಾಳಿಯನ್ನ ನಾವು ಎದುರು ನೋಡುತ್ತಾ ಇದ್ವಿ. ಉಗ್ರರಿಗೆ ಭಾರತೀಯ ಸೇನೆ ತಕ್ಕದಾದ ಉತ್ತರ ಕೊಟ್ಟಿದೆ ಎಂದಿದ್ದಾರೆ.

ಆಪರೇಷನ್ ಸಿಂಧೂರ ಹೆಸರಲ್ಲೇ ಒಂದು ಎಮೋಷನ್ ಇದೆ. ಸಿನಿಮಾ ಮಾಡೋಕೆ ನಿಜಕ್ಕೂ ಒಂದೊಳ್ಳೆ ಘಟನೆ ಇದು‌. ಈ ಸ್ಕ್ರೈಕ್ ಹಿಂದಿನ ಕಥೆ ಹಿಡಿದ್ರೆ ಒಂದೊಳ್ಳೆ ರೋಚಕ ಕಥೆ ಆಗುತ್ತೆ. ಯಾರಾದ್ರೂ ಈ ಸಿನಿಮಾ ಮಾಡೋರಿಗೆ ಒಳ್ಳೆಯದಾಗಲಿ. ಈಗಾಗಲೇ ಬಹುಶಃ ಯಾರಾದರೂ ಟೈಟಲ್ ರಿಜಿಸ್ಟರ್ ಮಾಡಿಸಿದ್ರೂ ಮಾಡಿಸಿರುತ್ತಾರೆ ಎಂದು ಎ.ಎಂ.ಆರ್ ರಮೇಶ್ ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!